nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ
    ಕೊರಟಗೆರೆ May 19, 2025

    ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ

    By adminMay 19, 2025No Comments2 Mins Read
    manjunath

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ: ಪಟ್ಟಣ ಪಂಚಾಯಿತಿ ಯಿಂದ ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಕಸಬಾ ಹೋಬಳಿ ಕೊರಟಗೆರೆ ಸರ್ವೇ.ನಂ. 181ರಲ್ಲಿ 3 ಎಕೆರೆ ಭೂ  ಮಂಜುರಾತಿಗೆ ಕೋರಿದ ಹಿನ್ನೆಲೆ ತಹಶೀಲ್ದಾರ್ ಕೆ.ಮಂಜುನಾಥ್ ನೇತೃತ್ವದಲ್ಲಿ ಕಂದಾಯ ಇಲಾಖೆ ಅಧಿಕಾರಿ ವರ್ಗ ಸರ್ವೇ ಕಾರ್ಯದಲ್ಲಿ ಭಾಗಿಯಾಗಿತ್ತು.


    Provided by
    Provided by

    ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಎಫ್‌ಎಸ್‌ಟಿಪಿ ಘಟಕ ನಿರ್ಮಾಣಕ್ಕೆ ಸರ್ವೇ ನಂಬರ್ 181ರಲ್ಲಿ ಸರ್ಕಾರಿ ಗೋಮಾಳದಲ್ಲಿ 3 ಎಕೆರೆ  ಭೂಮಿ ನೀಡುವಂತೆ ಪ.ಪಂಚಾಯಿತಿಯು ಕಂದಾಯ ಇಲಾಖೆಗೆ ಕೋರಿತ್ತು. ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ತಹಶೀಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ಸರ್ವೇ ಮಾಡಿದ್ದು ಶೀಘ್ರದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಸಾರ್ವಜನಿಕರಿಂದ ತಕರಾರು:

    ಜೀವನಕ್ಕೆಂದು ಇರುವ ಭೂಮಿಯನ್ನು ಕಿತ್ತುಕೊಂಡು ಕಸ ವಿಲೇವಾರಿ ಘಟಕಕ್ಕೆ ಭೂ ಮಂಜೂರು ಮಾಡಬೇಡಿ. ಗಂಗಾಧರೇಶ್ವರ ಕೆರೆಗೆ ಸದರಿ ಕಾಲುವೆ ಮೂಲಕವೇ ಮುಂದೆ ಸಾಗುತ್ತಿದೆ. ಕಾಲುವೆ ನೀರನ್ನು ಪ್ರಾಣ  ಪಕ್ಷಿಗಳು ಸೇವಿಸುತ್ತವೆ. ತ್ಯಾಜ್ಯ ವಸ್ತುವಿನಿಂದ ಪರಿಸರದ ಮಾಲಿನ್ಯ ಜೊತೆಗೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪಾರಿಣಾಮ ಬೀರಲಿದೆ ಎಂದು ಸಾರ್ವಜನಿಕರು ತಕರಾರು ವ್ಯಕ್ತಪಡಿಸಿದರು.

    ಈ ವೇಳೆ ಕಂದಾಯ ಇಲಾಖೆಯ ಆರ್.ಐ ಬಸವರಾಜು, ಆರೋಗ್ಯ ನಿರೀಕ್ಷಕ ಹುಸೇನ್, ಸರ್ವೇಯರ್ ನಾಗಲಾಂಬಿಕೆ, ಪಟ್ಟಣ ಪಂಚಾಯಿತಿ ವೇಣುಗೋಪಾಲ್, ಪ.ಪಂ ಸದಸ್ಯ ನಂದೀಶ್ ಹಾಜರಿದ್ದರು.

    ಭೂಮಿಯ ಹದ್ದು ಬಸ್ತು ಕಾರ್ಯ:

    ಪ.ಪಂಚಾಯಿತಿಯು ಫೀಕಲ್ ಸ್ಲಡ್ಜ್ ಟ್ರಿಟ್‌ಮೆಂಟ್ ಪ್ಲಾಂಟ್ ನಿರ್ಮಾಣಕ್ಕೆ ಕಂದಾಯ ಇಲಾಖೆ ಬಳಿ ಸವೇ.ನಂ. 181ರಲ್ಲಿ 3 ಎಕೆರೆ ಭೂ ಮಂಜುರಾತಿಗೆ ಕಂದಾಯ ಇಲಾಖೆಗೆ ಕೋರಿದ ಹಿನ್ನೆಲೆ ೩ಎಕೆರೆ ಸರ್ಕಾರಿ ಜಮೀನನ್ನು ಸರ್ವೇ ಮಾಡಿದ್ದು, ಸರ್ವೇಯರ್ ನಾಗಲಾಂಭಿಕೆಗೆ ಶೀಘ್ರದಲ್ಲೇ ವರದಿ ನೀಡುವಂತೆ ತಹಶೀಲ್ದಾರ್ ಸೂಚನೆ ನೀಡಿದರು.

    ಸರ್ಕಾರದ ನಿರ್ದೇಶನದ ಮೆರೆಗೆ ಘನತ್ಯಾಜ್ಯ ಮತ್ತು ಫೀಕಲ್ ತ್ಯಾಜ್ಯ ಸ್ಥಳೀಯ ಇಲಾಖೆ ವ್ಯಾಪ್ತಿಯಲ್ಲಿ ನಿರ್ಮಿಸಬೇಕು. ಇದಕ್ಕೆ ಬೇಕಾದ ಕ್ರಿಯಾಯೋಜನೆ ರೂಪಿಸಿಕೊಂಡು ಘಟಕ ಸ್ಥಾಪನೆ ಮಾಡಲಾಗುವುದು. ಈ ಘಟಕ ಮತ್ತೊಬ್ಬರಿಗೆ ತೊಂದರೆ ಮಾಡುವ ಉದ್ದೇಶ ಹೊಂದಿಲ್ಲ, ಸಾರ್ವಜನಿಕರ ದೂರನ್ನು ಪರಿಶೀಲಿಸಿ ಪರ್ಯಾಯ ವ್ಯವಸ್ಥೆಯನ್ನು ಕಂಡುಕೊಳ್ಳಲಾಗುವುದು.

    — ಕೆ.ಮಂಜುನಾಥ್,  ತಹಶೀಲ್ದಾರ್, ಕೊರಟಗೆರೆ.


    ಎಫ್‌ ಎಸ್‌ ಟಿ ಪಿ ಘಟಕ ನಿರ್ಮಾಣದಿಂದ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಬಹುಮುಖ್ಯ ಪಾತ್ರ ವಹಿಸುತ್ತದೆ. 3 ಎಕೆರೆ ಪ್ರದೇಶದಲ್ಲಿ 3.5 ಕೋಟಿ ವೆಚ್ಚದಲ್ಲಿ ಈ ಘಟಕ ಸ್ಥಾಪನೆಯಾಗಲಿದ್ದು ಕಸ ವಿಲೇವಾರಿ ಘಟಕಕ್ಕೆ ಈ ಸ್ಥಳವನ್ನು ಬಳಸುವುದಿಲ್ಲ, ರೈತರಿಗೆ ಮತ್ತು ಸ್ಥಳೀಯ ಸಾರ್ವಜನಿಕರಿಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಆರೋಗ್ಯ ಮತ್ತು ಪರಿಸರ ಹಾನಿಗೆ ಸಮಸ್ಯೆ ಉಂಟಾಗುವುದಿಲ್ಲ.

    — ಉಮೇಶ್, ಪ.ಪಂ. ಮುಖ್ಯಾಧಿಕಾರಿ.


    ಫೀಕಲ್ ತ್ಯಾಜ್ಯ ಘಟಕ ಸ್ಥಾಪನೆಗೆ ಕಂದಾಯ ಇಲಾಖೆಯಿಂದ ಸರ್ವೇ ಮಾಡಿದ್ದಾರೆ. ಒಂದು ವೇಳೆ ಫೀಕಲ್ ತ್ಯಾಜ್ಯ ಬದಲಿಗೆ ಕಸ ವಿಲೇವಾರಿ ಘಟಕ ನಿರ್ಮಿಸಿದರೆ ಪರಿಸರಕ್ಕೆ ಹಾನಿಯಾಗುವುದು. ಸರ್ವೇ.ನಂ. 255ರಲ್ಲಿ ಕಲ್ಲು ಬಂಡೆ ವಿಂಗಡಿಸಿಕೊಂಡು ಸುಮಾರು 30 ಕ್ಕೂ ಹೆಚ್ಚು ವರ್ಷಗಳಿಂದ 2 ಎಕೆರೆ 24 ಗುಂಟೆ ಜಮೀನಿನಲ್ಲಿ ಬೇಸಾಯ ಮಾಡಿಕೊಂಡು ಅನುಭೋಗದಲ್ಲಿದ್ದೇವೆ. ಆದ್ದರಿಂದ ರೈತರನ್ನು ಸರ್ಕಾರವೇ ಕಾಪಾಡಬೇಕು.

    — ಪೆಣ್ಣಯ್ಯ,  ಸ್ಥಳೀಯ ಬಡರೈತ,  ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.…

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.