ತುಮಕೂರು: ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಕಚೇರಿಗೆ ಬಿಜೆಪಿ ಮುಖಂಡರು ಹಾಗೂ ಹೋರಾಟಗಾರರು ಮುತ್ತಿಗೆ ಹಾಕಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ತುಮಕೂರು ನಗರದ ಬಿಎಚ್ ರಸ್ತೆಯಲ್ಲಿ ಸಂಪೂರ್ಣ ವಾಹನ ಸಂಚಾರವನ್ನು ನಿಷೇಧ ಮಾಡಲಾಗಿತ್ತು.
ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲು 10 ಮಂದಿ ಹೋರಾಟಗಾರರು ಅದರಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ, ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಅವರುಗಳು ಆಗಮಿಸಿದರು.
ಹೇಮಾವತಿ ಲಿಂಕ್ ಕಾಮಗಾರಿ ಯೋಜನೆ ವಿರೋಧಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಸ್ವಾಮೀಜಿಗಳು ಹಾಗೂ ರೈತರ ಮೇಲೆ ದಾಖಲಿಸಲಾಗಿರುವ ಎಫ್ ಫೈಯರ್ ಗಳನ್ನು ವೃದ್ಧಿಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಅಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ದಿಢೀರ್ ಧರಣಿ ನಡೆಸಲು ಆರಂಭಿಸಿದರು.
ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಲಾಬುರಾಮ್ ಅವರು ಭೇಟಿ ನೀಡಿ ಧರಣಿ ನಿರತರ ಮನವೊಲಿಸಿದರು. ಹೇಮಾವತಿ ಲಿಂಕ್ ಕಾಮಗಾರಿ ಯೋಜನೆ ವಿರೋಧಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಸ್ವಾಮೀಜಿಗಳು ಹಾಗೂ ರೈತರ ಮೇಲೆ ದಾಖಲಿಸಲಾಗಿರುವ ಎಫ್ ಐಆರ್ ಗಳನ್ನು ರದ್ದುಪಡಿಸಬೇಕು ಎಂದು ಅಗ್ರಹಿಸಿ, ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಧರಣಿ ನಡೆಸುತ್ತಿದ್ದ ಜೆಡಿಎಸ್ ಹಾಗೂ ಬಿಜೆಪಿ ಶಾಸಕರ ಮನವೊಲಿಸಿದ ಕೇಂದ್ರ ವಲಯ ಐಜಿಪಿ ಲಾಬು ರಾಮ್ ಅವರು, ತಕ್ಷಣ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಭರವಸೆ ಮೇರೆಗೆ ಧರಣಿ ಕುಳಿತಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ ಹಾಗೂ ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ ಮತ್ತು ಮಾಜಿ ಸಚಿವ ಸಗಡು ಶಿವಣ್ಣ ಅವರುಗಳು ಧರಣಿಯನ್ನು ಕೈಬಿಟ್ಟರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————