ಸರಗೂರು: ಕಂದಾಯ ಇಲಾಖೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣ ಮಾಡುವ ಉದ್ದೇಶದಿಂದ ಲ್ಯಾಪ್ ಟಾಪ್ ನೀಡಲಾಗುತ್ತಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಹೇಳಿದರು.
ಪಟ್ಟಣದ ತಹಸಿಲ್ದಾರ್ ಕಚೇರಿಯಲ್ಲಿ ಶುಕ್ರವಾರ ದಂದು ಗ್ರಾಮಲೆಕ್ಕಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಆಸ್ತಿ, ಭೂದಾಖಲೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಸೇವೆಗಳನ್ನು ಪಾರದರ್ಶಕವಾಗಿ ವಿತರಿಸಲು ಇದರಿಂದ ಅನುಕೂಲವಾಗುತ್ತದೆ. ಜತೆಗೆ ಎಲ್ಲಾ ಕಡತಗಳ ವಿಲೇವಾರಿ ಆನ್ಲೈನ್ ಮೂಲಕ ಆಗಬೇಕು. ಕೆಲಸ ವಿಳಂಬವಾಗಬಾರದು ಮತ್ತು ದಾಖಲೆಗಳನ್ನು ಕಳೆದುಹೋಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಡಿಜಿಟಲೀಕರಣ ಮಾಡಲಾಗುತ್ತಿದೆ. ರೈತರಿಗೆ ಉತ್ತಮ ಸೇವೆ ನೀಡುವುದು ಇದರ ಮುಖ್ಯ ಉದ್ದೇಶ ಎಂದು ಹೇಳಿದರು.
ಡಿಜಿಟಲೀಕರಣದಿಂದ ದಾಖಲೆಗಳ ಅವಶ್ಯಕತೆ ಇದ್ದಾಗ ಸುಲಭವಾಗಿ ಪಡೆಯಬಹುದು. ರೈತರು ವಿನಾಕಾರಣ ಕಚೇರಿಗೆ ಅಲೆಯುವುದು ತಪ್ಪುತ್ತದೆ. ಈ ಯೋಜನೆಯ ಅನುಷ್ಠಾನಕ್ಕಾಗಿ ಕಂಪ್ಯೂಟರ್ ಮತ್ತು ಸ್ಕ್ಯಾನರ್ ಒದಗಿಸುವುದರಿಂದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರದಿಂದ ಕಂದಾಯ ಗಳಿಗೆ ನೀಡಲಾಗಿದೆ ಎಂದು ಹೇಳಿದರು.
ತಾಲ್ಲೂಕಿಗೆ 29 ವೃತ್ತಗಳು ಬರುತ್ತದೆ.ಗ್ರಾಮಲ್ಕೇಕಿಗರು 19 ಸಿಬ್ಬಂದಿಗಳು ಇದ್ದಾರೆ. 9 ಲ್ಯಾಪ್ಟಾಪ್ ಬಂದಿದೆ. ಇನ್ನೂ 10 ಉಳಿದ ಲ್ಯಾಪ್ಟಾಪ್ ಬರಬೇಕು ಮುಂದಿನ ದಿನಗಳಲ್ಲಿ ಲ್ಯಾಪ್ಟಾಪ್ ಬರುತ್ತದೆ ಎಂದರು.
ಕಂದಾಯ ಇಲಾಖೆಯಲ್ಲಿ ವೃತ್ತಗಳ ಜವಾಬ್ದಾರಿಯನ್ನು ಒಬ್ಬರೇ ಗ್ರಾಮಲೆಕ್ಕಾಧಿಕಾರಿ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಇಲಾಖೆಯಲ್ಲಿ ಗುಣಾತ್ಮಕ ಸೇವೆ ದೊರೆಯುಂತೆ ಮಾಡಬೇಕಾದರೆ ಅಗತ್ಯ ಪ್ರಮಾಣದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸಾರ್ವಜನಿಕರು ಸೇವೆ ಮಾಡಲು ರಾಜ್ಯಸರ್ಕಾರದ ಕಂದಾಯ ಸಚಿವರು ಮುಂದಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಗ್ರೇಟ್ 2 ತಹಶೀಲ್ದಾರ್ ಪರಶಿವಮೂರ್ತಿ, ಉಪ ತಹಶೀಲ್ದಾರ್ ಗಳು ಸುನೀಲ್, ರವಿಂದ್ರ, ಮನೋಹರ್, ಮಹದೇವ ಮೂರ್ತಿ, ರಾಜಸ್ವ ನಿರೀಕ್ಷಕ ರವಿಚಂದ್ರನ್, ಮುಜೀಬ್, ಗ್ರಾಮಲೆಕ್ಕಿಗರ ಸಂಘದ ಅಧ್ಯಕ್ಷ ಕುಮಾರ್, ಉಪಾಧ್ಯಕ್ಷ ಮಂಜುನಾಥ, ಸದಸ್ಯರು ಹೇಮಂತ್, ಪುರುಷೋತ್ತಮ್, ನರಸಿಂಹ ಶೆಟ್ಟಿ, ಎಂ.ಚೈತ್ರ, ಉಷಾ, ಸತ್ಯನಾರಾಯಣ, ಚಂದ್ರಶೇಖರ್, ನಾಗಪ್ಪ, ರಾಜು, ಭರತ್, ಷರೀಫ್, ಇನ್ನೂ ಸಿಬ್ಬಂದಿಗಳು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW