ಚಿತ್ತೂರು: ಸಾಲ ಮರುಪಾವತಿ ಮಾಡಲಿಲ್ಲವೆಂದು ಮಹಿಳೆಯನ್ನು ಮರಕ್ಕೆ ಕಟ್ಟಿ ಮನಬಂದಂತೆ ಥಳಿಸಿದ ಘಟನೆಯೊಂದು ಆಂಧ್ರಪ್ರದೇಶದ ಚಿತ್ತೂರಿನ ಕುಪ್ಪಂ ಮಂಡಲದ ನಾರಾಯಣಪುರಂ ಗ್ರಾಮದಲ್ಲಿ ನಡೆದಿದೆ.
ಮುನಿಕಣ್ಣಪ್ಪ ಎಂಬ ವ್ಯಕ್ತಿ ಸಿರಿಷಾ ಎಂಬ ಮಹಿಳೆಯನ್ನು ಮರಕ್ಕೆ ಕಟ್ಟಿ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಸಿರಿಷಾ ಅವರ ಪತಿ ತಿಮ್ಮರಾಯಪ್ಪ ಮೂರು ವರ್ಷಗಳ ಹಿಂದೆ ಮುನಿಕಣ್ಣಪ್ಪ ಅವರಿಂದ 80,000 ರೂ. ಸಾಲ ಪಡೆದಿದ್ದರು. ಸಾಲ ಮರುಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಕ್ಕಳನ್ನು ಬಿಟ್ಟು ತಿಮ್ಮರಾಯಪ್ಪ ಊರು ಬಿಟ್ಟಿದ್ದ.
ಇನ್ನು ಮಹಿಳೆ ದಿನಗೂಲಿ ಕಾರ್ಮಿಕಳಾಗಿ ಕೆಲಸ ಮಾಡಿ, ಮಕ್ಕಳನ್ನು ಪೋಷಿಸುತ್ತಿದ್ದು, ಸಾಲ ಮರುಪಾವತಿ ಮಾಡಲು ವಿಳಂಬ ಮಾಡಿದ್ದಾರೆ.
ಈ ನಡುವೆ ಸೋಮವಾರ ಮಧ್ಯಾಹ್ನ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಮುನಿಕಣ್ಣಪ್ಪ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹತ್ಯೆ ಮಾಡುವ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಬಲವಂತವಾಗಿ ಎಳೆದುಕೊಂಡು ಹೋಗಿ ಬೇವಿನ ಮರಕ್ಕೆ ಕಟ್ಟಿ ಹಾಕಿ, ದೈಹಿಕವಾಗಿ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW