nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ

    November 15, 2025

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    • ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  
    • ಮಕ್ಕಳಿಲ್ಲದ ಕೊರಗು ಬಿಟ್ಟು ಮರಗಳಿಗೆ ತಾಯಿಯಾದ ದೈವ ಸ್ವರೂಪಿ “ತಿಮ್ಮಕ್ಕ”
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಣ್ವ ಸಮೂಹದ ಶಾಲೆಯ ಆಸ್ತಿ ಮುಟ್ಟುಗೋಲು | ಅತಂತ್ರ ಸ್ಥಿತಿಯಲ್ಲಿ 417 ಜನ ಮಕ್ಕಳ ಭವಿಷ್ಯ
    ಕೊರಟಗೆರೆ April 21, 2025

    ಕಣ್ವ ಸಮೂಹದ ಶಾಲೆಯ ಆಸ್ತಿ ಮುಟ್ಟುಗೋಲು | ಅತಂತ್ರ ಸ್ಥಿತಿಯಲ್ಲಿ 417 ಜನ ಮಕ್ಕಳ ಭವಿಷ್ಯ

    By adminApril 21, 2025No Comments3 Mins Read
    kanva

    ಕೊರಟಗೆರೆ : ಕಣ್ವಸೌಹಾರ್ದ ಕೋ–ಆಪರೇಟಿವ್ ಕ್ರೆಡಿಟ್ ಲಿಮಿಟೆಡ್ ಹಾಗೂ ಕಣ್ವ ಸಮೂಹ ಸಂಸ್ಥೆಯ ಆರ್ಥಿಕ ಅವ್ಯವಹಾರದಿಂದ ಸರಕಾರ ಜಿ.ನಾಗೇನಹಳ್ಳಿಯ ಕಣ್ವ ಇಂಟರ್ ನ್ಯಾಷನಲ್ ಶಾಲೆಯ ಜಮೀನು, ಕಟ್ಟಡ ಮತ್ತು ನಿವೇಶನ ಮುಟ್ಟುಗೋಲು ಹಾಕಿಕೊಂಡಿದೆ. ಕಣ್ವಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 417 ಜನ ವಿದ್ಯಾರ್ಥಿಗಳ ಶಿಕ್ಷಣ ಅತಂತ್ರ ಸ್ಥಿತಿಯಲ್ಲಿದ್ದು ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಎದುರಾಗಿದೆ.

    ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂ ವ್ಯಾಪ್ತಿಯ ದೊಡ್ಡೇನಹಳ್ಳಿ ಸರ್ವೆ ನಂ.5/4ರಲ್ಲಿ 2 ಎಕರೇ 37 ಕುಂಟೆ ಜಮೀನು ಮತ್ತು 0.26ಕುಂಟೆ ಕಣ್ವ ಇಂಟರ್ ನ್ಯಾಷನಲ್ ಶಾಲೆ ಮತ್ತು ಶಾಲಾ ಕಟ್ಟಡವನ್ನು ಕೆಪಿಐಡಿಎಫ್ ಇ ಕಾಯ್ದೆಯಡಿ ಸರಕಾರ ಮುಟ್ಟುಗೋಲು ಹಾಕಿಕೊಂಡಿದೆ. ಶಾಲೆಯ ಕಾರ್ಯದರ್ಶಿ ಶಿಕ್ಷಣಗೆ ಮನವಿ ಮಾಡಿ ನಿರ್ವಹಣೆಗೆ ಬಿಇಓರನ್ನು ಆಡಳಿತಾಧಿಕಾರಿ ಆಗಿ ನೇಮಿಸಲು ಮಾಡಿದ ಮನವಿಗೂ ಈಗ ಅವಕಾಶ ಇಲ್ಲದಾಗಿದೆ.


    Provided by
    Provided by

    ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೇಗೆ ಶಾಲೆ ಮುಂದುವರೆಸಲು ಸರಕಾರ ಚಿಂತನೆ ನಡೆಸುತ್ತಿದೆ. ಆದರೇ ಶಾಲೆಯ ಐಸಿಎಸ್ ಸಿ ಮಾನ್ಯತೆ 2025 ರ ಮಾರ್ಚ್ 31ಕ್ಕೆ ಮುಕ್ತಾಯವಾಗಿದೆ. ಇದುವರೆಗೆ ಶಾಲೆಯು ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಯ ಮಾನ್ಯತೆ ಸಹ ನವೀಕರಣ ಮಾಡದಿರುವುದು ಇನ್ನೂ ಅನುಮಾನಕ್ಕೆ ಕಾರಣವಾಗಿದೆ.

    ಜಿ.ನಾಗೇನಹಳ್ಳಿಯ ಕಣ್ವಶಾಲೆಯ ಭವಿಷ್ಯದ ಬಗ್ಗೆ ಪೋಷಕರಲ್ಲಿ ಅನಿಶ್ಚಿತತೆ ಮುಂದುವರೆದಿದೆ. ಸರಕಾರವು ಶೀರ್ಘದಲ್ಲೇ ಪೋಷಕರ ಸಭೆ ಕರೆದು ವಾಸ್ತವಾಂಶ ತಿಳಿಸಬೇಕಿದೆ. ಒಟ್ಟಾರೆಯಾಗಿ ಕಣ್ವ ಸಮೂಹದ ಆರ್ಥಿಕ ಅವ್ಯವಹಾರದ ಸಮಸ್ಯೆಯು ಕಣ್ವಶಾಲೆಯ 417ಜನ ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕೆ ಸಂಕಷ್ಟ ತಂದಿದೆ. ಸರಕಾರವು ತಕ್ಷಣ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಕಾಪಾಡಬೇಕಿದೆ ಎಂದು ಪೋಷಕರು ಒತ್ತಾಯ ಮಾಡಿದ್ದಾರೆ.

    ಶಿಕ್ಷಣ ಇಲಾಖೆ ಆಯುಕ್ತರ ಆದೇಶ:

    ಕಣ್ವ ಇಂಟರ್ ನ್ಯಾಷನಲ್ ಶಾಲೆಯು ಐಸಿಎಸ್ ಸಿ ಪಠಕ್ರಮ ಆಧಾರಿತ ಶಾಲೆ. ಕಣ್ವಶಾಲೆಯ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮತ್ತು ಆಡಳಿತಾಧಿಕಾರಿ ನೇಮಿಸಲು ಸಾಧ್ಯವಿಲ್ಲ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಣ್ವಶಾಲೆಯ ಮಕ್ಕಳ ಪೋಷಕರ ಸಭೆ ಕರೆದು ವಾಸ್ತವಾಂಶ ಗಮನಕ್ಕೆ ತರಬೇಕು. ಶಿಕ್ಷಣ ಇಲಾಖೆಯ ನಿಯಮಾನುಸಾರ ಸದರಿ ಶಾಲೆ ಮುಂದುವರೆಸಲು ಅವಕಾಶವಿಲ್ಲ. ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ದಾಖಲಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಧುಗಿರಿ ಡಿಡಿಪಿಐಗೆ 2025ರ ಮಾ.17ರಂದೇ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದಾರೆ.

    ಮಕ್ಕಳಿಗೆ ಉಚಿತ ಶಿಕ್ಷಣದ ಆಮಿಷ:

    ಕಣ್ವ ಇಂಟರ್ ನ್ಯಾಷನಲ್ ಶಾಲೆಯ ಆಡಳಿತ ಮಂಡಳಿಯು ಮಕ್ಕಳ ಪೋಷಕರಿಗೆ ಸಮಸ್ಯೆಯ ವಿಷಯ ತಿಳಿಸದೇ 2025–26ರ ಶೈಕ್ಷಣಿಕ ವರ್ಷಕ್ಕೆ ಶುಲ್ಕವನ್ನು ಕಟ್ಟಿಸಿಕೊಳ್ಳದೇ ಉಚಿತ ಭೋದನೆಯ ವದಂತಿ ಹರಿದಾಡಿವೆ. ಶಾಲೆಯಿಂದ ಮಕ್ಕಳಿಗೆ ಬರುವ ವಾಹನಗಳು ಶುಲ್ಕ ಈವರ್ಷ ಉಚಿತ ಎಂಬ ಮಾತು ಕೇಳಿಬಂದಿವೆ. ಇದು ಪೋಷಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದ್ದು ಶಿಕ್ಷಣ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕಿದೆ.

    417 ಜನ ಮಕ್ಕಳ ಭವಿಷ್ಯವೇ ಅತಂತ್ರ..

    ಕಣ್ವ ಸಮೂಹದ ಜಿ.ನಾಗೇನಹಳ್ಳಿ ಶ್ರೀಕಣ್ವ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 2024–25ನೇ ಸಾಲಿನ ಅನ್ವಯ ನರ್ಸರಿಯಿಂದ 10ನೇ ತರಗತಿ ವರೇಗೆ 417ಜನ ಮಕ್ಕಳು ಐಸಿಎಸ್ ಸಿ ಪಠ್ಯಕ್ರಮ ಅನುಸಾರ ವ್ಯಾಸಂಗ ಮಾಡುತ್ತಿದ್ದಾರೆ. ಮುಖ್ಯಶಿಕ್ಷಕನ ಹುದ್ದೆಯು ಈಗ ಖಾಲಿಯಿದ್ದು 21 ಜನ ಶಿಕ್ಷಕರಿದ್ದಾರೆ. ಶಾಲೆಯ ಜಮೀನು ಮತ್ತು ಕಟ್ಟಡವೇ ಸರಕಾರಕ್ಕೆ ಮುಟ್ಟುಗೋಲು ಆದ ಮೇಲೆ 2025–26ರ ಶೈಕ್ಷಣಿಕ ವರ್ಷದಲ್ಲಿ ಮತ್ತೇ ಜಮೀನು ಸಮಸ್ಯೆ ಎದುರಾದರೇ ಮಕ್ಕಳ ಶಿಕ್ಷಣದ ಪಾಡೇನು ಎಂಬುದೇ ಯಕ್ಷಪ್ರಶ್ನೆ.

    ಜಿ.ನಾಗೇನಹಳ್ಳಿಯ ಕಣ್ವ ಇಂಟರ್ ನ್ಯಾಷನಲ್ ಸ್ಕೂಲ್ ಮುಚ್ಚಿಸಲು ಶಿಕ್ಷಣ ಇಲಾಖೆ ಆಯುಕ್ತರಿಂದ ನಿರ್ದೇಶನವಿದೆ. ಕಣ್ವಶಾಲೆಯಲ್ಲಿ ಏ.೩ರಂದು ಪೋಷಕರ ಸಭೆ ಕರೆಯಲು ಬಿಇಓ ಶಾಲೆಯ ಕಾರ್ಯದರ್ಶಿಗೆ ಮಾ.೨೮ರಂದು ನೊಟೀಸ್ ನೀಡಿದ್ದರು. ಸಭೆ ಕರೆಯಲು ಮಾನ್ಯ ಉಚ್ಚ ನ್ಯಾಯಾಲಯ ತಡೆ ನೀಡಿದೆ ಎಂದು ಮಧುಗಿರಿ ಡಿಡಿಪಿಐ ಗಿರೀಜಾ ಬಿ.ಹೆಚ್. ಹೇಳಿದ್ದಾರೆ.

    ಸರಕಾರದ ಜೊತೆ ಕಣ್ವಶಾಲೆ 30 ವರ್ಷ ಗುತ್ತಿಗೆ ಒಪ್ಪಂದ ಮಾಡಿಕೊಂಡಿದೆ. ಕಣ್ವಶಾಲೆ ಇರುವ ಜಮೀನು ಸರಕಾರದ ಆಸ್ತಿ. ಈಗ ಕಣ್ವಶಾಲೆ ಮಾತ್ರ ನಮ್ಮದು ಅಷ್ಟೆ. ಶಾಲೆಯ ಜಮೀನು ಮತ್ತು ಕಟ್ಟಡದ ಸಮಸ್ಯೆ ಇರೋದು ಸತ್ಯ. ಸರಕಾರದ ಜೊತೆ ಒಪ್ಪಂದ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಕಾಲಾವಕಾಶ ನೀಡಿದೆ ಎಂದು ಬೆಂಗಳೂರು ಕಣ್ವ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ರಜತ್ ಪಿ.ಗೌಡ ಹೇಳಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ

    November 15, 2025

    ತುಮಕೂರು: ನಗರದ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ…

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.