ಔರಾದ: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಜೋಜನಾ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರ (ಎಂ) ಗ್ರಾಮದಲ್ಲಿ ವಾಂತಿ ಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು ವಾಂತಿ ಬೇದಿ ಪ್ರಕರಣ ಬೆಳಕಿಗೆ ಬಂದ ತಕ್ಷಣ ಗ್ರಾಮಕ್ಕೆ ಗ್ರಾಪಂ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿದ್ದು ಪರಿಶೀಲನೆ ನಡೆಸಿ ಗ್ರಾಮಸ್ಥರಿಗೆ ಸ್ವಚ್ಛತೆ ಕಾಪಾಡುವಂತೆ ಮನವಿ ಮಾಡಿದರು.
ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದು, ಗ್ರಾಮದಲ್ಲಿ ಸಮಪರ್ಕವಾದ ಚರಂಡಿ ವ್ಯವಸ್ಥೆ ಇಲ್ಲದೆ ಅಸ್ವಚ್ಛತೆ ತಾಂಡವವಾಡುತ್ತಿದೆ. ಅದಕ್ಕಾಗಿಯೇ ಗ್ರಾಮದಲ್ಲಿ ವಾಂತಿ ಬೇದಿ ಉಲ್ಬಣಿಸಿದೆ. ಈಗಾಗಲೇ ನಾಲ್ಕೈದು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮಳೆಯ ನೀರು ರಸ್ತೆಗಳ ಮಧ್ಯೆದಲ್ಲಿಯೇ ಕೆರೆಯಂತೆ ನಿಲ್ಲುತ್ತಿವೆ. ಇದರಿಂದ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದ್ದು, ಕೂಡಲೇ ಅಧಿಕಾರಿಗಳು ಶುದ್ಧ ಕುಡಿಯುವ ನೀರು ಸಮರ್ಪಕ ಚರಂಡಿ ವ್ಯವಸ್ಥೆ ಬ್ಲೀಚಿಂಗ್ ಪೌಡರ್ ಸಿಂಪಡಿಸುವಂತೆ ಒತ್ತಾಯಿಸಿದರು.
ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ ಮಾತನಾಡಿ, ಗ್ರಾಮದಲ್ಲಿ ಸಿಸಿ ರಸ್ತೆ ಸೂಕ್ತವಾದ ಚರಂಡಿಗಳಿಲ್ಲದೇ ಮಲೀನ ನೀರು ನಿಲ್ಲುತ್ತಿರುವುದು ನೋಡಿದ್ದೇವೆ. ಮುಖ್ಯ ನೀರಿನ ಪೈಪ್ ಲೈನ್ ಗೆ ಅಳವಡಿಸಿಕೊಂರುವ ಸಂಪರ್ಕಗಳನ್ನು ತೆಗೆದುಹಾಕಲು ತಿಳಿಸಲಾಗುತ್ತದೆ. ಮಲೀನ ನೀರು ನಿಂತ ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಮರೂಮ್ ಹಾಕಿಸಲು ತಿಳಿಸಲಾಗಿದೆ. ಸದ್ಯಕ್ಕೆ ಸ್ವಚ್ಛತೆ ಮತ್ತು ಬ್ಲೀಚಿಂಗ್ ಪೌಡರ್ ಸಿಂಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ವಡಗಾಂವ್ (ದೆ) ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಭುಲಿಂಗ್, ಪಿಡಿಒ ನರಸಿಂಗ್ ಮಾನೆ, ಖಾದರ್ ಖಾನ್, ಸಿಸ್ವರ್ ತಸ್ನೇಮ್ ಸೇರಿದಂತೆ ಇತರರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW