nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025

    ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ

    November 21, 2025
    Facebook Twitter Instagram
    ಟ್ರೆಂಡಿಂಗ್
    • ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    • ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
    • ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
    • ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
    • ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು
    • ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
    • ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ
    • ಬೀದರ್ | ಪ್ರತಿ ಟನ್ ಕಬ್ಬಿಗೆ 2,950ರೂ. ನಿಗದಿ: ಪ್ರತಿಭಟನೆ ಕೈ ಬಿಟ್ಟ ರೈತರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡಕ್ಕೆ ಮೊದಲ ಪ್ರತಿಷ್ಟಿತ ಬೂಕರ್ ಪ್ರಶಸ್ತಿ ತಂದು ಕೊಟ್ಟ ಬಾನು ಮುಷ್ತಾಕ್: ತುಮಕೂರು ಜಿಲ್ಲಾ ಕಸಾಪ ಅಭಿನಂದನೆ
    ರಾಜ್ಯ ಸುದ್ದಿ May 22, 2025

    ಕನ್ನಡಕ್ಕೆ ಮೊದಲ ಪ್ರತಿಷ್ಟಿತ ಬೂಕರ್ ಪ್ರಶಸ್ತಿ ತಂದು ಕೊಟ್ಟ ಬಾನು ಮುಷ್ತಾಕ್: ತುಮಕೂರು ಜಿಲ್ಲಾ ಕಸಾಪ ಅಭಿನಂದನೆ

    By adminMay 22, 2025No Comments2 Mins Read
    Banu Mushtaq

    ತುಮಕೂರು: ಕನ್ನಡಕ್ಕೆ ಮೊದಲ ಪ್ರತಿಷ್ಟಿತ ಬೂಕರ್ ಪ್ರಶಸ್ತಿಯನ್ನು ತಂದು ಕೊಟ್ಟ ಲೇಖಕಿ ಬಾನು ಮುಷ್ತಾಕ್ ಮತ್ತು ಈ ಕೃತಿಯನ್ನು ಸಮರ್ಥವಾಗಿ ಇಂಗ್ಲಿಷ್ ಗೆ ಅನುವಾದಿಸಿ ಬೂಕರ್ ಪುರಸ್ಕಾರ ಬರಲು ಕಾರಣಕರ್ತರಾದ ಅನುವಾದಕಿ ದೀಪಾ ಭಸ್ತಿಯವರನ್ನೂ ಸಹ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪ ಅಭಿನಂದಿಸಿದ್ದಾರೆ.

    ಈ ಮೂಲಕ ಕನ್ನಡ ಸಾಹಿತ್ಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಅನುವಾದ ಸಾಹಿತ್ಯದ ಮಹತ್ವವೂ ರುಜುವಾತಾಗಿದೆ. ಈ ಮೊದಲೇ ಕನ್ನಡದ ಅನೇಕ ಕೃತಿಗಳು ಇಂಗ್ಲೀಷ್ ಗೆ ಸಮರ್ಥವಾಗಿ ಅನುವಾದವಾಗಿದ್ದರೆ ನೋಬಲ್ ಪುರಸ್ಕಾರಕ್ಕೂ ಸಹ ಅರ್ಹವಾಗುತ್ತಿದ್ದವು. ಬಾನು ಮುಷ್ಕಾಕ್ ಅವರ ‘ಹಸೀನಾ’ ಕಥೆಯನ್ನು ಆಧರಿಸಿ ಗಿರೀಶ್ ಕಾಸರವಳ್ಳಿಯವರು ನಿರ್ದೇಶಿಸಿದ ಚಿತ್ರ ರಾಷ್ಟ್ರ ಪುರಸ್ಕಾರವನ್ನು ಪಡೆದಿರುವುದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದಾಗಿದೆ. ಇನ್ನೊಮ್ಮೆ ಬಾನು ಮುಷ್ತಾಕ್ ಅವರಿಂದ ಅಂತಹದೇ ಇತಿಹಾಸ ಸೃಷ್ಟಿಯಾಗಿದೆ ಎಂದು ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಪ್ರಶಂಸಿಸಿದ್ದಾರೆ.


    Provided by
    Provided by

    ಬಾನು ಮುಷ್ತಾಕ್ ಅವರು 1990ರಿಂದ 2023ರ ನಡುವೆ ಬರೆದ ಹನ್ನೆರಡು ಕಥೆಗಳ ಇಂಗ್ಲೀಷ್ ಅನುವಾದವನ್ನು ದೀಪಾ ಭಸ್ತಿಯವರು “ಹಾರ್ಟ್ ಲ್ಯಾಂಪ್” ಶೀರ್ಷಿಕೆಯಲ್ಲಿ ಅನುವಾದ ಮಾಡಿದ್ದರು. ಈ ಕೃತಿಗೆ ಮೊದಲು ಅಂತರರಾಷ್ಟ್ರೀಯ ಪೆನ್ ಟ್ರಾನ್ಸ್ ಲೇಟ್ಸ್ ಪ್ರಶಸ್ತಿ ದೊರಕಿತು. ನಂತರ ಸಂಕಲನದ ‘ರೆಡ್ ಲುಂಗಿ’ ಕಥೆ, 2024ರ ಜೂನ್ ಜುಲೈ ತಿಂಗಳ ದ ಪ್ಯಾರಿಸ್ ರಿವ್ಯೂ ಮ್ಯಾಗಝೀನ್ ನಲ್ಲಿ ಪ್ರಕಟವಾಯಿತು. ಸಂಕಲನದ ಇನ್ನೊಂದು ಕಥೆ “ಒಮ್ಮೆ ಹೆಣ್ಣಾಗು ಪ್ರಭುವೆ”ಯ ಅನುವಾದ ಇನ್ನೊಂದು ಸಾಹಿತ್ಯಕ ಪತ್ರಿಕೆ ಯಾದ “ದಿ ಬ್ಯಾಫ್ಲರ್”ನಲ್ಲಿ ಪ್ರಕಟವಾಯಿತು.

    ನಂತರ ಹಾರ್ಟ್ ಲ್ಯಾಂಪ್ ಕಥಾ ಸಂಕಲನವು ಅಮೆರಿಕದಲ್ಲಿ ಹಾಗೂ ಬ್ರಿಟನ್ ನಲ್ಲಿ ನಂತರ ಭಾರತದಲ್ಲಿ ಪೆಂಗ್ವಿನ್ ರಾಂಡಮ್ ಹೌಸ್ ನಿಂದ 2025ರ ಏಪ್ರಿಲ್ ನಲ್ಲಿ ಬಿಡುಗಡೆಯಾಗಿದ್ದು ಪ್ರಕಟಣಾ ಪೂರ್ವದಲ್ಲಿಯೇ ಕಥಾ ಸಂಕಲನ 2025 ರ ಅಂತರ ರಾಷ್ಟ್ರೀಯ ಬುಕ್ಕರ್ ಬಹುಮಾನದ ಪ್ರಧಾನ ಸುತ್ತಿಗೆ ಆಯ್ಕೆಯಾಗಿದ್ದು ಈಗ ಅಂತಿಮವಾಗಿ ಪುರಸ್ಕಾರವನ್ನು ಪಡೆದಿದೆ.

    ಇದು ಕನ್ನಡಕ್ಕೆ ದೊರೆತ ಮೊದಲ ಬೂಕರ್ ಪುರಸ್ಕಾರ ಮತ್ತು ಭಾರತಕ್ಕೆ ದೊರೆತ ಆರನೆಯದು ಎಂದು ಪ್ರಸ್ತಾಪಿಸಿರುವ ಕೆ.ಎಸ್.ಸಿದ್ದಲಿಂಗಪ್ಪನವರು ಪುರಸ್ಕಾರದ ಹಾದಿಯನ್ನು ನೆನಪು ಮಾಡಿಕೊಂಡರು. ಬಾನು ಮುಷ್ತಾಕ್ ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆಗೆ ನಿಕಟ ಸಂಪರ್ಕ ಇಟ್ಟುಕೊಂಡವರು. ಮಂಡ್ಯದಲ್ಲಿ ನಡೆದ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು “ಪುನಶ್ಚೇತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು” ವಿಚಾರ ಗೋಷ್ಟಿಯ ಅಧ್ಯಕ್ಷತೆಯನ್ನು ವಹಿಸಿ ಬಹು ಮೌಲಿಕವಾದ ಮಾತುಗಳನ್ನಾಡಿದ್ದರು. ವಿಧಾನ ಸೌಧದ ಆವರಣದಲ್ಲಿ ಅಯೋಜಿತವಾಗಿದ್ದ ‘ಪುಸ್ತಕ ಮೇಳ’ದ ಸಂದರ್ಭದಲ್ಲಿ 2.03.2025ರಂದು ನಡೆದ “ಕನ್ನಡ ಸಾಹಿತ್ಯದಲ್ಲಿ ಸರ್ವ ಸಮಭಾವ ಚಿಂತನೆಗಳು” ಗೋಷ್ಟಿಯಲ್ಲಿ ಭಾಗವಹಿಸಿದ್ದನ್ನು ಸ್ಮರಿಸಬಹುದು ಎಂದು ಕೆ.ಎಸ್.ಸಿದ್ಧಲಿಂಗಪ್ಪ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

     

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ಸರಗೂರು:  ಹಳ್ಳಿಗಾಡಿನ ಜನರಿಗೆ ಆರೋಗ್ಯವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ…

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025

    ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ

    November 21, 2025

    ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ

    November 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.