nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    • ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  
    • ಮಕ್ಕಳಿಲ್ಲದ ಕೊರಗು ಬಿಟ್ಟು ಮರಗಳಿಗೆ ತಾಯಿಯಾದ ದೈವ ಸ್ವರೂಪಿ “ತಿಮ್ಮಕ್ಕ”
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    • ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ
    ಕೊರಟಗೆರೆ June 19, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    By adminJune 19, 2025No Comments3 Mins Read
    nikhil kumaraswamy

    ತುಮಕೂರು, ಕೊರಟಗೆರೆ : ರಾಜ್ಯದ ಜನ ಕಾಂಗ್ರೆಸ್ ಆಡಳಿತದಿಂದ ರೋಸಿಹೋಗಿದ್ದಾರೆ. ದೇವೇಗೌಡರ ಮಾರ್ಗದರ್ಶನದಲ್ಲಿ, ಕುಮಾರಣ್ಣನವರ ನಾಯಕತ್ವದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು ನಿಮ್ಮ ಜೊತೆ ನಾನಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

    ಜನರೊಂದಿಗೆ ಜನತಾದಳ ಬುಧವಾರ ಮೂರನೇ ದಿನದ ರಾಜ್ಯ ಪ್ರವಾಸ ಬೈಕ್ ರ್ಯಾಲಿ ಮೂಲಕ ಕೊರಟಗೆರೆ  ಕ್ಷೇತ್ರದಲ್ಲಿ “ಜನರೊಂದಿಗೆ ಜನತಾದಳ” ಮಿಸ್ಡ್ ಕಾಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಸಭೆಯನ್ನ ಉದ್ದೇಶಿಸಿ ಮಾತನಾಡಿದರು.


    Provided by
    Provided by

    ಸುಧಾಕರ್ ಲಾಲ್ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು ಪೂರಕವಾಗಿ ಕೆಲಸ ಮಾಡಿ ಮಾಡುತ್ತಿದ್ದೇವೆ. ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಇದು ಕಾರ್ಯಕರ್ತರ ಪಕ್ಷ ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಜತೆ ನಾನಿದ್ದೇನೆ ಎಂದು ಧೈರ್ಯ ತುಂಬಿದರು.

    ಪ್ರವಾಸ ಅವಧಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆ ಮತ್ತು ಪ್ರತಿ ತಾಲ್ಲೂಕಿನ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಸಾಮಾನ್ಯ ಜನರನ್ನ ಭೇಟಿ ಮಾಡಳಿದ್ದೇನೆ. ಪಕ್ಷದ ಬಗ್ಗೆ ಕಾರ್ಯಕರ್ತರು ಹೊಂದಿರುವ ಭಾವನೆಯನ್ನು ಅರ್ಥಮಾಡಿಕೊಳ್ಳಳಿದ್ದೇನೆ. ಪಕ್ಷವನ್ನು ಮತ್ತೆ ತಳ ಮಟ್ಟದಿಂದ  ಗಟ್ಟಿಗೊಳಿಸಲು ಏನು ಮಾಡಬೇಕೆಂದು ಜನರಿಂದ ಕೇಳಲಿದ್ದೇನೆ ಎಂದರು.

    ನನ್ನ ರಾಜ್ಯ ಪ್ರವಾಸ ವೇಳೆ ಎಲ್ಲರನ್ನೂ ಭೇಟಿ ಮಾಡುತ್ತೇನೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ದದಲ್ಲಿನ ಸ್ಥಳೀಯ ಸಮಸ್ಯೆ ಆಲಿಸುತ್ತಿದ್ದು, ಕಾರ್ಯಕರ್ತರ ಜತೆ ಬೆರೆತು ಅದಕ್ಕೆ ಪರಿಹಾರ ಉತ್ತರವನ್ನು ಕಂಡುಕೊಳ್ಳಲು ಇದೊಂದು ಉತ್ತಮ ವೇದಿಕೆ ಎಂದು ತಿಳಿಸಿದರು.

    58 ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ನಮ್ಮ ಪಕ್ಷವನ್ನು ಹಲವು ದಶಕಗಳಿಂದ ಕಟ್ಟಿ ಬೆಳೆಸಿದ ದೇವೇಗೌಡರ ಕಾಲಘಟ್ಟದ ಸಾಕಷ್ಟು ಹಿರಿಯ ನಾಯಕರಿದ್ದೀರಾ. ನಿಮ್ಮ ಸಂಪರ್ಕ ಬಯಸಿ ಪ್ರವಾಸ ಕೈಗೊಂಡಿದ್ದೇನೆ. ಜಿಲ್ಲೆಯಲ್ಲಿ ದೇವೇಗೌಡರ ಹೋರಾಟಕ್ಕೆ ಜೊತೆಯಾಗಿ ನಿಂತು ಬೆಂಬಲ ನೀಡಿದ್ದೀರಾ. ಜನತಾದಳ ಪಕ್ಷ ಮುಗಿದೆ ಹೋಯ್ತು ಅಂತ ವಿರೋಧ ಪಕ್ಷದವರು ಹೇಳುತ್ತಿದ್ದಾರೆ.. ಆದರೆ ಜಿಲ್ಲೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಕ್ಕಿಂತ ಹೆಚ್ಚಿನ ವೋಟಿಂಗ್ ಪರ್ಸೆಂಟೇಜ್ ಅನ್ನ ಜೆಡಿಎಸ್ ಪಕ್ಷಕ್ಕೆ ಕೊಟ್ಟಿದ್ದೀರ ನಿಮ್ಮ ಋಣ ತೀರಿಸಲು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದರು.

    ಡಿಸೆಂಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಬರಲಿದೆ. ಗ್ರಾಮ ಪಂಚಾಯ್ತಿ ಚುನಾವಣೆ ಪಕ್ಷದಲ್ಲಿ ಬೇರು ಇದ್ದಂತೆ.ಪಕ್ಷ ಎಲ್ಲಾದಕ್ಕೂ ತಯಾರಿ ಮಾಡಿಕೊಳ್ಳಬೇಕು. ಅದಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ನಾನು ಮೂರು ಬಾರಿ ಚುನಾವಣೆಯಲ್ಲಿ ಪೆಟ್ಟು ತಿಂದಿರಬಹುದು. ನಾನು ಒಳ್ಳೆ ಉದ್ದೇಶದಿಂದ ನಾನು ಪ್ರವಾಸಕ್ಕೆ ಬಂದಿದ್ದೇನೆ ನಿಮ್ಮ ಪ್ರೀತಿ ಸಹಕಾರ ಇರಲಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

    ದೇವೇಗೌಡರ ಮಾರ್ಗರ್ದಶದಲ್ಲಿ ಪಕ್ಷವನ್ನು ಬೇರು ಮಟ್ಟದಲ್ಲಿ ಪ್ರಾದೇಶಕ ಪಕ್ಷವನ್ನು ಕಟ್ಟಿಬೆಳೆಸಬೇಕು ಅಂತ ಹೊರಟ್ಟಿದ್ದೇನೆ.ರಾಜ್ಯದ ಸಮಸ್ಯೆಗಳನ್ನ ಅರ್ಥೈಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದು‌ ಹೊರಟ್ಟಿದ್ದೇನೆ. ಕಾಂಗ್ರೆಸ್ ಪಕ್ಷದ ಎರಡು ವರ್ಷದ ಆಡಳಿತ ನೋಡಿದ್ದೀರಾ.? ಹೆಚ್ಚು ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷ ಜನಪರ ಕಾರ್ಯಕ್ರಮ ಕೊಡಬಹುದಿತ್ತು. ಆದರೆ ಸಾಲದ ಹೊರೆ ಹೊರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಕುಮಾರಸಣ್ಣ ಅವರು ಮುಖ್ಯಮಂತ್ರಿ ಆಗಿದ್ದ 14 ತಿಂಗಳಲ್ಲಿ 25 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದ್ದಾರೆ.ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಪರಿಸ್ಥಿತಿ ಏನಾಗಿದೆ.25 ಸಾವಿರ ಇದ್ದ ಟಿಸಿ ಬೆಲೆ 3-4 ಲಕ್ಷಕ್ಕೆ ಏರಿದೆ. ಪ್ರಾದೇಶಿಕ ಪಕ್ಷದ ಅಸ್ತಿತ್ವ ಕಾಪಾಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದರು.

    ಹಿರಿಯರು, ಯುವಕರು ಹಾಗೂ ತಾಯಂದಿರು ಜೆಡಿಎಸ್ ಪಕ್ಷವನ್ನು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಬೇಕು. ನನ್ನ ಮನವಿಗೆ ಸ್ಪಂದಿಸಿದ ಕಾರ್ಯಕರ್ತ ಬಂಧುಗಳು ಬೂತ್ ಮಟ್ಟದಲ್ಲಿ ತಂಡಗಳನ್ನು ಕಟ್ಟಿಕೊಂಡು ಪಕ್ಷ ಸಂಘಟಿಸುವ ಭರವಸೆ ನೀಡಿದರು

    ನನ್ನ ಪ್ರೀತಿಯ ಯುವಕರು,  ಹಿರಿಯರ ಮಾರ್ಗದರ್ಶನ ಪಡೆಯಬೇಕು ಆಗ ಮಾತ್ರ ನಮಗೆ ಅಧಿಕಾರ ದೊರೆಯಲು ಸಾಧ್ಯ,  ನಾವೆಲ್ಲರೂ ನಮ್ಮ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗೋಣ ಎಂದು ಯುವ ಸಮುದಾಯಕ್ಕೆ ಅವರು ಕರೆನೀಡಿದರು.

    ಇದೇ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರರಾದ ತಿಪ್ಪೇಸ್ವಾಮಿ ರವರು, ಮಾಜಿ ಶಾಸಕರಾದ  ಪಿ.ಆರ್ ಸುಧಾಕರ್ ಲಾಲ್ ರವರು, ಜಿಲ್ಲಾಧ್ಯಕ್ಷರಾದ  ಆರ್.ಸಿ.ಆಂಜಿನಪ್ಪ ರವರು, ಮಹಿಳಾ ಅಧ್ಯಕ್ಷರಾದ ಶ್ರೀಮತಿ ಸುಮಾ ರವರು, ತಾಲ್ಲೂಕು ಅಧ್ಯಕ್ಷರಾದ  ಕಾಮರಾಜ್ ರವರು, ಕಾರ್ಯಧ್ಯಕ್ಷರಾದ ಲಕ್ಮೀಶ್ ರವರು, ಮುಖಂಡರಾದ ಶಿವರಾಮೇಗೌಡರು ಸೇರಿದಂತೆ ಪ್ರಮುಖ ಮುಖಂಡರು ಹಾಗೂ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ತುಮಕೂರು: ಗುಬ್ಬಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ತಾಲ್ಲೂಕು ಯೋಜನಾ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ…

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025

    ಮಕ್ಕಳಿಲ್ಲದ ಕೊರಗು ಬಿಟ್ಟು ಮರಗಳಿಗೆ ತಾಯಿಯಾದ ದೈವ ಸ್ವರೂಪಿ “ತಿಮ್ಮಕ್ಕ”

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.