ಬೆಂಗಳೂರು: ಸದ್ಯಕ್ಕೆ ನಾನು ಬಿಜೆಪಿಗೆ ಮರಳುವುದಿಲ್ಲ, ಮೊದಲು ಬಿಜೆಪಿಯಲ್ಲಿನ ಪರಿಸ್ಥಿತಿ ಸರಿ ಹೋಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸದ್ಯಕ್ಕೆ ನಾನು ಬಿಜೆಪಿಗೆ ಮರಳುವ ಪರಿಸ್ಥಿತಿಯಲ್ಲಿಲ್ಲ. ಮೊದಲು ಬಿಜೆಪಿ ಪರಿಸ್ಥಿತಿ ಸರಿಯಾಗಬೇಕು. ವಿಜಯೇಂದ್ರ ಆಹ್ವಾನ ಕೊಟ್ಟಿರುವ ಬಗ್ಗೆ ಗೊತ್ತಿಲ್ಲ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ನನ್ನ ಯಡಿಯೂರಪ್ಪ ಸ್ನೇಹ ಬಹಳ ಹಳೆಯದು, ಇವತ್ತಿನದಲ್ಲ. ನಾವಿಬ್ಬರೂ ಪಾರ್ಟ್ನರ್ ಶಿಪ್ನಲ್ಲಿ ಹಿಂದೆ ಫ್ಯಾಕ್ಟರಿ ಮಾಡಿದ್ದೆವು. ನಮ್ಮಿಬ್ಬರ ಮಧ್ಯೆ ಸ್ನೇಹ ಮುಂದುವರೆಯುತ್ತಿದೆ. ರಾಜಕಾರಣಕ್ಕೂ ಸ್ನೇಹಕ್ಕೂ ಸಂಬಂಧ ಇಲ್ಲ. ನನ್ನ ಹುಟ್ಟುಹಬ್ಬಕ್ಕೆ ಪತ್ರಿಕೆಯಲ್ಲೂ ಅವರು ಶುಭಾಶಯ ಕೋರಿಕೆ ಹಾಕಿಸಿದ್ದರು. ನಮ್ಮ ಮನೆಯ ಕಾರ್ಯಕ್ರಮಗಳಿಗೆ ಅವರು ಬಂದಿದ್ದಾರೆ. ಅವರ ಮನೆ ಕಾರ್ಯಕ್ರಮಗಳಿಗೆ ನಾವು ಹೋಗಿದ್ದೇವೆ. ಸ್ನೇಹ ಬೇರೆ ರಾಜಕಾರಣ ಬೇರೆ ಎಂದು ಈಶ್ವರಪ್ಪ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW