nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

    May 28, 2026

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನಸ್ನೇಹಿ ವೈದ್ಯಾಧಿಕಾರಿ ಡಾಕ್ಟರ್ ಲಕ್ಷ್ಮಿಕಾಂತಗೆ ನಿವೃತ್ತಿ ಬೀಳ್ಕೊಡುಗೆ
    ಕೊರಟಗೆರೆ June 3, 2025

    ಜನಸ್ನೇಹಿ ವೈದ್ಯಾಧಿಕಾರಿ ಡಾಕ್ಟರ್ ಲಕ್ಷ್ಮಿಕಾಂತಗೆ ನಿವೃತ್ತಿ ಬೀಳ್ಕೊಡುಗೆ

    By adminJune 3, 2025No Comments2 Mins Read

    ಕೊರಟಗೆರೆ : ಸರಳತೆಯೊಂದಿಗೆ ಕರ್ತವ್ಯದಲ್ಲಿ ನಿಷ್ಠೆಯೊಂದಿಗೆ ಕಾರ್ಯನಿರ್ವಹಿಸಿ ನಿವೃತ್ತಿಯಾದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ರವರ ಕಾರ್ಯವೈಖರಿ ಮತ್ತೊಬ್ಬರಿಗೆ ಪ್ರೇರಣೆಯಾಗಿದೆ ಎಂದು ನಿವೃತ್ತಿ ಬೀಳ್ಕೊಡುಗೆ ಸಮಾರಂಭದಲ್ಲಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವರ್ಗ ಮೆಚ್ಚುಗೆ ವ್ಯಕ್ತಪಡಿಸಿದರು.

    ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಮೀಟಿಂಗ್ ಹಾಲ್ ನಲ್ಲಿ ಸಾರ್ವಜನಿಕ ಆಸ್ಪತ್ರೆ ವತಿಯಿಂದ ಆಯೋಜಿಸಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ಜನಸ್ನೇಹಿ, ಪ್ರಾಮಾಣಿಕ ಆಡಳಿತ ವೈದ್ಯಾಧಿಕಾರಿ  ಡಾ. ಲಕ್ಷ್ಮಿಕಾಂತ್ ಗೆ ಕೊರಟಗೆರೆ ಸರ್ಕಾರಿ ಆಸ್ಪತ್ರೆ ಹಾಗೂ ಹೊಳೆನರಸೀಪುರ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳಿಂದ ನಿವೃತ್ತಿ ಬೀಳ್ಕೊಡುಗೆ ನಡೆಸಲಾಯಿತು.


    Provided by
    Provided by

    ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ಕರ್ತವ್ಯ ನಿರ್ವಹಿಸಿ  ಕೊರಟಗೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಡಳಿತ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ  ಡಾಕ್ಟರ್ ಲಕ್ಷ್ಮಿಕಾಂತ್ ರವರಿಗೆ  ತಮ್ಮ ವೈದ್ಯಕೀಯ ವೃತ್ತಿಯಲ್ಲಿ 60 ವರ್ಷಗಳು ಪೂರೈಸಿದ್ದು, ಅವರಿಗೆ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭವನ್ನು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಅದ್ದೂರಿಯಾಗಿ ನಡೆಸಿಕೊಟ್ಟರು.

    ಜನಸ್ನೇಹಿ ಎಲ್ಲರ ನೆಚ್ಚಿನ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್ ಅವರಿಗೆ ನಿವೃತ್ತಿ ಬೀಳ್ಕೊಡುಗೆ ಅದ್ದೂರಿಯಾಗಿ ನೆರವೇರಿಸಿ ಪುಷ್ಪ ಮಳೆಗಳನ್ನ ಹಾಕಿ ಸಿಹಿತಿನಿಸಿ ನೆಚ್ಚಿನ ಜನಸ್ನೇಹಿ ಅಧಿಕಾರಿಗೆ ಪ್ರತಿಯೊಬ್ಬ ವೈದ್ಯರು ಪ್ರೀತಿಯ ಉಡುಗೊರೆಗಳನ್ನು ನೀಡಿ ಶುಭ ಹಾರೈಸಿದರು.

    ನಿವೃತ್ತ ವೈದ್ಯಾಧಿಕಾರಿ  ಡಾ.ಲಕ್ಷ್ಮಿಕಾಂತ ಮಾತನಾಡಿ, ನನ್ನ ವೈದ್ಯಕೀಯ ವೃತ್ತಿಯಲ್ಲಿ ಬಹಳಷ್ಟು  ರೋಗಿಗಳನ್ನ ಕಂಡಿದ್ದೇನೆ, ಎಲ್ಲರ ಜೊತೆ ಪ್ರೀತಿಯಿಂದ ವರ್ತಿಸಿ  ಅವರಿಗೆ ಬೇಕಾಗಿರುವ ಚಿಕಿತ್ಸೆಗಳನ್ನು ನೀಡಿದ್ದೇವೆ. ನನ್ನ ಹೊಳೇನರಸಿಪುರ ಹಾಗೂ ಕೊರಟಗೆರೆ ಎಲ್ಲ ಜನತೆಗೆ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು ತಿಳಿಸುತ್ತೇನೆ ಎಂದು ಹೇಳಿದರು.

    ಡಾ. ಲಕ್ಷ್ಮಿಕಾಂತ್ ಪತ್ನಿ ಮಾತನಾಡಿ, ನಮ್ಮ ಮನೆ ಹಾಗೂ ಮಕ್ಕಳ ಜೊತೆ ಲಕ್ಷ್ಮಿಕಾಂತ್ ಡಾಕ್ಟರ್ ಇದ್ದದ್ದೇ ಕಡಿಮೆ. ಯಾವಾಗಲೂ ಆಸ್ಪತ್ರೆ ರೋಗಿಗಳ ಜೊತೆ ಇದ್ದದ್ದೇ ಜಾಸ್ತಿ ಅವರ ವೃತ್ತಿ ಜೀವನದಲ್ಲಿ ಮನೆಯಲ್ಲಿ ಇಲ್ಲವೇ ಇಲ್ಲ.  ಪ್ರತಿದಿನವೂ ಆಸ್ಪತ್ರೆಯಲ್ಲಿ ಜೀವನ ಕಳೆದವರು ಅವರನ್ನ ಪತಿಯಾಗಿ ಪಡೆದ ನಾನೇ ಪುಣ್ಯವಂತಳು.  ಜನರ ಸೇವೆಗಿಂತ ಬೇರೇನು ಇದೆ ಎನ್ನುತ್ತಾ ಬಂದವರು ಅವರು ಅದಕ್ಕಾಗಿ ಇಂದು ಅವರಿಗೆ ಜನಸ್ನೇಹಿ ಎನ್ನುವ ಬಿರುದು ಜನರು ಕೊಟ್ಟಿದ್ದಾರೆ ಅಷ್ಟೇ ಸಾಕು ನಮಗೆ ಎಂದು ತಿಳಿಸಿದರು.

    ಡಿಡಿಓ ವೈದ್ಯರಾದ ಮೋಹನ್ ದಾಸ್ ಮಾತನಾಡಿ, ಡಾಕ್ಟರ್ ಲಕ್ಷ್ಮಿಕಾಂತ್ ಅವರ ಜೊತೆ ವೈದ್ಯರಾಗಿ ಕರ್ತವ್ಯ ನಿರ್ಮಿಸುವುದೇ ಪುಣ್ಯ ಕಿರಿಯರಾಗಲಿ ಹಿರಿಯರಾಗಲಿ ಎಲ್ಲರನ್ನೂ ಒಂದೇ ರೀತಿಯಾಗಿ ನೋಡಿಕೊಳ್ಳುತ್ತಾ ಪ್ರತಿಯೊಬ್ಬರಿಗೂ ವೈದ್ಯಕೀಯ ಸಲಹೆಗಳನ್ನು ನೀಡುತ್ತಾ ರೋಗಿಗಳ ಜೊತೆ ಸ್ನೇಹಿತನಂತೆ ಮಾತನಾಡುತ್ತಾ  ಎಲ್ಲರನ್ನು ಗೌರವದಿಂದ ಕಂಡಂತಹ ಅಧಿಕಾರಿ ಡಾಕ್ಟರ್ ಲಕ್ಷ್ಮಿಕಾಂತ್  ಅವರಿಗೆ ಇಂದು 60 ವರ್ಷಗಳು ಪೂರೈಸಿದ್ದು ನಿವೃತ್ತಿ ಹೊಂದುತ್ತಿದ್ದಾರೆ.  ಸರ್ಕಾರಿ ಕೆಲಸದಲ್ಲಿ ನಿವೃತ್ತಿ ಸಹಜವಾಗಿರುತ್ತದೆ. ಆದರೆ ನಾವು ಮಾಡಿದಂತಹ ಸೇವೆ ಮಾತ್ರ ಶಾಶ್ವತವಾಗಿ ಉಳಿಯುತ್ತದೆ. ಅಂತಹ ವೈದ್ಯರ ಪಟ್ಟಿಗೆ ಸೇರುವವರು ಡಾ.ಲಕ್ಷ್ಮಿಕಾಂತ್ ಎಂದು ಸಂತೋಷದಿಂದ ಹೇಳುತ್ತೇನೆ  ಎಂದರು.

    ಈ ವೇಳೆ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಸಿಬ್ಬಂದಿಗಳು ಸ್ಥಳೀಯ ಸಾರ್ವಜನಿಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ (Pre-Metric) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ…

    ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

    May 28, 2026

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.