ಶಿವಮೊಗ್ಗ: ವಿದ್ಯುತ್ ಸ್ಪರ್ಶದಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕೃಷ್ಣಪ್ಪ (55) ಮತ್ತು ಅವರ ಪತ್ನಿ ವಿನೋದ (42) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಗೆ ಮನೆಯ ವಿದ್ಯುತ್ ಮೋಟಾರ್ ನ ವೈರ್ ಸಂಪರ್ಕವಾಗಿದ್ದು, ಮಳೆಯಿಂದ ನೆಂದಿದ್ದ ತಂತಿಯಲ್ಲಿ ಬಟ್ಟೆ ಒಣಗಿಸಲು ಹಾಕಲು ವಿನೋದ ಮುಂದಾಗಿದ್ದು, ಈ ವೇಳೆ ವಿದ್ಯುತ್ ಶಾಕ್ ತಗುಲಿದೆ. ಅವರನ್ನು ರಕ್ಷಿಸಲು ಹೋದ ಕೃಷ್ಣಪ್ಪ ಅವರಿಗೂ ವಿದ್ಯುತ್ ಶಾಕ್ ಹೊಡೆದಿದ್ದು, ಇಬ್ಬರೂ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಸೊರಬ ಪೊಲೀಸ್ ಠಾಣೆಯ ಪಿಎಸ್ ಐ ನವೀನ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಪುತ್ರನಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW