ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದ ವತಯಿಂದ ನಡೆಯುತ್ತಿರುವ ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಸಂಸ್ಕೃತ, ವೇದ, ಜ್ಯೋತಿಷ್ಯ ಮತ್ತು ವೀರಶೈವಾಗಮ ಪಾಠಶಾಲೆಗೆ 2025–26ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಾತಿಯು ಜೂನ್ 2 ರಿಂದ ಪ್ರಾರಂಭವಾಗಲಿದೆ ಎಂದು ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಾಠಶಾಲೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಪಾಠಶಾಲೆಯಲ್ಲಿ ಸಂಸ್ಕೃತ ಪ್ರಥಮ 1, 2, 3ನೇ ತರಗತಿ; ಸಂಸ್ಕೃತ ಕಾವ್ಯ 1, 2ನೇ ತರಗತಿ; ವೀರಶೈವ ವೇದ ಪ್ರಥಮ, ಪ್ರವೇಶ ಮೂಲ ತರಗತಿ; ವೀರಶೈವಾಗಮ ಪ್ರವರ, ಪ್ರವೀಣ ತರಗತಿ ಹಾಗೂ ಜ್ಯೋತಿಷ್ಯ ತರಗತಿಯನ್ನು ನಡೆಸಲಾಗುವುದು. ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಬೋಧಿಸಲಾಗುವುದು. ಆಸಕ್ತರು ಪಾಠಶಾಲೆಯ ಮುಖ್ಯೋಪಾಧ್ಯಾಯ(ಮೊ.ಸಂ.9731110045)ರನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW