nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
    • ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    • ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    • ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
    • ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
    • ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    • ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    • ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶುದ್ಧ ನೀರಿನ ಘಟಕ ರಿಪೇರಿಗೆ ಮುಂದಾಗದ ಅಧಿಕಾರಿಗಳು: ಕುಡಿಯುವ ನೀರಿಲ್ಲದೇ ಸಾರ್ವಜನಿಕರ ಪರದಾಟ
    ಕೊರಟಗೆರೆ February 10, 2022

    ಶುದ್ಧ ನೀರಿನ ಘಟಕ ರಿಪೇರಿಗೆ ಮುಂದಾಗದ ಅಧಿಕಾರಿಗಳು: ಕುಡಿಯುವ ನೀರಿಲ್ಲದೇ ಸಾರ್ವಜನಿಕರ ಪರದಾಟ

    By adminFebruary 10, 2022No Comments2 Mins Read
    watar

    ಕೊರಟಗೆರೆ: ತಾಲ್ಲೂಕಿನಲ್ಲಿ ಚನ್ನರಾಯನದುರ್ಗ ಗ್ರಾಮವು ಒಂದು ದೊಡ್ಡ ಹೋಬಳಿ ಕೇಂದ್ರ ಈ ಚನ್ನರಾಯನದುರ್ಗಕ್ಕೆ ಏಳು ಸುತ್ತಿನ ಕೋಟೆ ಎಂದು ಕರೆಯಲಾಗುತ್ತದೆ. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ಮಧುಗಿರಿಯ ಪಾಳೆಗಾರನಾದ ಚಿಕ್ಕಪ್ಪ ಗೌಡ ಎಂಬ ಅರಸ ತನ್ನ ಆಳ್ವಿಕೆಯನ್ನು ನಡೆಸಿದ್ದ ನಂತರ, ಮೈಸೂರು ಸಂಸ್ಥಾನದ ಚಿಕ್ಕದೇವರಾಯ ಅರಸನ ಆಳ್ವಿಕೆಯಲ್ಲಿ ಈ ಚೆನ್ನರಾಯನದುರ್ಗ ಗ್ರಾಮವು ಒಂದು ಬಹುಮುಖ್ಯ ಭಾಗವಾಗಿತ್ತು. ಆದರೆ ಇಂತಹ ಇತಿಹಾಸವುಳ್ಳ ಈ ಚೆನ್ನರಾಯನದುರ್ಗ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲೂ ಶುದ್ಧಕುಡಿಯುವ ನೀರಿನ ಕೊರತೆಯು ಸಹ ಹೆಚ್ಚಾಗಿ ಕಂಡು ಬರುತ್ತಿದೆ. ಇದರ ವಿರುದ್ಧ ಸ್ಥಳೀಯ ಜನನಾಯಕರ ಹಾಗೂ ಅಧಿಕಾರಿಗಳ ವಿರುದ್ಧ ಚೆನ್ನರಾಯನದುರ್ಗ ಗ್ರಾಮದ ಗ್ರಾಮಸ್ಥರು ಹಿಡಿಶಾಪ ವನ್ನು ಹಾಕುತ್ತಿದ್ದಾರೆ..

    ಸುಮಾರು 4 ವರ್ಷಗಳ ಹಿಂದೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಲು ಅಂದಾಜು 10 ಲಕ್ಷ ರೂಪಾಯಿಗಳನ್ನು ಸರ್ಕಾರ ಮಂಜೂರು ಮಾಡಿತ್ತು ಅದರಂತೆ ಶಾಸಕರ ಮಾರ್ಗದರ್ಶನದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆಯಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ ಕಳೆದ ಒಂದೂವರೆ ವರ್ಷಗಳಿಂದ ಈ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದ್ದು ಇಲ್ಲಿಯವರೆಗೂ ಕೂಡ ಇದನ್ನ ರಿಪೇರಿ ಮಾಡಿಸಿ ಗ್ರಾಮದ ಜನತೆಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಅಧಿಕಾರಿಗಳು  ಮುಂದೆ ಬಂದಿಲ್ಲ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿದೆ.


    Provided by
    Provided by

    ಘಟನೆಗೆ ಸಂಬಂಧಿಸಿದಂತೆ DYFI ಸಂಘಟನೆಯ ಯುವ ಮುಖಂಡ ರಾಘವೇಂದ್ರ ಮಾತನಾಡಿ, ಸುಮಾರು ಒಂದುವರೆ ವರ್ಷಗಳಿಂದ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದ್ದು, ಇದರ ಬಗ್ಗೆ ಸಂಬಂಧಪಟ್ಟ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ನಾವು ಈ ಹಿಂದೆ ತಂದಿದ್ದೆವು ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೂ ಸಹ ತಂದಿದ್ದರೂ ಕೂಡ ಅಧಿಕಾರಿಗಳು ಈ ಘಟಕವನ್ನು ರಿಪೇರಿ ಮಾಡಿಸದೆ ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವ ರೀತಿ ವರ್ತಿಸುತ್ತಿದ್ದಾರೆ ನಮ್ಮ ಊರಿನಲ್ಲಿ ಈಗಾಗಲೇ ಸುಮಾರು ಜನರಿಗೆ ಕಿಡ್ನಿ ಸ್ಟೋನ್ ಕಾಯಿಲೆಯಿಂದ ನರಳುತ್ತಿದ್ದಾರೆ ಇನ್ನಾದರೂ ಅಧಿಕಾರಿಗಳು ಹಾಗೂ ಶಾಸಕರು ಇದನ್ನು ಸೂಕ್ಷ್ಮವಾಗಿ ಗಮನಿಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

    ಸ್ಥಳೀಯರೊಬ್ಬರು ಈ ಬಗ್ಗೆ ಮಾತನಾಡಿ, ಇತಿಹಾಸವುಳ್ಳ ಚೆನ್ನರಾಯನದುರ್ಗ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು,  ಸಾರ್ವಜನಿಕ ಬೋರ್ವೆಲ್ ನಿಂದ ಬರುವ ನೀರನ್ನು ಕುಡಿಯುವ ಸ್ಥಿತಿ ನಮಗೆ ಬಂದಿದೆ. ಹಾಗಾಗಿ ನಿರ್ವಹಣೆಯಾಗದ ಶುದ್ಧಕುಡಿಯುವ ನೀರಿನ ಘಟಕವನ್ನು ರಿಪೇರಿ ಮಾಡಿಸಿ ಊರಿನ ಗ್ರಾಮಸ್ಥರಿಗೆ ಹಾಗೂ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.

     ನಂತರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಯ ಜೂನಿಯರ್ ಇಂಜಿನಿಯರ್ ಚಿಕ್ಕ ರಾಜು ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 152 ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕಗಳು ಅಂಕಿಅಂಶದಲ್ಲಿ ಇವೆ. ಅದರಲ್ಲಿ 72-78 ಶುದ್ಧ ಕುಡಿಯುವ ನೀರಿನ ಘಟಕಗಳು ತನ್ನ ಕಾರ್ಯನಿರ್ವಹಣೆ ಮಾಡದೆ ಹಾಳಾಗಿವೆ. ಈ ಸಲುವಾಗಿ ನಮ್ಮ ಮೇಲಾಧಿಕಾರಿಗಳ ಗಮನಕ್ಕೆ ಈ ಹಿಂದಿನಿಂದಲೂ ತರಲಾಗಿದೆ. ಸುಮಾರು ಐದು ವರ್ಷಗಳನ್ನು ಪೂರೈಸಿದ 72 ಶುದ್ಧ ಕುಡಿಯುವ ನೀರಿನ ಘಟಕಗಳು ರಿಪೇರಿಗೆ ಬಂದಿವೆ ಇದಕ್ಕೆ ನೇರ ಹೊಣೆ ಏಜೆನ್ಸಿದಾರರು ಎಂದು ತಿಳಿಸಿದ್ದಾರೆ.

    ಇನ್ನಾದರೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೇಲಾಧಿಕಾರಿಗಳು ಕೊರಟಗೆರೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸದೆ ಹಾಳಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ರಿಪೇರಿಯನ್ನು ಮಾಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕೆನ್ನುವುದು ನಮ್ಮ ಮನವಿ..

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ…

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026

    ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.