ತುಮಕೂರು: ಮೇ 29ರಿಂದ ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷವು ಆರಂಭವಾಗಲಿದೆ. ಶಾಲೆಗಳ ಆರಂಭಕ್ಕೂ ಮುನ್ನ ಪ್ರವೇಶಾತಿ ನಡೆಯಬೇಕು. ಆದರೆ ಸರ್ಕಾರಿ ಶಾಲೆಗಳ ಶಿಕ್ಷಕರನ್ನು ಜಾತಿಗಣತಿಗೆ ನಿಯೋಗಿಸಲಾಗಿದೆ. ಈಗಾಗಲೇ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಕುಸಿದಿರುವ ಸರ್ಕಾರಿ ಶಾಲೆಗಳ ದಾಖಲಾತಿಯ ಮೇಲೆ ಇದು ದುಷ್ಪರಿಣಾಮ ಬೀರುತ್ತದೆ. ಖಾಸಗಿ ಶಾಲೆಗಳ ಶಿಕ್ಷಕರು ಕಳೆದ ತಿಂಗಳಿನಿಂದ ದಾಖಲಾತಿಯಲ್ಲಿ ನಿರತರಾಗಿರುವಾಗ ಸರ್ಕಾರಿ ಶಾಲೆಗಳಿಂದ ಮಕ್ಕಳನ್ನು ದೂರವಿರಿಸಿದಂತಾಗುತ್ತದೆ ಎಂದು AIDSO ತಿಳಿಸಿದೆ.
ಸರ್ಕಾರವು ಈ ಕೂಡಲೇ ಗಮನಹರಿಸಿ ಸರ್ಕಾರಿ ಶಾಲೆಯ ಶಿಕ್ಷಕರನ್ನು ಗಣತಿಯ ಕೆಲಸದಿಂದ ಬಿಡುಗಡೆಗೊಳಿಸಿ ಸರ್ಕಾರಿ ಶಾಲೆಗಳ ದಾಖಲಾತಿಗಾಗಿ ನಿಯೋಗಿಸಬೇಕೆಂದು ಎಐಡಿಎಸ್ ಓ ಕರ್ನಾಟಕ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ ಎಂದು ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ.ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW