ತುಮಕೂರು: ಗುಬ್ಬಿ ತೋಟಗಾರಿಕೆ ಇಲಾಖೆಯು 2025–26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರು ಹಾಗೂ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಿದೆ.
ಬಾಳೆ, ಮಾವು, ಪಪ್ಪಾಯ ಹಾಗೂ ದಾಳಿಂಬೆ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಡ್ರ್ಯಾಗನ್, ಬೆಣ್ಣೆಹಣ್ಣು, ಹಲಸು, ಹುಣಸೆ ಹಣ್ಣಿನಂತಹ ಅಪ್ರಧಾನ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಸುಗಂದರಾಜ, ಚೆಂಡುಹೂ, ಸೇವಂತಿಗೆ ಹಾಗೂ ಇತರೆ ಬಿಡಿ ಹೂವಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಹೈಬ್ರಿಡ್ ತರಕಾರಿ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಗೋಡಂಬಿ, ಕೋಕೊ, ಕಾಳುಮೆಣಸು ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣ; ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ಪ್ಲಾಸ್ಟಿಕ್ ಹೊದಿಕೆ, ದಾಳಿಂಬೆ ಬೆಳೆಗೆ ಪಕ್ಷಿ ನಿರೋಧಕ ಬಲೆ ಅಳವಡಿಕೆ, ಸಮಗ್ರ ಕೀಟ, ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ; ಕೋಯ್ಲೋತ್ತರ ನಿರ್ವಹಣೆ; ಪ್ಯಾಕ್ಹೌಸ್; ಪ್ರಾಥಮಿಕ ಸಂಸ್ಕರಣಾ ಘಟಕ; ಕಡಿಮೆ ವೆಚ್ಚದ ಈರುಳ್ಳಿ ಶೇಖರಣಾ ಘಟಕ; ಸ್ಟ್ಯಾಟಿಕ್ ಮೊಬೈಲ್ ವೆಂಡಿಂಗ್ ಕಾರ್ಟ್ ಖರೀದಿಸಲು ನೆರವು ನೀಡಲಾಗುವುದು. ಹಳೆ ತೋಟಗಳ ಪುನಃಶ್ಚೇತನ, ಜೇನು ಸಾಕಾಣಿಕೆ, ಮಿನಿಟ್ರಾಕ್ಟರ್, ಪವರ್ ಟಿಲ್ಲರ್, ಟ್ರಾಕ್ಟರ್ ಆಪರೇಟೆಡ್ ಸ್ಪ್ರೇಯರ್ ಗಳಿಗೆ ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಕಾರ್ಯಕ್ರಮಗಳನ್ನಾಧರಿಸಿ ಶೇ.25 ರಿಂದ 50ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತ ರೈತರು ಹಾಗೂ ಉದ್ದಿಮೆದಾರರು ತಮ್ಮ ಅರ್ಜಿಯೊಂದಿಗೆ ಪಹಣಿ, ಬೆಳೆ ದೃಢೀಕರಣ, ಚೆಕ್ ಬಂದಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಜಾತಿ ಪ್ರಮಾಣ ಪತ್ರ(ಪ.ಜಾತಿ ಮತ್ತು ಪ.ಪಂಗಡ ರೈತರಿಗೆ), ಜಂಟಿ ಖಾತೆ ಇದ್ದಲ್ಲಿ ಒಪ್ಪಿಗೆ ಪ್ರಮಾಣ ಪತ್ರ, ಖಾತೆದಾರರು ಮರಣ ಹೊಂದಿದ್ದಲ್ಲಿ ಮರಣ ಪ್ರಮಾಣ ಪತ್ರ ಮತ್ತಿತರೆ ದಾಖಲಾತಿಗಳನ್ನು ಜೂನ್ 5ರೊಳಗಾಗಿ ಗುಬ್ಬಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.08131-295512ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW