ಕೊರಟಗೆರೆ: ತಾಲ್ಲೂಕಿನಲ್ಲಿ ಚನ್ನರಾಯನದುರ್ಗ ಗ್ರಾಮವು ಒಂದು ದೊಡ್ಡ ಹೋಬಳಿ ಕೇಂದ್ರ ಈ ಚನ್ನರಾಯನದುರ್ಗಕ್ಕೆ ಏಳು ಸುತ್ತಿನ ಕೋಟೆ ಎಂದು ಕರೆಯಲಾಗುತ್ತದೆ. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ಮಧುಗಿರಿಯ ಪಾಳೆಗಾರನಾದ ಚಿಕ್ಕಪ್ಪ ಗೌಡ ಎಂಬ ಅರಸ ತನ್ನ ಆಳ್ವಿಕೆಯನ್ನು ನಡೆಸಿದ್ದ ನಂತರ, ಮೈಸೂರು ಸಂಸ್ಥಾನದ ಚಿಕ್ಕದೇವರಾಯ ಅರಸನ ಆಳ್ವಿಕೆಯಲ್ಲಿ ಈ ಚೆನ್ನರಾಯನದುರ್ಗ ಗ್ರಾಮವು ಒಂದು ಬಹುಮುಖ್ಯ ಭಾಗವಾಗಿತ್ತು. ಆದರೆ ಇಂತಹ ಇತಿಹಾಸವುಳ್ಳ ಈ ಚೆನ್ನರಾಯನದುರ್ಗ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲೂ ಶುದ್ಧಕುಡಿಯುವ ನೀರಿನ ಕೊರತೆಯು ಸಹ ಹೆಚ್ಚಾಗಿ ಕಂಡು ಬರುತ್ತಿದೆ. ಇದರ ವಿರುದ್ಧ ಸ್ಥಳೀಯ ಜನನಾಯಕರ ಹಾಗೂ ಅಧಿಕಾರಿಗಳ ವಿರುದ್ಧ ಚೆನ್ನರಾಯನದುರ್ಗ ಗ್ರಾಮದ ಗ್ರಾಮಸ್ಥರು ಹಿಡಿಶಾಪ ವನ್ನು ಹಾಕುತ್ತಿದ್ದಾರೆ..
ಸುಮಾರು 4 ವರ್ಷಗಳ ಹಿಂದೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಲು ಅಂದಾಜು 10 ಲಕ್ಷ ರೂಪಾಯಿಗಳನ್ನು ಸರ್ಕಾರ ಮಂಜೂರು ಮಾಡಿತ್ತು ಅದರಂತೆ ಶಾಸಕರ ಮಾರ್ಗದರ್ಶನದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆಯಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ ಕಳೆದ ಒಂದೂವರೆ ವರ್ಷಗಳಿಂದ ಈ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದ್ದು ಇಲ್ಲಿಯವರೆಗೂ ಕೂಡ ಇದನ್ನ ರಿಪೇರಿ ಮಾಡಿಸಿ ಗ್ರಾಮದ ಜನತೆಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಅಧಿಕಾರಿಗಳು ಮುಂದೆ ಬಂದಿಲ್ಲ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ DYFI ಸಂಘಟನೆಯ ಯುವ ಮುಖಂಡ ರಾಘವೇಂದ್ರ ಮಾತನಾಡಿ, ಸುಮಾರು ಒಂದುವರೆ ವರ್ಷಗಳಿಂದ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದ್ದು, ಇದರ ಬಗ್ಗೆ ಸಂಬಂಧಪಟ್ಟ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ನಾವು ಈ ಹಿಂದೆ ತಂದಿದ್ದೆವು ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೂ ಸಹ ತಂದಿದ್ದರೂ ಕೂಡ ಅಧಿಕಾರಿಗಳು ಈ ಘಟಕವನ್ನು ರಿಪೇರಿ ಮಾಡಿಸದೆ ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವ ರೀತಿ ವರ್ತಿಸುತ್ತಿದ್ದಾರೆ ನಮ್ಮ ಊರಿನಲ್ಲಿ ಈಗಾಗಲೇ ಸುಮಾರು ಜನರಿಗೆ ಕಿಡ್ನಿ ಸ್ಟೋನ್ ಕಾಯಿಲೆಯಿಂದ ನರಳುತ್ತಿದ್ದಾರೆ ಇನ್ನಾದರೂ ಅಧಿಕಾರಿಗಳು ಹಾಗೂ ಶಾಸಕರು ಇದನ್ನು ಸೂಕ್ಷ್ಮವಾಗಿ ಗಮನಿಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಸ್ಥಳೀಯರೊಬ್ಬರು ಈ ಬಗ್ಗೆ ಮಾತನಾಡಿ, ಇತಿಹಾಸವುಳ್ಳ ಚೆನ್ನರಾಯನದುರ್ಗ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕ ಬೋರ್ವೆಲ್ ನಿಂದ ಬರುವ ನೀರನ್ನು ಕುಡಿಯುವ ಸ್ಥಿತಿ ನಮಗೆ ಬಂದಿದೆ. ಹಾಗಾಗಿ ನಿರ್ವಹಣೆಯಾಗದ ಶುದ್ಧಕುಡಿಯುವ ನೀರಿನ ಘಟಕವನ್ನು ರಿಪೇರಿ ಮಾಡಿಸಿ ಊರಿನ ಗ್ರಾಮಸ್ಥರಿಗೆ ಹಾಗೂ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.
ನಂತರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಯ ಜೂನಿಯರ್ ಇಂಜಿನಿಯರ್ ಚಿಕ್ಕ ರಾಜು ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 152 ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕಗಳು ಅಂಕಿಅಂಶದಲ್ಲಿ ಇವೆ. ಅದರಲ್ಲಿ 72-78 ಶುದ್ಧ ಕುಡಿಯುವ ನೀರಿನ ಘಟಕಗಳು ತನ್ನ ಕಾರ್ಯನಿರ್ವಹಣೆ ಮಾಡದೆ ಹಾಳಾಗಿವೆ. ಈ ಸಲುವಾಗಿ ನಮ್ಮ ಮೇಲಾಧಿಕಾರಿಗಳ ಗಮನಕ್ಕೆ ಈ ಹಿಂದಿನಿಂದಲೂ ತರಲಾಗಿದೆ. ಸುಮಾರು ಐದು ವರ್ಷಗಳನ್ನು ಪೂರೈಸಿದ 72 ಶುದ್ಧ ಕುಡಿಯುವ ನೀರಿನ ಘಟಕಗಳು ರಿಪೇರಿಗೆ ಬಂದಿವೆ ಇದಕ್ಕೆ ನೇರ ಹೊಣೆ ಏಜೆನ್ಸಿದಾರರು ಎಂದು ತಿಳಿಸಿದ್ದಾರೆ.
ಇನ್ನಾದರೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೇಲಾಧಿಕಾರಿಗಳು ಕೊರಟಗೆರೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸದೆ ಹಾಳಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ರಿಪೇರಿಯನ್ನು ಮಾಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕೆನ್ನುವುದು ನಮ್ಮ ಮನವಿ..
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB