nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು

    August 28, 2026
    Facebook Twitter Instagram
    ಟ್ರೆಂಡಿಂಗ್
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    • ಬಡಾವಣೆಯೋ.. ಕುಡುಕರ ಬಯಲಾಟವೋ?: ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ, ಪೊಲೀಸರೇ ಎಲ್ಲಿದ್ದೀರಿ?
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಣ್ವ ಸಮೂಹದ ಶಾಲೆಯ ಆಸ್ತಿ ಮುಟ್ಟುಗೋಲು | ಅತಂತ್ರ ಸ್ಥಿತಿಯಲ್ಲಿ 417 ಜನ ಮಕ್ಕಳ ಭವಿಷ್ಯ
    ಕೊರಟಗೆರೆ April 21, 2025

    ಕಣ್ವ ಸಮೂಹದ ಶಾಲೆಯ ಆಸ್ತಿ ಮುಟ್ಟುಗೋಲು | ಅತಂತ್ರ ಸ್ಥಿತಿಯಲ್ಲಿ 417 ಜನ ಮಕ್ಕಳ ಭವಿಷ್ಯ

    By adminApril 21, 2025No Comments3 Mins Read
    kanva

    ಕೊರಟಗೆರೆ : ಕಣ್ವಸೌಹಾರ್ದ ಕೋ–ಆಪರೇಟಿವ್ ಕ್ರೆಡಿಟ್ ಲಿಮಿಟೆಡ್ ಹಾಗೂ ಕಣ್ವ ಸಮೂಹ ಸಂಸ್ಥೆಯ ಆರ್ಥಿಕ ಅವ್ಯವಹಾರದಿಂದ ಸರಕಾರ ಜಿ.ನಾಗೇನಹಳ್ಳಿಯ ಕಣ್ವ ಇಂಟರ್ ನ್ಯಾಷನಲ್ ಶಾಲೆಯ ಜಮೀನು, ಕಟ್ಟಡ ಮತ್ತು ನಿವೇಶನ ಮುಟ್ಟುಗೋಲು ಹಾಕಿಕೊಂಡಿದೆ. ಕಣ್ವಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 417 ಜನ ವಿದ್ಯಾರ್ಥಿಗಳ ಶಿಕ್ಷಣ ಅತಂತ್ರ ಸ್ಥಿತಿಯಲ್ಲಿದ್ದು ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಎದುರಾಗಿದೆ.

    ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂ ವ್ಯಾಪ್ತಿಯ ದೊಡ್ಡೇನಹಳ್ಳಿ ಸರ್ವೆ ನಂ.5/4ರಲ್ಲಿ 2 ಎಕರೇ 37 ಕುಂಟೆ ಜಮೀನು ಮತ್ತು 0.26ಕುಂಟೆ ಕಣ್ವ ಇಂಟರ್ ನ್ಯಾಷನಲ್ ಶಾಲೆ ಮತ್ತು ಶಾಲಾ ಕಟ್ಟಡವನ್ನು ಕೆಪಿಐಡಿಎಫ್ ಇ ಕಾಯ್ದೆಯಡಿ ಸರಕಾರ ಮುಟ್ಟುಗೋಲು ಹಾಕಿಕೊಂಡಿದೆ. ಶಾಲೆಯ ಕಾರ್ಯದರ್ಶಿ ಶಿಕ್ಷಣಗೆ ಮನವಿ ಮಾಡಿ ನಿರ್ವಹಣೆಗೆ ಬಿಇಓರನ್ನು ಆಡಳಿತಾಧಿಕಾರಿ ಆಗಿ ನೇಮಿಸಲು ಮಾಡಿದ ಮನವಿಗೂ ಈಗ ಅವಕಾಶ ಇಲ್ಲದಾಗಿದೆ.

    ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೇಗೆ ಶಾಲೆ ಮುಂದುವರೆಸಲು ಸರಕಾರ ಚಿಂತನೆ ನಡೆಸುತ್ತಿದೆ. ಆದರೇ ಶಾಲೆಯ ಐಸಿಎಸ್ ಸಿ ಮಾನ್ಯತೆ 2025 ರ ಮಾರ್ಚ್ 31ಕ್ಕೆ ಮುಕ್ತಾಯವಾಗಿದೆ. ಇದುವರೆಗೆ ಶಾಲೆಯು ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಯ ಮಾನ್ಯತೆ ಸಹ ನವೀಕರಣ ಮಾಡದಿರುವುದು ಇನ್ನೂ ಅನುಮಾನಕ್ಕೆ ಕಾರಣವಾಗಿದೆ.

    ಜಿ.ನಾಗೇನಹಳ್ಳಿಯ ಕಣ್ವಶಾಲೆಯ ಭವಿಷ್ಯದ ಬಗ್ಗೆ ಪೋಷಕರಲ್ಲಿ ಅನಿಶ್ಚಿತತೆ ಮುಂದುವರೆದಿದೆ. ಸರಕಾರವು ಶೀರ್ಘದಲ್ಲೇ ಪೋಷಕರ ಸಭೆ ಕರೆದು ವಾಸ್ತವಾಂಶ ತಿಳಿಸಬೇಕಿದೆ. ಒಟ್ಟಾರೆಯಾಗಿ ಕಣ್ವ ಸಮೂಹದ ಆರ್ಥಿಕ ಅವ್ಯವಹಾರದ ಸಮಸ್ಯೆಯು ಕಣ್ವಶಾಲೆಯ 417ಜನ ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕೆ ಸಂಕಷ್ಟ ತಂದಿದೆ. ಸರಕಾರವು ತಕ್ಷಣ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಕಾಪಾಡಬೇಕಿದೆ ಎಂದು ಪೋಷಕರು ಒತ್ತಾಯ ಮಾಡಿದ್ದಾರೆ.

    ಶಿಕ್ಷಣ ಇಲಾಖೆ ಆಯುಕ್ತರ ಆದೇಶ:

    ಕಣ್ವ ಇಂಟರ್ ನ್ಯಾಷನಲ್ ಶಾಲೆಯು ಐಸಿಎಸ್ ಸಿ ಪಠಕ್ರಮ ಆಧಾರಿತ ಶಾಲೆ. ಕಣ್ವಶಾಲೆಯ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮತ್ತು ಆಡಳಿತಾಧಿಕಾರಿ ನೇಮಿಸಲು ಸಾಧ್ಯವಿಲ್ಲ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಣ್ವಶಾಲೆಯ ಮಕ್ಕಳ ಪೋಷಕರ ಸಭೆ ಕರೆದು ವಾಸ್ತವಾಂಶ ಗಮನಕ್ಕೆ ತರಬೇಕು. ಶಿಕ್ಷಣ ಇಲಾಖೆಯ ನಿಯಮಾನುಸಾರ ಸದರಿ ಶಾಲೆ ಮುಂದುವರೆಸಲು ಅವಕಾಶವಿಲ್ಲ. ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ದಾಖಲಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಧುಗಿರಿ ಡಿಡಿಪಿಐಗೆ 2025ರ ಮಾ.17ರಂದೇ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದಾರೆ.

    ಮಕ್ಕಳಿಗೆ ಉಚಿತ ಶಿಕ್ಷಣದ ಆಮಿಷ:

    ಕಣ್ವ ಇಂಟರ್ ನ್ಯಾಷನಲ್ ಶಾಲೆಯ ಆಡಳಿತ ಮಂಡಳಿಯು ಮಕ್ಕಳ ಪೋಷಕರಿಗೆ ಸಮಸ್ಯೆಯ ವಿಷಯ ತಿಳಿಸದೇ 2025–26ರ ಶೈಕ್ಷಣಿಕ ವರ್ಷಕ್ಕೆ ಶುಲ್ಕವನ್ನು ಕಟ್ಟಿಸಿಕೊಳ್ಳದೇ ಉಚಿತ ಭೋದನೆಯ ವದಂತಿ ಹರಿದಾಡಿವೆ. ಶಾಲೆಯಿಂದ ಮಕ್ಕಳಿಗೆ ಬರುವ ವಾಹನಗಳು ಶುಲ್ಕ ಈವರ್ಷ ಉಚಿತ ಎಂಬ ಮಾತು ಕೇಳಿಬಂದಿವೆ. ಇದು ಪೋಷಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದ್ದು ಶಿಕ್ಷಣ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕಿದೆ.

    417 ಜನ ಮಕ್ಕಳ ಭವಿಷ್ಯವೇ ಅತಂತ್ರ..

    ಕಣ್ವ ಸಮೂಹದ ಜಿ.ನಾಗೇನಹಳ್ಳಿ ಶ್ರೀಕಣ್ವ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 2024–25ನೇ ಸಾಲಿನ ಅನ್ವಯ ನರ್ಸರಿಯಿಂದ 10ನೇ ತರಗತಿ ವರೇಗೆ 417ಜನ ಮಕ್ಕಳು ಐಸಿಎಸ್ ಸಿ ಪಠ್ಯಕ್ರಮ ಅನುಸಾರ ವ್ಯಾಸಂಗ ಮಾಡುತ್ತಿದ್ದಾರೆ. ಮುಖ್ಯಶಿಕ್ಷಕನ ಹುದ್ದೆಯು ಈಗ ಖಾಲಿಯಿದ್ದು 21 ಜನ ಶಿಕ್ಷಕರಿದ್ದಾರೆ. ಶಾಲೆಯ ಜಮೀನು ಮತ್ತು ಕಟ್ಟಡವೇ ಸರಕಾರಕ್ಕೆ ಮುಟ್ಟುಗೋಲು ಆದ ಮೇಲೆ 2025–26ರ ಶೈಕ್ಷಣಿಕ ವರ್ಷದಲ್ಲಿ ಮತ್ತೇ ಜಮೀನು ಸಮಸ್ಯೆ ಎದುರಾದರೇ ಮಕ್ಕಳ ಶಿಕ್ಷಣದ ಪಾಡೇನು ಎಂಬುದೇ ಯಕ್ಷಪ್ರಶ್ನೆ.

    ಜಿ.ನಾಗೇನಹಳ್ಳಿಯ ಕಣ್ವ ಇಂಟರ್ ನ್ಯಾಷನಲ್ ಸ್ಕೂಲ್ ಮುಚ್ಚಿಸಲು ಶಿಕ್ಷಣ ಇಲಾಖೆ ಆಯುಕ್ತರಿಂದ ನಿರ್ದೇಶನವಿದೆ. ಕಣ್ವಶಾಲೆಯಲ್ಲಿ ಏ.೩ರಂದು ಪೋಷಕರ ಸಭೆ ಕರೆಯಲು ಬಿಇಓ ಶಾಲೆಯ ಕಾರ್ಯದರ್ಶಿಗೆ ಮಾ.೨೮ರಂದು ನೊಟೀಸ್ ನೀಡಿದ್ದರು. ಸಭೆ ಕರೆಯಲು ಮಾನ್ಯ ಉಚ್ಚ ನ್ಯಾಯಾಲಯ ತಡೆ ನೀಡಿದೆ ಎಂದು ಮಧುಗಿರಿ ಡಿಡಿಪಿಐ ಗಿರೀಜಾ ಬಿ.ಹೆಚ್. ಹೇಳಿದ್ದಾರೆ.

    ಸರಕಾರದ ಜೊತೆ ಕಣ್ವಶಾಲೆ 30 ವರ್ಷ ಗುತ್ತಿಗೆ ಒಪ್ಪಂದ ಮಾಡಿಕೊಂಡಿದೆ. ಕಣ್ವಶಾಲೆ ಇರುವ ಜಮೀನು ಸರಕಾರದ ಆಸ್ತಿ. ಈಗ ಕಣ್ವಶಾಲೆ ಮಾತ್ರ ನಮ್ಮದು ಅಷ್ಟೆ. ಶಾಲೆಯ ಜಮೀನು ಮತ್ತು ಕಟ್ಟಡದ ಸಮಸ್ಯೆ ಇರೋದು ಸತ್ಯ. ಸರಕಾರದ ಜೊತೆ ಒಪ್ಪಂದ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಕಾಲಾವಕಾಶ ನೀಡಿದೆ ಎಂದು ಬೆಂಗಳೂರು ಕಣ್ವ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ರಜತ್ ಪಿ.ಗೌಡ ಹೇಳಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಹಳೇಬೀಡು: ತಂದೆ-ತಾಯಿ ಹಾಗೂ ಅಕ್ಕ–ಭಾವನ ಸವಿ ನೆನಪಿಗಾಗಿ ಉದ್ಯಮಿಯೊಬ್ಬರು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ₹20 ಲಕ್ಷ ವೆಚ್ಚದಲ್ಲಿ ನೂತನ…

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು

    August 28, 2026

    ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.