ಪಾವಗಡ: ಪಟ್ಟಣದಲ್ಲಿ 7 ವರ್ಷಗಳಿಂದ ಪತ್ರಿಕೆ ವಿತರಣೆಯಲ್ಲಿ ತೊಡಗಿದಂತಹ ಅನಿಲ್ ಕುಮಾರ್ ಅವರಿಗೆ ಹೆಲ್ಪ್ ಸೊಸೈಟಿ ವತಿಯಿಂದ ಆರ್ಥಿಕ ಸಹಾಯ ಮಾಡಲಾಯಿತು.
ಈ ವೇಳೆ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂಶಶಿಕಿರಣ್ ಅವರು ಮಾತನಾಡಿ, ಪಾವಗಡ ತಾಲೂಕಿನಲ್ಲಿ ಇಂತಹ ಹಲವು ಪ್ರತಿಭೆಗಳಿವೆ, ಪ್ರತಿಭೆಗಳನ್ನು ಗುರುತಿಸುವಂತಹ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.
ಇನ್ನು ಆರ್ಥಿಕ ನೆರವನ್ನು ಪಡೆದ ಅನಿಲ್ ಕುಮಾರ್ ಮಾತನಾಡಿ, ನಮ್ಮನ್ನು ಗುರುತಿಸಿ ಈಗ ವಿದ್ಯಾಭ್ಯಾಸಕ್ಕೆ ನೆರವು ನೀಡಿದಂತೆ ಹೆಲ್ಪ್ ಸೊಸೈಟಿಯವರಿಗೆ ಅಭಾರಿಯಾಗಿರುತ್ತೇನೆ ಎಂದು ತಿಳಿಸಿದರು.
ಇದೇ ವೇಳೆ ಹೆಲ್ಪ್ ಸೊಸೈಟಿ ಯ ಪದಾಧಿಕರಿಗಳಾದ ರಾಕೇಶ, ಮಂಜುನಾಥ್, ಅನಿಲ್ ಕುಮಾರ್ ಆದಿ ಕೇಶವ, ಸಾಗರ, ಸೇರಿ ಹಲವರು ಇದೇ ವೇಳೆ ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB