nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    ತುಮಕೂರು May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    By adminMay 18, 2025No Comments2 Mins Read
    dr n thippeswamy

    ತುಮಕೂರು: ರೈತರ ಅನುಕೂಲಕ್ಕಾಗಿ ಬಿತ್ತನೆ ಬೀಜ ಹಾಗೂ ಕೃಷಿ ಉಪಕರಣಗಳ ದರಪಟ್ಟಿಯನ್ನು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರ ಮತ್ತು ಬೀಜ ಮಾರಾಟ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸೋಮವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಮುಂಗಾರು ಹಂಗಾಮಿಗಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ವಿತರಣೆ, ದಾಸ್ತಾನಿಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳನ್ನು ಸರ್ಕಾರ ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡಬೇಕು. ರೈತರಿಗೆ ಅಗತ್ಯ ಬಿತ್ತನೆ ಬೀಜಗಳು ಸುಲಭವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ಬೀಜಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.


    Provided by

    ಜಿಲ್ಲೆಯಲ್ಲಿ ಮೇ 20 ರಿಂದ ಬಿತ್ತನೆ ಬೀಜಗಳ ವಿತರಣೆ ಪ್ರಾರಂಭಿಸಲಾಗುತ್ತಿದ್ದು, ರೈತರಿಗೆ ಗುಣಮಟ್ಟದ ಬೀಜ ಒದಗಿಸುವ ದೃಷ್ಟಿಯಿಂದ ವಿತರಣೆಗೆ ಮುನ್ನ ಪ್ರತಿಯೊಂದು ಕೇಂದ್ರದಲ್ಲಿಯೂ ಬೀಜದ ತಳಿ ಹಾಗೂ ಪ್ರತಿ ಲಾಟ್‌ನಿಂದ ಬಿತ್ತನೆ ಬೀಜಗಳ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಿ ಗುಣಮಟ್ಟವನ್ನು ಖಾತ್ರಿ ಪಡಿಸಿಕೊಂಡ ನಂತರ ವಿತರಣೆ ಕಾರ್ಯ ಕೈಗೊಳ್ಳಬೇಕು ಎಂದು ತಿಳಿಸಿದರು.

    ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ಮಾತನಾಡಿ, ಬಿತ್ತನೆ ಬೀಜ ಮಾರಾಟ ಮಾಡಲು ಜಿಲ್ಲೆಯಲ್ಲಿ 50 ರೈತ ಸಂಪರ್ಕ ಕೇಂದ್ರಗಳೊಂದಿಗೆ ಗುಬ್ಬಿ ತಾಲೂಕಿನ ಚೇಳೂರು; ಮಧುಗಿರಿ ತಾಲ್ಲೂಕು ಕಸಬಾ ಹಾಗೂ ಕೊಡಿಗೇನಹಳ್ಳಿ; ಪಾವಗಡ ತಾಲ್ಲೂಕು ಕಸಬಾ ಎಪಿಎಂಸಿ, ನಾಗಲಮಡಿಕೆ, ವೈ.ಎನ್.ಹೊಸಕೋಟೆ, ಲಿಂಗದಹಳ್ಳಿ, ಮಂಗಳವಾಡ; ಶಿರಾ ಎಪಿಎಂಸಿ, ತಾವರೆಕೆರೆ, ಪಟ್ಟನಾಯಕನಹಳ್ಳಿ, ಹುಲಿಕುಂಟೆ ಸೇರಿ ಒಟ್ಟು 12 ಹೆಚ್ಚುವರಿ ಮಾರಾಟ ಕೇಂದ್ರಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.

    ರೈತ ಮುಖಂಡ ಆರಾಧ್ಯ ಮಾತನಾಡುತ್ತಾ, ಖಾಸಗಿ ರಸಗೊಬ್ಬರ ಮಾರಾಟ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರದಲ್ಲಿ ರಸಗೊಬ್ಬರವನ್ನು ಮಾರಾಟ ಮಾಡಲಾಗುತ್ತಿದೆ. ಜೊತೆಗೆ ರೈತರಿಗೆ ಬ್ಯಾಂಕುಗಳಲ್ಲಿ ತ್ವರಿತವಾಗಿ ಸಾಲ ಲಭ್ಯವಾಗದ ಕಾರಣ ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೊರೆ ಹೋಗಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ರೈತರ ಸಮಸ್ಯೆಗಳನ್ನು ಸೂಕ್ಷö್ಮವಾಗಿ ಪರಿಗಣಿಸಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆಯ ಅಧಿಕಾರಿಗಳಲ್ಲಿ ಮನವಿ ಮಾಡಿದರು.

    ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಾರದಮ್ಮ, ತುಮಕೂರು ಉಪ ಕೃಷಿ ನಿರ್ದೇಶಕ ಹುಲಿರಾಜ್, ಮಧುಗಿರಿ ಉಪ ಕೃಷಿ ನಿರ್ದೇಶಕ ಚಂದ್ರಕುಮಾರ್ ಎಚ್.ಎಲ್., ಸಹಾಯಕ ಕೃಷಿ ನಿರ್ದೇಶಕರು ಹಾಗೂ ವಿವಿಧ ರೈತ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.