ಪಾವಗಡ: ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆಯಿಂದ ಮನಸ್ಸು ಮತ್ತು ದೇಹ ಸದೃಢವಾಗಿರುತ್ತದೆ ಎಂದು ಮಾಜಿ ಪುರಸಭಾ ಅಧ್ಯಕ್ಷ ಮಾನಂ ವೆಂಕಟಸ್ವಾಮಿ ತಿಳಿಸಿದರು.
ಪಾವಗಡ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಫೆಬ್ರವರಿ 11 ರಿಂದ 13 ರ ರವರೆಗೆ ನಡೆಯುವ ಕ್ರಿಕೆಟ್ ಪ್ರೇಮಿಯರ್ ಲೀಗ್ ತಂಡಗಳಿಗೆ ಹೆಲ್ಪ್ ಸೊಸೈಟಿ ವತಿಯಿಂದ ಟೀ -ಶರ್ಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸೋಲು –ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸೌಹಾರ್ದತೆ ಕಾಪಾಡಲು ಗ್ರಾಮೀಣ ಕ್ರೀಡೆಗಳನ್ನು ಮುನ್ನಡೆಸೋಣ ಎಂದರು.
ದೈಹಿಕ ಶಿಕ್ಷಕ ಹಾಗೂ ಕ್ರಿಕೆಟ್ ತಂಡದ ಪ್ರಯೋಜಕರಾದ ಯತೀಶ್ ರವರು ಮಾತನಾಡುತ್ತಾ, ಗ್ರಾಮೀಣ ಪ್ರದೇಶದ ಯುವಕರ ನೆಚ್ಚಿನ ಪಂದ್ಯಗಳಾದ ಕ್ರಿಕೆಟ್ ಆಟವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಾವಗಡ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಇಂದು ಆಟಗಾರರಿಗೆ ಟೀ -ಶರ್ಟ್ ವಿತರಿಸುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.
ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಮಾತನಾಡುತ್ತ, ಯುವಕರು ದುಷ್ಚಟಕ್ಕೆ ಬಲಿಯಾಗದೆ ಉತ್ತಮ ಹವ್ಯಾಸ ಜೊತೆಗೆ ಕ್ರೀಡೆಗಳ ಕಡೆಗೆ ಹೆಚ್ಚು ಗಮನ ಹರಿಸುವುದು ಅವಶ್ಯಕವಾಗಿದೆ ಎಂದು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ಸಾಯಿ, ನರೇಶ್, ಹಾಗೂ ಸ್ಮೈಲ್ ಕ್ರಿಕೆಟ್ ತಂಡದ ಆಟಗಾರರಾದ ಮಾಸಿನೆನಿ ರಾಜು, ಮಧು, ಚೇತು, ರವಿ, ನಾಗಭೂಷನ ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB