nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಕೊರಗಜ್ಜ’ ರೀಲ್ಸ್ : ಚಿತ್ರತಂಡದ ವಿರುದ್ದ ಕೊಡಗಿನ ದೈವ ಆರಾಧಕರ ಆಕ್ರೋಶ

    January 12, 2026

    ದುನಿಯಾ ವಿಜಯ್ ನಟನೆಯ ಲ್ಯಾಂಡ್‌ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ

    January 12, 2026

    ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ

    January 12, 2026
    Facebook Twitter Instagram
    ಟ್ರೆಂಡಿಂಗ್
    • ‘ಕೊರಗಜ್ಜ’ ರೀಲ್ಸ್ : ಚಿತ್ರತಂಡದ ವಿರುದ್ದ ಕೊಡಗಿನ ದೈವ ಆರಾಧಕರ ಆಕ್ರೋಶ
    • ದುನಿಯಾ ವಿಜಯ್ ನಟನೆಯ ಲ್ಯಾಂಡ್‌ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ
    • ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ
    • ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ
    • ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಬಲೀಕರಣದ ಮಾದರಿ: ಆಶುತೋಷ್ ಅದೋನಿ
    ತುಮಕೂರು March 25, 2025

    ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಬಲೀಕರಣದ ಮಾದರಿ: ಆಶುತೋಷ್ ಅದೋನಿ

    By adminMarch 25, 2025No Comments2 Mins Read
    ahalya bai

    ತುಮಕೂರು: ಹದಿನೆಂಟನೆಯ ಶತಮಾನದಲ್ಲೇ ಕಲ್ಯಾಣರಾಜ್ಯದ ಪರಿಕಲ್ಪನೆಯನ್ನು ನನಸಾಗಿಸಿದ ದಿಟ್ಟ ಆಡಳಿತಗಾರ್ತಿ ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಬಲೀಕರಣದ ಅತ್ಯುತ್ತಮ ಮಾದರಿ ಎಂದು ಲೇಖಕ, ವಿದ್ವಾಂಸ ಆಶುತೋಷ್ ಅದೋನಿ ಅಭಿಪ್ರಾಯಪಟ್ಟರು.

    ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವಶಾಸ್ತ್ರ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಕನ್ನಡ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ‘ಅಹಲ್ಯಾಬಾಯಿ ಹೋಳ್ಕರ್ ಅವರ ಜೀವನ ಮತ್ತು ಸಾಧನೆಗಳು’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.


    Provided by
    Provided by

    ಅಹಲ್ಯಾಬಾಯಿ ಕಾಲದಲ್ಲಿ ಮಾಳ್ವ ಪ್ರದೇಶವು ಭಾರತದ ಅತ್ಯಂತ ಶ್ರೀಮಂತ ರಾಜ್ಯವೆಂದು ಗುರುತಿಸಿಕೊಂಡಿತ್ತು. ತನ್ನ ಪತಿ ಹಾಗೂ ಮಗನನ್ನು ಅಕಾಲದಲ್ಲಿ ಕಳೆದುಕೊಂಡ ಆಕೆ ಅನೇಕ ತೊಂದರೆಗಳನ್ನು ಮೆಟ್ಟಿನಿಂತು ದಕ್ಷ ಆಡಳಿತ ನೀಡಿದಳು. ಏಕಾಂಗಿ ಹೋರಾಟ ಮಾಡಿ ಸುಖೀರಾಜ್ಯವನ್ನು ಸ್ಥಾಪಿಸಿದಳು ಎಂದು ವಿವರಿಸಿದರು.

    ಅಹಲ್ಯಾಬಾಯಿಯ ಮಾವ ಮಲ್ಹಾರ ರಾವ್ ಆಕೆಯನ್ನು ಗಂಡುಮಕ್ಕಳಿಗೆ ಸರಿಸಮನಾಗಿ ಬೆಳೆಸಿ ರಾಜಕಾರ್ಯಗಳ ಅನುಭವ ನೀಡಿದರು. ಯುದ್ಧವಿದ್ಯೆ, ವಾಕ್ ಚಾತುರ್ಯ, ದೂರದೃಷ್ಟಿ ಎಲ್ಲವನ್ನೂ ಕರಗತ ಮಾಡಿಕೊಳ್ಳುವಂತೆ ಪ್ರೇರಣೆ ನೀಡಿದರು. ಮಹಿಳಾ ಸಬಲೀಕರಣದ ಬಗ್ಗೆ ನಾವು ಈಗ ಮಾತಾಡುತ್ತಿದ್ದೇವೆ. ಇದನ್ನು ಮುನ್ನೂರು ವರ್ಷಗಳ ಹಿಂದೆಯೇ ಭಾರತದ ಪ್ರಾಂತ್ಯವೊಂದು ಮಾಡಿತೋರಿಸಿತ್ತು ಎಂದು ವಿಶ್ಲೇಷಿಸಿದರು.

    ಸಚ್ಚಾರಿತ್ರ್ಯವಿಲ್ಲದೆ ಯಾವುದೇ ರಾಷ್ಟ್ರ ಎದ್ದುನಿಲ್ಲದು. ಯಾರೇ ಆಡಳಿತಗಾರರು ಶ್ರೇಷ್ಠರು ಎನಿಸಿಕೊಳ್ಳಲಾರರು. ಆದರೆ ಅಹಲ್ಯಾಬಾಯಿ ನೈತಿಕವಾಗಿ ಅದ್ಭುತ ವ್ಯಕ್ತಿತ್ವ ಬೆಳೆಸಿಕೊಂಡಿದ್ದರು. ಅವರ ವೈಯಕ್ತಿಕ ಬದುಕು ಪಾರದರ್ಶಕವಾಗಿತ್ತು. ಚಾರಿತ್ರö್ಯಕ್ಕೂ ರಾಜಕೀಯಕ್ಕೂ ಸಂಬಂಧವಿದೆ ಎಂಬುದನ್ನು ಆಕೆ ತೋರಿಸಿಕೊಟ್ಟರು ಎಂದರು.

    ಅಹಲ್ಯಾಬಾಯಿಗೆ ಸಾಮಾಜಿಕ ಜವಾಬ್ದಾರಿಯ ಸ್ಪಷ್ಟ ಕಲ್ಪನೆಯಿತ್ತು. ನೀರಿನ ರಕ್ಷಣೆ, ಪ್ರಕೃತಿಯ ಪರಿಪಾಲನೆ, ಪರಿಸರ ಸಂರಕ್ಷಣೆ, ಉದ್ಯೋಗ ವೃದ್ಧಿ ಮುಂತಾದ ಆಧುನಿಕ ಅಗತ್ಯಗಳನ್ನು ಆಕೆ ಮನಗಂಡಿದ್ದಳು. ಇಂದಿನ ಯುವ ಜನತೆ ಅವರನ್ನು ಪ್ರೇರಣೆಯಾಗಿ ತೆಗೆದುಕೊಳ್ಳಬೇಕು. ಎಂತಹ ಸಮಸ್ಯೆಗಳು ಇದ್ದರೂ ಸಹ ಖಿನ್ನತೆಗೆ ಒಳಪಡದೆ ಧೈರ್ಯವಾಗಿ ಜೀವನವನ್ನು ಸಾಗಿಸಬೇಕು ಎಂಬುದನ್ನು ಅಹಲ್ಯಾಬಾಯಿಯ ಬದುಕನ್ನು ನೋಡಿ ಕಲಿಯಬೇಕು ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ. ಮಾತನಾಡಿ, ಕಟ್ಟುಪಾಡುಗಳ ಮಧ್ಯೆಯೂ ಮನಸ್ಸು ಮಾಡಿದರೆ ಮಹಿಳೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಹೋಳ್ಕರ್ ಉತ್ತಮ ಮಾದರಿಯಾಗಿ ನಿಲ್ಲುತ್ತಾರೆ ಎಂದು ಅಭಿಪ್ರಾಯಪಟ್ಟರು.

    ಮುನ್ನೂರು ವರ್ಷಗಳ ಹಿಂದೆ ಭಾರತದ ಪರಿಸ್ಥಿತಿ ಹೇಗಿತ್ತೆಂದು ಊಹಿಸಬಹುದು. ಅಷ್ಟು ಅಡೆತಡೆಗಳ ನಡುವೆ ಆಕೆ ಹೊಂದಿದ್ದ ಕಲ್ಯಾಣರಾಜ್ಯದ ಕಲ್ಪನೆ ಶ್ರೇಷ್ಠವಾದದ್ದು. ಅಹಲ್ಯಾಬಾಯಿ ಬಗ್ಗೆ ಹೆಚ್ಚಿನ ಓದು, ಅಧ್ಯಯನ, ಸಂಶೋಧನೆ ನಡೆಯಬೇಕು ಎಂದರು.

    ಸಿಂಡಿಕೇಟ್ ಸದಸ್ಯ ಡಾ.ಕೆ.ರಾಜೀವಲೋಚನ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಸಿಬಂತಿ ಪದ್ಮನಾಭ ಕೆ.ವಿ. ಸ್ವಾಗತಿಸಿದರು. ಡಾ. ಜಿ. ಗಿರಿಜಮ್ಮ ವಂದಿಸಿದರು. ಅಖಿಲಾಂಡೇಶ್ವರಿ ನಿರೂಪಿಸಿದರು. ಬೆಂಗಳೂರಿನ ಕಲಾಸಂಪದ ಸಂಸ್ಥೆಯ ವಿದುಷಿ ವೀಣಾ ಸಿ. ಶೇಷಾದ್ರಿಯವರ ತಂಡವು ‘ಚಿನ್ಮಾತೆ ಅಹಲ್ಯಾ– ತ್ರಿಶತಿ ಅತುಲ್ಯ’ ಎಂಬ ನೃತ್ಯರೂಪಕವನ್ನು ಪ್ರಸ್ತುತಪಡಿಸಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ

    January 10, 2026

    ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ

    January 9, 2026

    ಶಬರಿಮಲೆ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: 7 ವರ್ಷದ ಮಗು ಸೇರಿ ನಾಲ್ವರು ದುರ್ಮರಣ

    January 9, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಕೊರಗಜ್ಜ’ ರೀಲ್ಸ್ : ಚಿತ್ರತಂಡದ ವಿರುದ್ದ ಕೊಡಗಿನ ದೈವ ಆರಾಧಕರ ಆಕ್ರೋಶ

    January 12, 2026

    ರಾಘವೇಂದ್ರ ಅಡಿಗ ಎಚ್ಚೆನ್ ಸಿನಿ ತಂಡಗಳು ಪ್ರೇಕ್ಷಕರನ್ನ ಸೆಳೆಯಲು ಎಲ್ಲಿಲ್ಲದ ಕಸರತ್ತು ಮಾಡುತ್ತವೆ. ಭರ್ಜರಿ ಪ್ರಚಾರ, ಕಾಲೇಜುಗಳಿಗೆ ಭೇಟಿ, ನಟ-ನಟಿಯರು…

    ದುನಿಯಾ ವಿಜಯ್ ನಟನೆಯ ಲ್ಯಾಂಡ್‌ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ

    January 12, 2026

    ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ

    January 12, 2026

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.