ಕರ್ನಾಟಕ ಕಾರ್ಯನಿರತ ಪತ್ರಕರ್ತರ, ಸಂಪಾದಕರ, ವರದಿಗಾರರ ಸಂಘದ ಕಚೇರಿ ಉದ್ಘಾಟನೆ
ಉಡುಪಿ: ಪತ್ರಿಕಾರಂಗದಲ್ಲಿ ಸತ್ಯವನ್ನು ಬರೆಯುವ ಮತ್ತು ಸುಳ್ಳನ್ನು ಬರೆಯುವ ರಂಗವಿದೆ. ನಾವು ಹನ್ನೆರಡು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ, ನಮ್ಮ ಸುದ್ದಿಗಳು ಯಾವುದೇ ಮಾಧ್ಯಮಗಳಲ್ಲಿ ಬರುತ್ತಿಲ್ಲ ಎಂದು ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ, ಸಂಪಾದಕರ ಹಾಗೂ ವರದಿಗಾರರ ಸಂಘ (ರಿ) ವತಿಯಿಂದ ಜಿಲ್ಲಾ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಷ್ಟೇ ದೊಡ್ಡವರು ತಪ್ಪು ಮಾಡಿದರೂ ಪತ್ರಕರ್ತರು ಸತ್ಯವನ್ನೇ ಬರೆಯಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ, ಸಂಪಾದಕರ ಹಾಗೂ ವರದಿಗಾರರ ಸಂಘದ ರಾಜ್ಯಾಧ್ಯಕ್ಷರಾದ ಶಶಿಕಾಂತ್, ರಾಜ್ಯ ಸಂಚಾಲಕರಾದ ಯಶಸ್ವಿನಿ, ವಿಭಾಗೀಯ ಅಧ್ಯಕ್ಷರಾದ ವಿಜಯ್ ಮುನಿಯಪ್ಪ, ಪ್ರಚಾರ ಸಮಿತಿ ಅಧ್ಯಕ್ಷರಾದ ಆರತಿ ಗಿಳಿಯಾರ್ (ಉಡುಪಿ) ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಪತ್ರಕರ್ತರ ಹಿತಾಸಕ್ತಿ, ಸಂಘದ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಮಾಧ್ಯಮ ಕ್ಷೇತ್ರದ ಸವಾಲುಗಳು ಕುರಿತಾಗಿ ಚರ್ಚೆ ನಡೆಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4