ಕೊರಟಗೆರೆ : ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ 19ನೇ ವರ್ಷದ ವಾಷಿಕೋತ್ಸವ ಅಂಗವಾಗಿ ಜೂ.8ರಂದು ಶ್ರೀಜಗದ್ಗುರು ರೇಣುಕಾಚಾರ್ಯರ, ಶ್ರೀಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಹಾಗೂ ಸಾಮೂಹಿಕ ವಿವಾಹಗಳು. ಜನ ಜಾಗೃತಿ ಧರ್ಮ ಸಮಾರಂಭ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಶ್ರೀಬಸವೇಶ್ವರ ದೇವಾಲಯದಲ್ಲಿ ಸಿದ್ದರಬೆಟ್ಟ ಶ್ರೀಮಠದಿಂದ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಪ್ರತಿವರ್ಷದಂತೆ ಈ ವರ್ಷವು ಸಹ ಮಠದ ವಾರ್ಷಿಕೋತ್ಸವದ ಅಂಗವಾಗಿ ಜೂ.6ರಿಂದ 8ರವರೆಗೆ ಮೂರು ದಿನಗಳ ಕಾಲ ಧಾರ್ಮಿಕ ಪೂಜೆ ಕಾರ್ಯಕ್ರಮಗಳು ನಡೆಯಲಿವೆ. ಮೊದಲ ದಿನ(ಜೂ.6) ಗಂಗಾ ಪೂಜೆ, ಗಣಪತಿಪೂಜೆ, ಪುಣ್ಯಾಹ ನಾಂದಿ, ಪಂಚ ಕಳಸ ಸ್ಥಾಪನೆ, ನವಗ್ರಹ ಮತ್ತು ಶ್ರೀರುದ್ರ ಹೋಮ, ಎರಡನೇ ದಿನ (ಜೂನ್ 7 ) ರಾಜ್ಯದ ಹಲವು ಶ್ರೀಮಠದ ದಿವ್ಯ ಸಾನಿದ್ಯದಲ್ಲಿ ಪುಸ್ತಕ ದಾಸೋಹ ಸಮಾರಂಭ ನಡೆಯಲಿದೆ ಎಂದು ಹೇಳಿದರು.
ಮೂರನೇ ದಿನ(ಜೂ.8) ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀಕ್ಷೇತ್ರನಾಥ ಸಿದ್ದೇಶ್ವರ ಸ್ವಾಮಿ, ಮಹಾಗಣಪತಿ, ಶ್ರೀಜಗದ್ಗುರು ರೇಣುಕಾಚಾರ್ಯರ ಹಾಗೂ ಶ್ರೀವೀರಭದ್ರ ಸ್ವಾಮಿಗೆ ಮಹಾ ರುದ್ರಾಭಿಷೇಕ ಹಾಗೂ ಬಿಲ್ಬಾರ್ಚನೆ, ಉಚಿತ ಸಾಮೂಹಿಕ ದೀಕ್ಷಾ ಸಮಾರಂಭ, ಬೆ.7:30ಕ್ಕೆ ಪಲ್ಲಕ್ಕಿ ಉತ್ಸವ ನಂತರ 15ಕ್ಕೂ ಹೆಚ್ಚಿನ ವಧು ವರರಿಗೆ ಶ್ರೀಮಠದ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ವಿವಾಹ ಶಾಸ್ತ್ರ, ಧಾರೆ ಕಾರ್ಯಗಳು ನಡೆಯಲಿದೆ ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸಚಿವರಿಗೆ ಆಹ್ವಾನ:
ಜನ ಜಾಗೃತಿ ಧರ್ಮ ಸಮಾರಂಭದ ವೇದಿಕೆ ಕಾರ್ಯಕ್ರಮವನ್ನು ರಾಜ್ಯ ರೈಲ್ವೆ ಖಾತೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಉದ್ಘಾಟಿಸಲಿದ್ದು, ಗೃಹ ಸಚಿವ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರ ಸಚಿವ ಕೆ.ಎನ್ ರಾಜಣ್ಣ ನೂತನ ದಾಸೋಹ ಭವನ ಉದ್ಘಾಟನೆ ಮಾಡಲಿದ್ದು, ಆಂದ್ರ ಪ್ರದೇಶದ ಮಾಜಿ ಮಂತ್ರಿ ರಘುವೀರ ರೆಡ್ಡಿ ವಸತಿ ಗೃಹ ಉದ್ಘಾಟನೆ, ಗೌರಿಬಿದನೂರು ಶಾಸಕ ಕೆ.ಎಚ್ ಪುಟ್ಟ ಸ್ವಾಮಿಗೌಡ ಮಾಂಗಲ್ಯ ವಿತರಣೆ, ಶಾಸಕ ಜಿ.ಎಸ್ ಪಾಟೀಲ್ ವಸ್ತ ವಿತರಣೆ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಮೂಗುತಿ ವಿತರಣೆ ಮಾಡಲಿದ್ದಾರೆ.
ಪರಿಸರ ಜಾಗೃತಿ ಕಾಳಜಿಯಿಂದ ಅರಣ್ಯ ಇಲಾಖೆಯ ತುಮಕೂರು ಶಾಸಕ ಜ್ಯೋತಿ ಗಣೇಶ್ ಸ್ಥಳೀಯ ರೈತರಿಗೆ ಸಸಿ ವಿತರಣೆ ಮಾಡಲಿದ್ದು, ಶಾಸಕ ಸುರೇಶ್ ಗೌಡ, ಎಂಎಲ್ಸಿ ಆರ್.ರಾಜೇಂದ್ರ, ಚಿದಾನಂದ ಗೌಡ, ಪಾವಗಡ ಶಾಸಕ ಶಾಸಕ ವೆಂಕಟೇಶ್ ಸೇರಿ ರಾಜ್ಯದ ಹಲವು ಕ್ಷೇತ್ರದ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಭಾಗವಹಿಸಲಿದ್ದು ಹೆಚ್ಚಿನ ಸಂಖೈಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಈ ವೇಳೆ ಪ.ಪಂ ಸದಸ್ಯ ಎ ಡಿ ಬಲರಾಮಯ್ಯ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾ.ಅಧ್ಯಕ್ಷ ವೀರಭದ್ರಯ್ಯ, ಉಪಾಧ್ಯಕ್ಷ ಕೆ.ಸಿ ಶಿವಕುಮಾರ್, ಎಂ.ಜಿ ಸುಧೀರ್, ಮಹಿಳಾ ಅಧ್ಯಕ್ಷೆ ದ್ರಾಕ್ಷಾಯಿಣಿ, ರಾಜಣ್ಣ, ಬಿಜೆಪಿ ಮುಖಂಡ ಪವನ್ ಕುಮಾರ್, ಮಾಜಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ದೊಡ್ಡೇಗೌಡ್ರು, ಮಾಜಿ ಜಿ.ಪಂ ಅಧ್ಯಕ್ಷೆ ಕುಸುಮ, ಗಿರೀಶ್, ಮಂಜುಳಾ ಆರಾಧ್ಯ, ಕೆ.ಬಿ ಲೋಕೇಶ್, ನಟರಾಜ್, ಮಂಜಣ್ಣ, ಕೆ.ಬಿ ಜಗದೀಶ್, ವಿನಯ್, ರೂಪ ಸೇರಿದಂತೆ ಇತರರು ಇದ್ದರು.
ಜೂ.8ಕ್ಕೆ ಜನ ಜಾಗೃತಿ ಧರ್ಮ ಸಮಾರಂಭ:
ಬಾಳೆ ಹೊನ್ನೂರು ಶ್ರೀಮಠದ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ದಿವ್ಯ ಸಾನಿಧ್ಯದಲ್ಲಿ ಸಿದ್ದರಬೆಟ್ಟ ಶ್ರಿಮಠದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಹಲವು ಶ್ರೀಮಠದ ಶ್ರೀಗಳ ಸಮ್ಮುಖದಲ್ಲಿ ಜೂ.8ರ ಬೆ.10ಕ್ಕೆ ಜನ ಜಾಗೃತಿ ಸಮಾರಂಭ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ವರದಿ : ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW