ವಿಜಯಪುರ: ಪಾಪ ಕುಮಾರಸ್ವಾಮಿಗೆ ಮೆಂಟ್ಲು, ಹೆಚ್ಚು ಕಡಿಮೆ ಆಗಿರಬೇಕು. ಕುಮಾರಸ್ವಾಮಿಗೆ ತಲೆ ಸರಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರನ್ಯಾ ಚಿನ್ನದ ವಿಚಾರ ಹೇಳಿದ್ದು ಕಾಂಗ್ರೆಸ್ ನ ಮಹಾ ನಾಯಕ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಕಿಡಿಕಾರಿದ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿಗೆ ಮೆಂಟ್ಲು. ಪಾಪ ಮೆಂಟ್ಲು ಹೆಚ್ಚು ಕಡಿಮೆ ಆಗಿರಬೇಕು. ಅವರಿಗೆ ತಲೆ ಸರಿ ಇಲ್ಲ. ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ ಎಂದು ಕಿಡಿಕಾರಿದರು.
ಇದೇ ವೇಳೆ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅದು ಬೆಂಗಳೂರು ಜಿಲ್ಲೆ. ರಾಮನಗರ ಚೆಂಜ್ ಮಾಡ್ತಿಲ್ಲ, ರಾಮನಗರ ರಾಮನಗರವಾಗಿಯೇ ಇರುತ್ತೆ. ಇವ್ರ್ಯಾಕೆ ಹಾಸನದಿಂದ ಬಂದ್ರು. ಹಾಸನದಿಂದಲೇ ರಾಜಕಾರಣ ಮಾಡಬೇಕಿತ್ತಲ್ಲ? ಇವ್ರ ಹೆಸ್ರನ್ನ ಮೊದಲು ಚೆಂಜ್ ಮಾಡಿಕೊಳ್ಳಲಿ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW