ತಿಪಟೂರು: ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೂಚನೆಯಂತೆ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ಮುಂದಾಗಿದ್ದು, ರಾಜ್ಯಾದ್ಯಂತ 50 ಲಕ್ಷ ಸದಸ್ಯತ್ವ ನೋಂದಣಿಯನ್ನು ಮಾಡುವ ಕನಸು ನನಸು ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಪಟೂರು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ತಿಳಿಸಿದರು.
ಬೂತ್ ಮಟ್ಟದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಮತ್ತು ಮಿಸ್ ಕಾಲ್ ಮೂಲಕ ಪಕ್ಷದ ಕಾರ್ಯಕರ್ತರ ನೋಂದಣಿಗೆ ಶೀಘ್ರದಲ್ಲಿಯೇ ಚಾಲನೆ ನೀಡಲಿದ್ದೇವೆ, ಜುಲೈ 21ರಂದು ನಿಖಿಲ್ ಕುಮಾರಸ್ವಾಮಿ ಆಗಮನದ ನಿರೀಕ್ಷೆಯಿದ್ದು ಒಂದು ಬೃಹತ್ ಸಭೆ ಏರ್ಪಡಿಸಿ ಪಕ್ಷ ಸಂಘಟನೆಗೆ ಬಲ ನೀಡಲಿದ್ದೇವೆ ಎಂದು ತಿಳಿಸಿದರು.
ಕಳೆದ ವರ್ಷ ಕೊಬ್ಬರಿ ಬೆಲೆ ಏಳು ಎಂಟು ಸಾವಿರ ಇದ್ದಾಗ ಹೋರಾಟ ಹಮ್ಮಿಕೊಂಡಿದ್ದನ್ನು ಶಾಂತಕುಮಾರ್ ಸ್ಮರಿಸಿದರು. 24,000 ಮುಟ್ಟಿದೆ ಮುಂದಿನ ದಿನಗಳಲ್ಲಿ 30,000 ದಾಟಬಹುದು ತೆಂಗಿನಮರದಲ್ಲಿ ಇಳುವರಿ ಕಡಿಮೆಯಾಗಿದ್ದು, ಇಳುವರಿ ಕಡಿಮೆಯಾಗಿರುವ ಕಾರಣ ಕಂಡುಕೊಂಡು ಇಳುವರಿ ಹೆಚ್ಚು ಮಾಡಲು ವೈಜ್ಞಾನಿಕ ವಿಧಾನ ಬಳಸಬೇಕು, ಇದರಿಂದ ರೈತ ಸಮುದಾಯಕ್ಕೆ ಅನುಕೂಲವಾಗುತ್ತದೆ. ಇದಕ್ಕೆ ಕೊನೆಯಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಹಾಯವನ್ನು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ತಾಲೂಕು ಆರೋಗ್ಯಘಟ್ಟಗಳಲ್ಲಿ ವೈದ್ಯರಿಲ್ಲದೆ ಜನರಿಗೆ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಅದನ್ನು ಕೇಳುವವರಿಲ್ಲದಂತಾಗಿದೆ, ಪೊಲೀಸರು ರೈತರ ಟ್ಯಾಕ್ಟರ್ ಗಳನ್ನು ತಡೆದು ದಂಡ ಹಾಕುತ್ತಿದ್ದಾರೆ. ಶಾಸಕರು ಡಿವೈಎಸ್ಪಿ ಅವರಿಗೆ ನಿರ್ದೇಶನ ನೀಡಬೇಕು ಎಂದು ಅಗ್ರಹಿಸಿದರು.
ಜೆಡಿಎಸ್ ಕಾರ್ಯಾಧ್ಯಕ್ಷ ಶಿವಸ್ವಾಮಿ ನಗರ ಯುವ ಘಟಕದ ಸುದರ್ಶನ ಸೇರಿದಂತೆ ಹಲವಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW