nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ

    October 7, 2025

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!

    October 7, 2025
    Facebook Twitter Instagram
    ಟ್ರೆಂಡಿಂಗ್
    • ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ
    • ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ
    • ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!
    • ಪಾವಗಡ | ಶಿಷ್ಯ ವೇತನ, ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ
    • ಮೇಕೆಗಳ ಹಿಂಡಿನ ಮೇಲೆ ಹುಲಿ ದಾಳಿ: ಮೂರು ಮೇಕೆಗಳು ಸಾವು, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಆಕ್ರೋಶ
    • ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು
    • ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    • ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಚಿಂತನೆಗಳು ಸಂವಿಧಾನದ ಆತ್ಮ: ಸುಧಾಕರ ಹೊಸಳ್ಳಿ
    ತುಮಕೂರು March 29, 2025

    ಅಂಬೇಡ್ಕರ್ ಚಿಂತನೆಗಳು ಸಂವಿಧಾನದ ಆತ್ಮ: ಸುಧಾಕರ ಹೊಸಳ್ಳಿ

    By adminMarch 29, 2025No Comments2 Mins Read
    ambedkar

    ತುಮಕೂರು: ನಮ್ಮ ಸಂವಿಧಾನವು ವ್ಯಕ್ತಿ ಅಥವಾ ಪಕ್ಷಗಳೊಂದಿಗೆ ಗುರುತಿಸಿಕೊಳ್ಳುವುದಿಲ್ಲ. ಬದಲಿಗೆ ಎಲ್ಲರಿಗೂ ನ್ಯಾಯ ಒದಗಿಸುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ನಮ್ಮ ಸಂವಿಧಾನದ ಆತ್ಮವಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರಾದೇಶಿಕ ನಿರ್ದೇಶಕರಾದ ಡಾ. ಸುಧಾಕರ ಹೊಸಳ್ಳಿ ತಿಳಿಸಿದರು.

    ವಿವಿ ಕಲಾ ಕಾಲೇಜಿನ ಇತಿಹಾಸ ಉಪನ್ಯಾಸ ಡಾ.ಮಹೇಶ್ ಕುಮಾರ್ ಅವರ ‘ಅಂಬೇಡ್ಕರ್ ಚಿಂತನೆಗಳು: ಸಾಮಾಜಿಕ ಮತ್ತು ರಾಜಕೀಯ ವಿಶ್ಲೇಷಣೆ’ ಕೃತಿಯನ್ನು ಗುರುವಾರ ಬಿಡುಗಡೆ ಮಾಡಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಗತ್ತಿನ ಸಮಾನತೆಯನ್ನು ಪ್ರತಿಪಾದಿಸುವಲ್ಲಿ ಮತ್ತು ಸಮಾಜವನ್ನು ಮುಟ್ಟುವಂತಹ ಕೃತಿಗಳನ್ನು ರಚಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಅಂಬೇಡ್ಕರ್ ಅವರ ವಿಷಯಗಳನ್ನು ರಮಣೀಯವಾಗಿ ಮಾತನಾಡುವುದಕ್ಕೆ ಸಾಧ್ಯವಿಲ್ಲ. ಅವು ಗಂಭೀರವಾಗಿ ಚರ್ಚಿಸಬೇಕಾದ ವಿಷಯಗಳು ಎಂದರು.


    Provided by
    Provided by
    Provided by

    ಬಾಬಾ ಸಾಹೇಬ್ ಅಂಬೇಡ್ಕರ್ ವಿಶ್ವವಿದ್ಯಾನಿಲಯದಂತಹ ದೊಡ್ಡ ವಿಷಯ. ಶೈಕ್ಷಣಿಕ ವೇದಿಕೆಗಳಲ್ಲಿ ಅಂಬೇಡ್ಕರ್ ಚಿಂತನೆಗಳ ವೈಶಾಲ್ಯತೆಯನ್ನು ಸಾಮೂಹಿಕವಾಗಿ ನೆನಪಿಸಿಕೊಳ್ಳುವುದು ಅತ್ಯಗತ್ಯ. ಅವರು ಭಾರತದ ಆಶಾಕಿರಣ ವಾಗಿದ್ದು ಅವರ ಬರಹಗಳು ಮತ್ತು ಭಾಷಣಗಳು ಸಮಾಜಕ್ಕೆ ಮಾರ್ಗದರ್ಶನ ನೀಡುತ್ತವೆ ಎಂದರು.

    1986ರವರೆಗೆ ಜಾತಿ ಪದ್ಧತಿಯನ್ನು ನಿರ್ಮೂಲನೆ ಮಾಡಲು ಹೋರಾಡಿದ ಅಂಬೇಡ್ಕರ್, ಕೇವಲ ಸಮಸ್ಯೆಗಳನ್ನು ಮುಂದಿಡದೆ, ಬೌದ್ಧ ಧರ್ಮದ ಮೂಲಕ ಪರಿಹಾರವನ್ನು ಸೂಚಿಸಿದರು. ವಿಶ್ವವಿದ್ಯಾನಿಲಯಗಳು ಅಂಬೇಡ್ಕರ್ ಅವರ ರಾಜಕೀಯ ಚಿಂತನೆಗಳನ್ನು ಪ್ರಚಾರ ಮಾಡಬೇಕು ಮತ್ತು ವಿದ್ಯಾರ್ಥಿಗಳು ಸಮಾಜವನ್ನು ತಲುಪುವಂತಹ ಜಾಗತಿಕ ವಿಷಯಗಳ ಬಗ್ಗೆ ಗಮನ ಹರಿಸಬೇಕು ಎಂದರು.

    ಕುಲಸಚಿವೆ ನಾಹಿದಾ ಜಮ್ ಜಮ್ ಮಾತನಾಡಿ, ಮಾನವ ನಾಗರಿಕತೆ ಇರುವವರೆಗೂ ಅಂಬೇಡ್ಕರ್ ಚಿಂತನೆಗಳು ಜೀವಂತವಾಗಿರುತ್ತವೆ. ಆದರೆ ಅವರನ್ನು ಯಾವುದೋ ಜಾತಿ ಸಮುದಾಯಗಳಿಗೆ ಸೀಮಿತಗೊಳಿಸಬಾರದು. ಎಲ್ಲರೂ ಅವರ ಚಿಂತನೆಗಳನ್ನು ಬಳಸಿಕೊಂಡು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

    ದುಷ್ಟತನ ಮತ್ತು ದೌರ್ಜನ್ಯಗಳನ್ನು ತಡೆಯಲು ಮತ್ತು ಅಸ್ಪೃಶ್ಯರ ಬಗ್ಗೆ ಕಾನೂನಿನ ಅರಿವು ಮೂಡಿಸಲು ಅಂಬೇಡ್ಕರ್ ಚಿಂತನೆಗಳು ಸಹಾಯಕವಾಗಿದೆ. ತಪ್ಪು ಮಾಡುವವರಿಗೆ ಕಾನೂನಿನ ಭಯವಿರುತ್ತದೆ. ಏಕೆಂದರೆ ಅದು ಅವರನ್ನು ಬಿಡುವುದಿಲ್ಲ. ಕಾನೂನಿನ ಎದುರು ಎಲ್ಲರೂ ಸಮಾನರೇ ಎಂದರು.

    ಇತಿಹಾಸ ಮತ್ತು ಪುರಾತತ್ವಶಾಸ್ತç ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ ಕೊಟ್ರೇಶ್ ಅವರು ಮಾತನಾಡಿ ಅಂಬೇಡ್ಕರ್ ಅವರ ಚಿಂತನೆಗಳು ಕೇವಲ ದೇಶದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಹರಡಿವೆ. ಇದು ಒಂದು ಸಾಗರದಂತಿದ್ದು, ವಿದ್ಯಾರ್ಥಿಗಳಿಗೆ ಅತ್ಯಂತ ಮಹತ್ವವಾದ ವಿಷಯವಾಗಿದೆ. ಮಹೇಶ್ ಅವರ ಕೃತಿ ಅಂಬೇಡ್ಕರ್ ಅವರ ಚಿಂತನೆಗಳನ್ನು ಸರಳವಾಗಿ ತಿಳಿಸಿಕೊಡುವ ಪ್ರಯತ್ನ ಮಾಡಿದೆ ಎಂದರು.

    ಇತಿಹಾಸ ಪ್ರಾಧ್ಯಾಪಕ ಪ್ರೊ. ಎಲ್. ಪಿ. ರಾಜು, ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ, ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಟಿ.ಎನ್. ಹರಿಪ್ರಸಾದ್, ಡಾ. ಚಿಕ್ಕಣ್ಣ, ಡಾ. ಶ್ರೀನಿವಾಸ, ಕೃತಿಕಾರ ಡಾ. ಮಹೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ

    October 7, 2025

    ಕುಣಿಗಲ್: ಬೈಕ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ವೃದ್ಧೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ…

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!

    October 7, 2025

    ಪಾವಗಡ | ಶಿಷ್ಯ ವೇತನ, ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ

    October 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.