nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ

    October 7, 2025

    ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು

    October 7, 2025

    ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ: ಜಾನ್ಸನ್ ಘೋಡೆ ತೀವ್ರ ಖಂಡನೆ

    October 7, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    • ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು
    • ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ: ಜಾನ್ಸನ್ ಘೋಡೆ ತೀವ್ರ ಖಂಡನೆ
    • ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ
    • ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ
    • ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ
    • ಖಾತೆದಾರನ ಗಮನಕ್ಕೆ ಬಾರದೇ ಫೋನ್ ಪೇಯಲ್ಲಿ 7.87 ಲಕ್ಷ ವರ್ಗಾವಣೆ!: ದೂರು ದಾಖಲು
    • ಖಾಸಗಿ ಕಂಪನಿ ಉದ್ಯೋಗ ತೊರೆದು ಏಲಕ್ಕಿ ಬಾಳೆ ಬೆಳೆದು ಲಾಭ ಗಳಿಸಿದ ರೈತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಕಾಯ್ದೆ ಅನುಷ್ಠಾನಕ್ಕಾಗಿ ಆಂತರಿಕ ದೂರು ನಿವಾರಣಾ ಸಮಿತಿ ರಚನೆ
    ತುಮಕೂರು March 22, 2025

    ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಕಾಯ್ದೆ ಅನುಷ್ಠಾನಕ್ಕಾಗಿ ಆಂತರಿಕ ದೂರು ನಿವಾರಣಾ ಸಮಿತಿ ರಚನೆ

    By adminMarch 22, 2025No Comments2 Mins Read
    dr n tippeswamy

    ತುಮಕೂರು:  ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರಿ ಕಚೇರಿ ಮತ್ತು ಅಧೀನ ಕಚೇರಿ, ಸಾರ್ವಜನಿಕ ಉದ್ದಿಮೆಗಳಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಗಳನ್ನು ರಚಿಸಬೇಕೆಂದು ಕಚೇರಿ ಮುಖ್ಯಸ್ಥರಿಗೆ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ ನೀಡಿದ್ದಾರೆ.

    ರಚಿಸಲಾದ ದೂರು ನಿವಾರಣಾ ಸಮಿತಿಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇ ಮಾಡುವುದು ಕಚೇರಿಯ ಮುಖ್ಯಸ್ಥರ ಕರ್ತವ್ಯವಾಗಿರುತ್ತದೆ. ಕಚೇರಿ ಮುಖ್ಯಸ್ಥರು, ಕಚೇರಿ ಮತ್ತು ಅಧೀನ ಕಚೇರಿ/ಖಾಸಗಿ ಸಂಸ್ಥೆ/ಕಾರ್ಖಾನೆ, ಶಾಲಾ–ಕಾಲೇಜುಗಳಲ್ಲಿ 10ಕ್ಕಿಂತ ಹೆಚ್ಚು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಲ್ಲಿ ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚನೆ ಮಾಡಬೇಕು. ಸಮಿತಿ ರಚನೆ ಮಾಡಿದ ಮಾಹಿತಿಯನ್ನು SHE–Box ವೆಬ್‌ ಸೈಟ್ ವಿಳಾಸ: https://shebox.wcd.gov.in/signin ನಲ್ಲಿ ಆಪ್‌ಲೋಡ್ ಮಾಡಲು ಕ್ರಮವಹಿಸಬೇಕು.


    Provided by
    Provided by
    Provided by

    ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಕಚೇರಿ, ನಿಗಮ-ಮಂಡಳಿ, ಸಾರ್ವಜನಿಕ ಉದ್ದಿಮೆ, ಕಾರ್ಖಾನೆ, ಗಾರ್ಮೆಂಟ್ಸ್, ವಿಶ್ವವಿದ್ಯಾಲಯ, ಶಾಲಾ–ಕಾಲೇಜು, ಸಂಘ–ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ, ಖಾಸಗಿ ಸಂಸ್ಥೆ, ಅಂಚೆ ಕಚೇರಿ, ಬ್ಯಾಂಕ್‌ ಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿ ಮೇಲಿನ ಲೈಂಗಿಕ ಕಿರುಕುಳ ತಡೆಯಲು ಹಾಗೂ ಸ್ವೀಕೃತವಾದ ದೂರುಗಳನ್ನು ಪರಿಹರಿಸಲು 2013ರ ಅಧಿನಿಯಮವನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿದೆ.

    ಆಂತರಿಕ ದೂರು ಸಮಿತಿ ರಚನೆಯಾಗದಿರುವ ಎಲ್ಲಾ ಸರ್ಕಾರಿ ಕಚೇರಿ, ನಿಗಮ, ಮಂಡಳಿಗಳಲ್ಲದೆ ಜಿಲ್ಲಾ ಮಟ್ಟದ ಅಧೀನ ಕಚೇರಿಗಳಲ್ಲಿಯೂ ಸಹ ಆಂತರಿಕ ದೂರು ನಿವಾರಣಾ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು. ಈಗಾಗಲೇ ದೂರು ಸಮಿತಿ ರಚನೆಯಾಗಿದ್ದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಬೇಕು. ಆಂತರಿಕ ದೂರು ಸಮಿತಿಯ ವಿವರಗಳನ್ನು ಪರಿಷ್ಕೃತ ವೆಬ್‌ ನಲ್ಲಿ (https://shebox.wcd.gov.in/signin) ಕಾಲೋಚಿತಗೊಳಿಸ(Upload)ಬೇಕು. ಲೈಂಗಿಕ ಕಿರುಕುಳ ತಡೆಗಟ್ಟುವ ಕಾಯ್ದೆಯ ಪ್ರತಿಯೊಂದು ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಖಚಿತಪಡಿಸಬೇಕು.

    ಔಪಚಾರಿಕ ಮತ್ತು ಔಪಚಾರಿಕವಲ್ಲದ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಲೈಂಗಿಕ ಕಿರುಕುಳದಿಂದ ಮುಕ್ತವಾದ ಸುರಕ್ಷಿತ ಕೆಲಸದ ವಾತಾವರಣವನ್ನು ಕಡ್ಡಾಯವಾಗಿ ಜಾರಿಗೆ ತರಬೇಕು.

    ಆಂತರಿಕ ದೂರು ನಿವಾರಣಾ ಸಮಿತಿ ರಚನೆ ಕುರಿತು ಸುಪ್ರೀಂಕೋರ್ಟ್ ಗೆ ವರದಿ ಸಲ್ಲಿಸಬೇಕಾಗಿದ್ದು, ಸಮಿತಿ ರಚಿಸಿರುವ ಕುರಿತ ಮಾಹಿತಿಯನ್ನು ಮಾರ್ಚ್ 26ರೊಳಗಾಗಿ ವೆಬ್‌ ಸೈಟ್‌ ನಲ್ಲಿ ಆಪ್‌ ಲೋಡ್ ಮಾಡಬೇಕು ಹಾಗೂ ಜಿಲ್ಲಾಧಿಕಾರಿಗಳ ಕಚೇರಿ/ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7846941493, 7022895946 ಮತ್ತು 9743457210ಯನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ

    October 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ

    October 7, 2025

    ಸರಗೂರು‌: ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಈ ದಿನ ಜನಿಸಿದರು ಎಂಬುದಕ್ಕಾಗಿ ಈ ದಿನಕ್ಕೆ ವಾಲ್ಮೀಕಿ ಜಯಂತಿ ಎನ್ನುವ ಹೆಸರು…

    ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು

    October 7, 2025

    ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ: ಜಾನ್ಸನ್ ಘೋಡೆ ತೀವ್ರ ಖಂಡನೆ

    October 7, 2025

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.