ತುಮಕೂರು: ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ವಿಚಾರ ಪ್ರಸ್ತಾಪವಾಯಿತು. ಸಭೆ ಆರಂಭದಲ್ಲೇ ವಿವಾದದ ಹೇಮಾವತಿ ಲಿಂಕ್ ಕೆನಾಲ್ ವಿಚಾರ ಚರ್ಚೆಯಾಯಿತು. ಹೇಮಾವತಿ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿದ ಬಗ್ಗೆ ಚರ್ಚೆ ನಡೆಯಿತು. ಹೇಮಾವತಿ ವಿಚಾರವನ್ನ ಬಗೆಹರಿಸುವಂತೆ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಹಾಗೂ ಬಿಜೆಪಿ ಶಾಸಕ ಸುರೇಶ್ ಗೌಡ ಒತ್ತಾಯ ಮಾಡಿದರು.
ಈ ವೇಳೆ ಉತ್ತರಿಸಿದ ಸಚಿವ ಪರಮೇಶ್ವರ್, ಬೆಂಗಳೂರಿನಲ್ಲಿ ಜೂನ್ 30ರಂದು ಅಂತಿಮ ನಿರ್ಧಾರದ ಸಭೆಯನ್ನು ನಡೆಸಲಾಗುವುದು. ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ನೀರಾವರಿ ಸಚಿವರು ಸಭೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ಬಗ್ಗೆ ಮಾತಾಡ್ತಾರೆ. ರೈತರು, ಸಾರ್ವಜನಿಕರು, ಜನಪ್ರತಿನಿಧಿಗಳು ಭಾಗಿಯಾಗುವಂತೆ ಪರಮೇಶ್ವರ್ ಸಲಹೆ ನೀಡಿದರು.
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಪರಮೇಶ್ವರ್ ವಿಷಾದ ವ್ಯಕ್ತಪಡಿಸಿದರು. ಶಾಸಕರು, ಹೋರಾಟಗಾರರು ಸೇರಿ ಎಲ್ಲರೂ 30ರಂದು ಸಭೆಯಲ್ಲಿ ಭಾಗವಹಿಸಿ ಅಂತಾ ಮನವಿ ಮಾಡಿದರು.
ಈ ಯೋಜನೆ ಬಗ್ಗೆ ಈಗಾಗಲೇ ಸರ್ಕಾರದಿಂದ ಅನುಮೋದನೆ ಪಡೆಯಲಾಗಿದೆ. ಹೇಮಾವತಿ ಕುರಿತು ಜನರಿಗೆ ಸಂಪೂರ್ಣ ಮಾಹಿತಿ ಒದಗಿಸಿದ್ದೇನೆ. ನೀರಾವರಿ ವಿಚಾರದಲ್ಲಿ ಜಿಲ್ಲೆಗೆ ನಾನು ಅನ್ಯಾಯ ಮಾಡಲ್ಲ. ಹಿಂದೆನೂ ನಾನು ಜಿಲ್ಲೆಯ ಪರವಾಗಿದ್ದೆ, ಈಗಲೂ ಜಿಲ್ಲೆ ಪರವಾಗಿರುತ್ತೇನೆ ಎಂದು ಭರವಸೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW