ತಿಪಟೂರು: 1962ರಲ್ಲಿ ಸ್ಥಾಪಿತವಾದ ಕಲ್ಪತರು ವಿದ್ಯಾ ಸಂಸ್ಥೆಯ ಅಂದಿನಿಂದಲೂ ಇದುವರೆಗೂ ಗ್ರಾಮೀಣ ಬಡಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ಕಲ್ಪಿಸುವಲ್ಲಿ ಶ್ರಮಿಸುತ್ತಿದೆ ಎಂದು ಶಾಸಕ ಕೆ.ಷಡಕ್ಷರಿ ಹೇಳಿದರು.
ಕಲ್ಪತರು ಕಾಲೇಜು ಆವರಣದಲ್ಲಿ ವಜ್ರ ಮಹೋತ್ಸವ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಎತ್ತರವಾಗಿ ಬೆಳೆಯುತ್ತಿರುವ ಸಂಸ್ಥೆ ಇದಾಗಿದ್ದು ವಿಶ್ವವಿದ್ಯಾಲಯವಾಗಿ ರೂಪುಗೊಳ್ಳಬೇಕು, ತಮ್ಮ ಸರ್ಕಾರವು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದು, ಅದರಂತೆ ವಿವಿಧ ಯೋಜನೆಗಳನ್ನು ಕಲ್ಪತರು ನಾಡಿಗೆ ತರುವ ಕಲ್ಪತರು ವಿದ್ಯಾ ಸಂಸ್ಥೆಯ ಬೆಳೆದು ನಿಂತಿದೆ ಎಂದು ಆಶಯ ವ್ಯಕ್ತಪಡಿಸಿದರು.
ಕಲ್ಪತರು ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೆರುದ್ರಪ್ಪನವರು ಮಾತನಾಡಿ, ಕಾಲೇಜಿನ ಸಂಸ್ಥಾಪಕ ಪ್ರಾಚಾರ್ಯ ಜೆ.ಆರ್. ಮಾಲಿಂಗಯ್ಯ ಮಾತನಾಡಿ, ಕನಸುಗಳಲ್ಲಿ ಒಂದಾದ ಸುಸಜ್ಜಿತ ಸುವ್ಯವಸ್ಥಿತ ಪ್ರಾಥಮಿಕ ಪ್ರೌಢ ಶಿಕ್ಷಣವನ್ನು ಕಲ್ಪತರು ನಾಡಿನ ಮಕ್ಕಳಿಗೆ ನೀಡಬೇಕೆಂಬುದನ್ನು ನನಸಾಗಿಸುತ್ತಿರುವ ಸುದಿನ ಇದಾಗಿದೆ. ಈ ಸತ್ಕಾರ್ಯಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸುತ್ತಿರುವ ಎಲ್ಲರಿಗೂ ವಿದ್ಯಾ ಸಂಸ್ಥೆ ಯು ಚಿರಋಣಿಯಾಗಿರುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಲ್ಪತರು ವಿದ್ಯಾಸಂಸ್ಥೆಯ ಉಪಾಧ್ಯಕ್ಷರುಗಳಾದ ಜಿ.ಪಿ.ದೀಪಕ್, ಟಿ.ಎಸ್.ಬಸವರಾಜ್, ಕಾರ್ಯದರ್ಶಿಗಳಾದ ಎಚ್., ಜಿ.ಸುಧಾಕರ್ ಜಿ.ಎಸ್. ಉಮಾಶಂಕರ್ ಟಿ.ಯು.ಜಗದೀಶ್ ಮೂರ್ತಿ ಮತ್ತು ಖಜಾಂಚಿ ಟಿ.ಎಸ್.ಪ್ರಸಾದ್ ಮತ್ತು ಅನೇಕ ಪದಾಧಿಕಾರಿಗಳು ಮತ್ತು ಶಾಲೆಯ ಪ್ರಾಂಶುಪಾಲರು ಬೋಧಕ ಸಿಬ್ಬಂದಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW