ಮಂಗಳೂರು: ಗರ್ಭಿಣಿ ಮಹಿಳೆಯನ್ನು ಹತ್ಯೆ ಮಾಡಿದ ಪತಿಯೊಬ್ಬ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ.
ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ (52) ಹತ್ಯೆ ನಡೆಸಿದವರಾಗಿದ್ದು, ಇವರ ಪತ್ನಿ ಪತ್ನಿ ಜಯಂತಿ (45) ಹತ್ಯೆಯಾದವರಾಗಿದ್ದಾರೆ. ಹತ್ಯೆಯ ನಂತರ ರಾಮ ಮೂಲ್ಯ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಜಯಂತಿ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದರೆ, ತಿಮ್ಮಪ್ಪ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಜಯಂತಿ ಅವರಿಗೆ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಂದಿದ್ದು, ನಂತರ ತಿಮ್ಮಪ್ಪ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಮೃತ ಜಯಂತಿ ಅವರ ತಂಗಿ ಸುಜಾತ ಫರಂಗಿಪೇಟೆ ಮತ್ತು ತಿಮ್ಮಪ್ಪರ ಸಹೋದರ ವಿಶ್ವನಾಥ ಅವರ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW