nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ಕೆಲಸ ಮಾಡಿದಾಗ ಅಭಿವೃದ್ಧಿ ಸಾಧ್ಯ: ಸಚಿವ ವಿ.ಸೋಮಣ್ಣ
    ತುಮಕೂರು April 10, 2025

    ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ಕೆಲಸ ಮಾಡಿದಾಗ ಅಭಿವೃದ್ಧಿ ಸಾಧ್ಯ: ಸಚಿವ ವಿ.ಸೋಮಣ್ಣ

    By adminApril 10, 2025No Comments3 Mins Read
    v somanna

    ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಒಟ್ಟಾಗಿ ಸೇರಿ ಸಮನ್ವಯತೆಯಿಂದ ಕೆಲಸ ಮಾಡಿದಾಗ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ, ಸಂಸದ ಹಾಗೂ ದಿಶಾ ಸಮಿತಿ ಅಧ್ಯಕ್ಷ ವಿ. ಸೋಮಣ್ಣ ತಿಳಿಸಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ದಿಶಾ ಸಮಿತಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್(ಜೆಜೆಎಂ) ಯೋಜನೆಯ ಪ್ರಗತಿ ಪರಿಶೀಲಿಸುತ್ತಾ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಜೆಜೆಎಂ ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಕಳಪೆ ಗುಣಮಟ್ಟದ ಕಾಮಗಾರಿಗಳು ಕಂಡು ಬಂದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಜಿಲ್ಲೆಯಲ್ಲಿ ಕೇಂದ್ರದ ಜೆಜೆಎಂ ಯೋಜನೆಯು ಶಾಶ್ವತ ಕುಡಿಯುವ ನೀರಿನ ಯೋಜನೆಯಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಸಭೆಗೆ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಮಾರ್ಚ್ ಅಂತ್ಯಕ್ಕೆ 4 ಬ್ಯಾಚುಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಈವರೆಗೂ 3699 ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆಯಾಗಿದ್ದು, ಈ ಪೈಕಿ 3256 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. ಈವರೆಗೂ 1449 ಕಾಮಗಾರಿಗಳು ಪೂರ್ಣಗೊಂಡಿದ್ದು, 1372 ಕಾಮಗಾರಿಗಳು ಪ್ರಗತಿಯಲ್ಲಿವೆ. ಇದಕ್ಕಾಗಿ 585 ಕೋಟಿ ರೂ.ಗಳ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

    ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ತುಮಕೂರು-ದಾವಣಗೆರೆ ರೈಲ್ವೆ ಮಾರ್ಗದ ಪ್ರಗತಿ ಯಾವ ಹಂತದಲ್ಲಿದೆ ಎಂದು ಪ್ರಶ್ನಿಸಿದಾಗ ಈ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಶೇ.90ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, 59 ಎಕರೆ ಮಾತ್ರ ಭೂಸ್ವಾಧೀನವಾಗಬೇಕಿದೆ. ಮುಂದಿನ ಒಂದೂವರೆ ವರ್ಷದೊಳಗೆ ಜಿಲ್ಲೆಯಲ್ಲಿ ಕೈಗೊಂಡಿರುವ ಎಲ್ಲಾ ರೈಲ್ವೆ ಯೋಜನೆಗಳು ಪೂರ್ಣಗೊಳ್ಳಲಿವೆ ಎಂದು ಸಂಸದ ಸೋಮಣ್ಣ ಉತ್ತರಿಸಿದರು.

    ಗ್ರಾಮಾಂತರ ಶಾಸಕ ಸುರೇಶ್ ಗೌಡ ಮಾತನಾಡಿ, ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ 11 ಘಟಕಗಳಿದ್ದು, ಈ ಯೋಜನೆಯಿಂದ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ. ಜನರಿಗೆ ಕುಡಿಯುವ ನೀರು ಸರಬರಾಜು ಮಾಡುವ ಇಚ್ಛಾಶಕ್ತಿ ಅಧಿಕಾರಿಗಳಿಗಿಲ್ಲವೆಂದು ಸಭೆಗೆ ದೂರು ನೀಡಿದಾಗ, ಪ್ರತಿಕ್ರಿಯಿಸಿದ ಸೋಮಣ್ಣ ಕೂಡಲೇ ದುರಸ್ತಿಯಲ್ಲಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ಘಟಕಗಳನ್ನು ಸುಸ್ಥಿತಿಗೆ ತರಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ಗೆ ಸೂಚನೆ ನೀಡಿದರು.
    ಸಂಸದ ಸೋಮಣ್ಣ ಮುಂದುವರೆದು ಮಾತನಾಡುತ್ತಾ, ಜಿಲ್ಲೆಯಲ್ಲಿ ಅರಣ್ಯ ಒತ್ತುವರಿಯಾಗಿರುವ ಪ್ರದೇಶವನ್ನು ಗುರುತಿಸಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಅರಣ್ಯ ಒತ್ತುವರಿಯಿಂದ ಸಾಮಾಜಿಕ ಅರಣ್ಯ ನಾಶವಾಗುತ್ತಿದೆ. ಒತ್ತುವರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ವರ್ಷಗಳಿಂದ ರಸ್ತೆಗಳು ಹದಗೆಟ್ಟ ಸ್ಥಿತಿಯಲ್ಲಿವೆ. ರಸ್ತೆ ಸಂಪರ್ಕವಿಲ್ಲದಿರುವ ಗ್ರಾಮಗಳ ಮಾಹಿತಿ ಪಡೆದು ಸದರಿ ಗ್ರಾಮಗಳಿಗೆ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸಲು ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
    ಮೀನುಗಾರಿಕೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಮೀನು ಸಾಕಣೆ ಕೆರೆಗಳ ಹರಾಜು ಹಕ್ಕನ್ನು ಆಯಾ ಗ್ರಾಮಪಂಚಾಯತಿಗಳಿಗೆ ನೀಡಬೇಕು. ಇದರಿಂದ ಪಂಚಾಯತಿಗೆ ಆದಾಯ ಬರಲಿದೆ ಎಂದು ಮೀನುಗಾರಿಕಾ ಇಲಾಖೆ ಉಪನಿರ್ದೇಶಕ ಶಿವಶಂಕರ್ ಅವರಿಗೆ ಸೂಚನೆ ನೀಡಿದರು.

    ಬಹುತೇಕ ಗ್ರಾಮೀಣ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಸರ್ಕಾರಿ ಶಾಲೆಗಳ ಕಟ್ಟಡಗಳ ಸ್ಥಿತಿ ಉತ್ತಮವಾಗಿಲ್ಲದಿರುವುದನ್ನು ಕೊರಟಗೆರೆ ಮತ್ತು ಮಧುಗಿರಿ ತಾಲ್ಲೂಕುಗಳಲ್ಲಿ ಪ್ರವಾಸ ಮಾಡಿದ ಸಂದರ್ಭದಲ್ಲಿ ಗಮನಿಸಿದ್ದೇನೆ. ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳು, ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಮಧುಗಿರಿ ಮತ್ತು ತುಮಕೂರು ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರಿಗೆ ಕಾರ್ಯನಿರ್ವಹಿಸಬೇಕೆಂದು ಸಚಿವರು ಸೂಚಿಸಿದರು.

    ಉಳಿದಂತೆ ಸಭೆಯಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ, ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರ, ವಿಶ್ವಕರ್ಮ ಸಮುದಾಯಕ್ಕೆ ಒದಗಿಸಲಾಗುತ್ತಿರುವ ತರಬೇತಿ ಹಾಗೂ ಶಿಷ್ಯವೇತನ ಸೇರಿದಂತೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಇಲಾಖಾವಾರು ಪರಿಶೀಲಿಸಿದರು.

    ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಮಾತನಾಡಿ, ಬಿದರೆಹಳ್ಳ ಕಾವಲ್ನಲ್ಲಿ ಹೆಲಿಕಾಪ್ಟರ್ ಘಟಕ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವುದು ಬೇಸರದ ಸಂಗತಿ. ಈ ಕುಟುಂಬಗಳಿಗೆ ಆದ್ಯತೆ ನೀಡಿ ಉದ್ಯೋಗ ನೀಡಬೇಕು ಎಂದು ಸಭೆಗೆ ಮನವಿ ಮಾಡಿದರು.

    ಸಭೆಯಲ್ಲಿ ಸಂಸದರಾದ ಗೋವಿಂದ ಕಾರಜೋಳ, ಡಾ.ಮಂಜುನಾಥ್, ಶಾಸಕರಾದ ಜ್ಯೋತಿ ಗಣೇಶ್, ಎಂ.ಟಿ.ಕೃಷ್ಣಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪವಿಭಾಗಾಧಿಕಾರಿಗಳಾದ ಗೌರವ್ಕುಮಾರ್ ಶೆಟ್ಟಿ, ಗೋಟೂರು ಶಿವಪ್ಪ, ಸಪ್ತಶ್ರೀ, ವಿವಿಧ ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು: ಇಲ್ಲಿನ ಪಾಂಡುರಂಗನಗರ (ಎಮ್ಮೆಕೇರಿ) ದಲ್ಲಿರುವ ಕೋಟೆ ಶ್ರೀ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವವು ಆ.3 ರಿಂದ 6ರವರೆಗೆ…

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.