ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸರಡಗಿ ಬ್ರಿಡ್ಜ್ ನಲ್ಲಿ ನಡೆದಿದೆ.
ಮಹಾದೇವ್ (20) ನಾಪತ್ತೆಯಾದ ಯುವಕ. ಕಲಬುರಗಿಯಿಂದ ಐದು ಜನ ಸ್ನೇಹಿತರು ಕೂಡಿಕೊಂಡು ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ವೇಳೆ ಈಜುಬಾರದೇ ಮಹಾದೇವ್ ನೀರು ಪಾಲಾಗಿದ್ದಾನೆ.
ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದಿಂದ ಶೋಧಕಾರ್ಯ ಮುಂದುವರಿದಿದೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW