nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಿಗಳು ದರ್ಪ ಬಿಟ್ಟು ಜನರಿಗೆ ಸ್ಪಂದಿಸಿ: ಲೋಕಾಯುಕ್ತ ಅಧೀಕ್ಷಕ ಲಕ್ಷ್ಮೀನಾರಾಯಣ್
    ಮಧುಗಿರಿ March 24, 2025

    ಅಧಿಕಾರಿಗಳು ದರ್ಪ ಬಿಟ್ಟು ಜನರಿಗೆ ಸ್ಪಂದಿಸಿ: ಲೋಕಾಯುಕ್ತ ಅಧೀಕ್ಷಕ ಲಕ್ಷ್ಮೀನಾರಾಯಣ್

    By adminMarch 24, 2025No Comments3 Mins Read
    lokayuktha

    ಮಧುಗಿರಿ: ಸಾರ್ವಜನಿಕರ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ ಹಾಗೂ ಅಧಿಕಾರದ ದರ್ಪ ಎದ್ದು ಕಾಣುತ್ತಿದ್ದು, ಜನಸೇವೆಯ ಮನೋಭಾವ ಕಾಣುತ್ತಿಲ್ಲ ಹಾಗೂ ಇಂದು ಕರೆದಿರುವ ಸಭೆಗೆ ಸಾರ್ವಜನಿಕರು ಬಾರದಿರುವ ಬಗ್ಗೆ ಪ್ರಚಾರದ ಕೊರತೆಯ ಬಗ್ಗೆಗೂ ಲೋಕಾಯುಕ್ತ ಅಧೀಕ್ಷಕ ಲಕ್ಷ್ಮೀನಾರಾಯಣ್ ಅಸಮಾಧಾನ ವ್ಯಕ್ತಪಡಿಸಿದರು.

    ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ನಡೆದ ಲೋಕಾಯುಕ್ತ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಭೆಗೆ ಕನಿಷ್ಟ 10 ದೂರುಗಳು ಬಂದಿಲ್ಲ. ಯಾಕೆ ಸಾರ್ವ ಜನಿಕರಿಗೆ ಮಾಹಿತಿ ನೀಡಿಲ್ಲವೇ ಎಂದು ತಾ.ಪಂ.ಇಓ ರವರನ್ನು ಪ್ರಶ್ನಿಸಿದರು.


    Provided by
    Provided by

    ಎಲ್ಲ ಇಲಾಖೆಯ ಕಚೇರಿಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲು ಸಮಗ್ರ ಮಾಹಿತಿ ಒಳಗೊಂಡ ನಾಮಫಲಕ ಹಾಕಬೇಕಿದ್ದು, ಶೇ.90 ರಷ್ಟು ಇಲಾಖೆಗಳು ಹಾಕಿಲ್ಲ ಸಾರ್ವಜನಿಕರಿಂದ ಬಂದಂತಹ ಅರ್ಜಿಗಳನ್ನು ಅಂದೇ ವಿಲೇವಾರಿ ಮಾಡಿದರೆ ಅರ್ಧ ಕೆಲಸ ಮುಗಿಯುತ್ತದೆ. ಆದರೆ ನೀವು ಬೇಕಂತಲೇ ತಡ ಮಾಡುವುದಲ್ಲದೆ ಅರ್ಜಿಯನ್ನು ವಜಾ ಮಾಡಲು ಕಾರಣ ಹುಡುಕುತ್ತೀರಾ ಬದಲಾಗಿ ಅರ್ಜಿಗೆ ನ್ಯಾಯ ಕೊಡಲು ಮಾರ್ಗ ಹುಡುಕಲ್ಲ. ಈ ಮನೋಭಾವದಿಂದ ನಿಮಗೆ ಇರುವ ಗೌರವ ಹಾಳಾಗಲಿದ್ದು, ಕರ್ತವ್ಯಕ್ಕೆ ನಿಷ್ಠರಾಗಿರಿ, ಯಾವ ಕಚೇರಿಯಲ್ಲಿ ಲೋಕಾಯುಕ್ತದ ನಾಮಫಲಕ ಇರುವುದಿಲ್ಲವೋ ಮುಂದಿನ ದಿನಗಳಲ್ಲಿ ಅಚ್ಚರಿಯ ಭೇಟಿ ನೀಡಿ ಸ್ಥಳದಲ್ಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದು ಅಧಿಕಾರಿಗಳ ಮೇಲೆ ಕಾನೂನು ಕ್ರಮಕ್ಕೆ ಕರುಣೆ ತೋರುವ ಜನಸಾಮಾನ್ಯರ ಬಗ್ಗೆಯೂ ಅಧಿಕಾರಿಗಳಿಗೆ ಕೊಂಚ ಕರುಣೆಯಿರಲಿ ಎಂದ ಅವರು, ಈ ಬಾರಿ ಪ್ರಚಾರದ ಕೊರತೆಯಿಂದ ಹೆಚ್ಚು ಸಾರ್ವಜನಿಕರು ಬಂದಿಲ್ಲ. ಮಧುಗಿರಿಗೆ ಮುಂದೆ ಬೇಗ ಇನ್ನೊಂದು ಸಭೆಯ ಕುರಿತು ಮಾಹಿತನ್ನು ನೀಡಲು ತಿಳಿಸಿದರು.

    ಪುರಸಭೆ ಅಂಗಡಿ ಮಳಿಗೆಗಳ ಕೇಡು ಪುರಸಭೆಯಲ್ಲಿ ಹರಾಜಾದ ಅಂಗಡಿ ಮಳಿಗೆಯಲ್ಲಿ ಒಂದು ಮಳಿಗೆಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಹೋಗಿದ್ದು, ಅದನ್ನು ವಿಚಾರಣೆಗೆ ಪಡೆಯುವಂತೆ ಸಲಹೆ ನೀಡಿದರು. ಬೇ ಖಾಕಿ ಉಳಿಸಿಕೊಂಡ ವ್ಯಕ್ತಿಗೆ ಮತ್ತೆ ಮಳೆಗೆ ಒದಗಿಸಿಕೊಟ್ಟು ಟೆಂಡರ್ ನಲ್ಲಿ ಹೆಚ್ಚು ಬೆಲೆಗೆ ಹರಾಜು ಕೂಗಿದವರಿಗೆ ಅನ್ಯಾಯ ಮಾಡಿರುವ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, ದಾಖಲೆ ಸಮೇತ ಮಾಹಿತಿ ಒದಗಿಸಲಾಗಿದೆ.

    ವಿಚಾರಣೆಯಲ್ಲಿ ಈ ಬಗ್ಗೆ ವರದಿ ನೀಡಲು ಜಿಲ್ಲಾ ಕಚೇರಿಗೆ ಬರುವಂತೆ ಸಿ.ಓ.ಸುರೇಶ್ ರವರಿಗೆ ಸೂಚಿಸಲಾಯಿತು. ಮತ್ತೊಂದು ಪ್ರಕರಣದಲ್ಲಿ ದೂರು ದಾರ ಮಹೇಶ್ ಆರೋಪಿಸುವಂತೆ ಇ–ಖಾತೆ ನೀಡಲು ಮನವಿ ಮಾಡಿದ್ದು ಚೂಡಾ ನಿಯಮದಡಿ ಸಾಧ್ಯವಿಲ್ಲ ಎಂದು ಅನಧಿಕೃತ ಎಂದು ಹೇಳಿ ವಾಪಸ್ ಮಾಡಿದ್ದಾರೆ. ಆದರೆ ಎಂಎಆರ್ ನಂತ (ಮುನ್ಸಿವಲ್ ಅಸೆಸಿಎಮೆಂಟ್ ರಿಜಿಸ್ಟರ್) ನಲ್ಲಿರುವ ಒಬ್ಬರಿಗೆ ಇ–ಖಾತೆ ನೀಡಿದ್ದಾರೆಂದು ಆರೋಪಿಸಿದ್ದರು. ಇದಕ್ಕೆ ಉತ್ತರಿಸಿದ ಜಿ. ಸುರೇಶ್ ಆಗ ಅದು ಕಾನೂನು ಪರಿಧಿಯಲ್ಲಿ ಇರಲಿಲ್ಲ ಈಗ ಅರ್ಜಿ ನೀಡಿದರೆ ಪರಿಶೀಲಿಸಿ ತಿಂಗಳಲ್ಲೇ ಖಾತೆ ನೀಡುತ್ತೇನೆಂದರು.

    ಪಿಡಿಓಗೆ ತಾಕೀತು:

    5 ಸಾವಿರಕ್ಕೂ ಹೆಚ್ಚು ಲೋಡ್ ಕೆರೆಯ ಮಣ್ಣನ್ನು ಒಳಸಲು ಎನ್ ಜಿಓ ಸಂಸ್ಥೆಯೊಂದಕ್ಕೆ ಅನಧಿಕೃತವಾಗಿ ಅನುಮತಿ ನೀಡಿ, ರಾಜಧನ ಮನ್ನಗೊಳಿಸಿದ ಆರೋಪದ ದೂರು ಕೂಡ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ಪಿಡಿಓ ಕಮಲ ಹೇಳಿಕೆಯನ್ನು ಕೇಳಿದ್ದು, ಸೂಕ್ತ ದಾಖಲಾತಿಯೊಂದಿಗೆ ಜಿಲ್ಲಾ ಕಚೇರಿಗೆ ಬರುವಂತೆ ತಾಕೀತು ಮಾಡಲಾಯಿತು. ಈ ಪ್ರಕರಣದಲ್ಲಿ 5715 ಲೋಡ್ ಕೆರೆಯ ಮಣ್ಣನ್ನು ರೈತರ ಮನವಿ ಮೇಲೆಗೆ ನೀಡಲಾಗಿದೆ ಎಂದು ಸಮಜಾಯಿಷಿ ನೀಡಿದರು. ಆದರೆ ಇದಕ್ಕೆ ತೃಪ್ತರಾಗದ ಎನ್ ಪಿ ರವರು ಈ ಬಗ್ಗೆ ಸಂಪೂರ್ಣ ದಾಖಲೆಗಳು ಸಂಬಂಧಿಸಿದ ಅಧಿಕಾರಿಗಳ ಲಿಖಿತ ದಾಖಲೆಯನ್ನು ಜಿಲ್ಲಾಕೇಂದ್ರದ ಕಚೇರಿಗೆ ತರುವಂತೆ ಸೂಚಿಸಿದರು. ತಹಶೀಲ್ದಾರ್ ಕಚೇರಿ ಆವರಣದ ಮಳಿಗೆಗಳ ಬಗ್ಗೆಯೂ ಚರ್ಚೆ ನಡೆಸಿದ್ದು, ಈ ಬಗ್ಗೆ ಕ್ರಮವಹಿಸುವಂತೆ ತಹಶೀಲ್ದಾರ್ ಗೆ ಸೂಚಿಸಿದಾಗ ಈ ಬಗ್ಗೆ ದೂರು ಬಂದಿದ್ದು, ಮೇಲಾಧಿಕಾರಿಗೆ ಮಾಹಿತಿ ನೀಡಿ ದೂರನ್ನು ವಿಲೇವಾರಿ ಮಾಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.

    ಜೇಬಲ್ಲಿದ್ದ ಹಣದ ಲೆಕ್ಕ ಬರೆದಿಡಿ: ವೆಂಕಟೇಶ್

    ನಿಯಮಾವಳಿಯಂತೆ ಪ್ರತಿ ಸರ್ಕಾರಿ ಅಧಿಕಾರಿ, ನೌಕರ, ಅರೆಕಾಲಿಕ ನೌಕರ ಕೂಡ ಕಚೇರಿಯ ಒಳಗೆ ಹೋಗುವಾಗ ನಗದು ವಹಿ ಪುಸ್ತಕವನ್ನು ಬರೆಯಬೇಕು. ಜೇಬಲ್ಲಿ ಹೋಗುವಾಗ ಹಣ ಎಷ್ಟಿತ್ತು ಎಂದು ಬರೆದಿಡಬೇಕು. ಹಾಗೂ ಒಳಗೆ ಮತ್ತು ಹೊರಗೆ ಬಂದು ಹೋಗುವಾಗ ಮೂವ್ ಮೆಂಟ್ ರಿಜಿಸ್ಟರ್ ಪಾಲಿಸಬೇಕು. ಈ ಬಗ್ಗೆ ಎಲ್ಲೂ ಸಹಿ ಹಾಕಿದ ನಿದರ್ಶನವಿಲ್ಲ. ಕಚೇರಿಗೆ ಬಂದ ಅರ್ಜಿಗಳ ಜವಾಲು ಸ್ವೀಕಾರ ಪುಸ್ತಕವನ್ನು ಸಮರ್ಥವಾಗಿ ನಿಭಾಯಿಸಿರಬೇಕು. ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಕೆಲಸ ಮಾಡುವವರು ಗುರುತಿನ ಚೀಟಿ ಹಾಕಿಕೊಂಡಿರಲ್ಲ. ನಿಮ್ಮ ಟೇಬಲ್ ಮುಂದೆ ನಿಮ್ಮ ಹೆಸರು ಹಾಗೂ ಸ್ಥಾನದ ಬಗ್ಗೆಯೂ ಮಾಹಿತಿಯಿಲ್ಲ ಎಂದು ಲೋಕಾಯುಕ್ತದ ಉಪ ಅಧೀಕ್ಷಕ ವೆಂಕಟೇಶ್ ಅಸಮಾಧಾನ ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಮಧುಗಿರಿ/ದೊಡ್ಡೇರಿ: ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ ಎಂದು ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ ತಿಳಿಸಿದರು. ಮಧುಗಿರಿ ತಾಲ್ಲೂಕಿನ…

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.