ತಿಪಟೂರು: ತಾಲ್ಲೂಕಿನ ರಂಗಾಪುರ ಹಾಗೂ ಅನುಗೊಂಡನಹಳ್ಳಿ ಗ್ರಾಮಗಳ ದೊಡ್ಡಕಟ್ಟೆ ಹಾಗೂ ಕಾಳನಕಟ್ಟೆ ಕೆರೆಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 2024ರಲ್ಲಿ ರೂ.16.85 ಲಕ್ಷ ಮೊತ್ತವನ್ನು ವಿನಿಯೋಗಿಸಿ ಪುನಶ್ಚೇತನಗೊಳಿಸಲಾಗಿತ್ತು.
ಸದರಿ ರಂಗಾಪುರದ ದೊಡ್ಡಕಟ್ಟೆ ಹಾಗೂ ಆನುಗೊಂಡನಹಳ್ಳಿ ಕಾಳನಕಟ್ಟೆ ಕೆರೆಗಳ ಹಸ್ತಾಂತರ ಪ್ರಮಾಣ ಪತ್ರವನ್ನು ರಂಗಾಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶಂಕರ್ ಬೀಳೂರು ರವರಿಗೆ ತಾಲ್ಲೂಕು ಯೋಜನಾಧಿಕಾರಿಗಳಾದ ಉದಯ್ ಕೆ. ರವರ ನೇತೃತ್ವದಲ್ಲಿ ವಿತರಿಸಲಾಯಿತು.
ಈ ಸಂದರ್ಭ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಪ್ರಮೋದ್, ವಲಯ ಮೇಲ್ವಿಚಾರಕ ದಿನೇಶ್, ಸಿ.ಎಸ್.ಸಿ. ಸೇವಾದರರಾದ ಆಶಾರವರು ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW