ಸರಗೂರು: ತಾಲೂಕಿನಲ್ಲಿ ಯಾವುದಾದರೂ ಕಾನೂನು ಬಾಹಿರ ಚಟುವಟಿಕೆಗಳು ನಿಮ್ಮ ಗಮನಕ್ಕೆ ಬಂದ ಕೂಡಲೇ ನಮ್ಮ ಗಮನಕ್ಕೆ ತನ್ನಿ ಅವರ ಮೇಲೆ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ವೃತ ನಿರೀಕ್ಷಕ ಪ್ರಸನ್ನ ಕುಮಾರ್ ತಿಳಿಸಿದರು.
ಪಟ್ಟಣದ ವೃತ್ತ ನಿರೀಕ್ಷಕ ಕಚೇರಿಯಲ್ಲಿ ಪತ್ರಕರ್ತರ ಸಭೆ ನಡೆಸಿ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದ ನಂತರ ಮಾತನಾಡಿದರು.
ಸರಗೂರು ತಾಲೂಕು ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಅನೇಕ ಸಮಸ್ಯೆಗಳ ಬಗ್ಗೆ ಹಂತ ಹಂತವಾಗಿ ತಿಳಿದುಕೊಳ್ಳಲಾಗುವುದು, ಪಟ್ಟಣ ಇನ್ನಿತರ ಪ್ರದೇಶಗಳಲ್ಲಿ ಜೂಜಾಟ ,ಗಾಂಜಾ, ಅಕ್ರಮ ಲಾಟರಿ, ಅಕ್ರಮ ಮದ್ಯ ಮಾರಾಟ, ಸಂಚಾರ ಸಮಸ್ಯೆ, ಶಾಲಾ ಕಾಲೇಜಿನ ವ್ಯಾಪ್ತಿಯಲ್ಲಿ ಪುಂಡರ ಹಾವಳಿ, ಬಸ್ ನಿಲ್ದಾಣದಲ್ಲಿ ನೋ ಪಾರ್ಕಿಂಗ್ ನಲ್ಲಿ ಕಾರು ಬೈಕ್ ನಿಲ್ಲಿಸುವುದು, ಇನ್ನಿತರ ಸಮಸ್ಯೆಗಳನ್ನು ನಿಯಂತ್ರಿಸುವ ಕ್ರಮ ವಹಿಸಲಾಗುವುದು,
ಪಟ್ಟಣದಲ್ಲಿ ಲಾಟರಿ ಮಾರಾಟ ಮಾಡಲು ಮುಂದಾಗಿರುವ ವ್ಯಕ್ತಿಗಳನ್ನು ಕಂಡು ಬಂದರೆ ಸಾರ್ವಜನಿಕರು ನೇರವಾಗಿ ನನಗೆ ಕರೆ ಮೂಲಕ ತಿಳಿಸಿ,
ಎರಡನೇ ಮುಖ್ಯ ರಸ್ತೆಯಲ್ಲಿ ಎಸ್.ಬಿ.ಐ ಬ್ಯಾಂಕ್ ಹಾಗೂ ಕರ್ನಾಟಕ ಗ್ರಾಮೀಣ ಬ್ಯಾಂಕ್, ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಸಾರ್ವಜನಿಕರು ಹಾಗೂ ಗ್ರಾಹಕರು ಅಲ್ಲಿ ಇಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಾರೆ.
ಬ್ಯಾಂಕ್ ಮುಂದಿನ ವಾಹನಗಳನ್ನು ಪೋಟೋ ತೆಗೆದುಕೊಂಡು ಅದರ ಜೊತೆಯಲ್ಲಿ ಬ್ಯಾಂಕಿನವರಿಗೆ ನೋಟಿಸ್ ನೀಡಲಾಗುವುದು ಎಂದು ಹೇಳಿದರು,
ಪುಟ್ ಪಾತ್ ಹಾಗೂ ಜೀಬ್ರಾ ಬಗ್ಗೆ ಪಪಂ ಮುಖ್ಯಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಗಳ ಬಗ್ಗೆ ಬಗೆಹರಿಸಲು ತಿಳಿಸುತ್ತಾನೆ ಎಂದರು. ಸಂದರ್ಭದಲ್ಲಿ ಶಾಸಕರ ಗಮನಕ್ಕೂ ತರುತ್ತಾನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪತ್ರಕರ್ತರು ನಾಗರಾಮ್, ನಾಗೇಶ್,ರಂಗರಾಜು, ಹಾದನೂರು ಚಂದ್ರ, ರಘುರಾಮ್, ದಾಸೇಗೌಡ,ಸೋಮೇಶ್, ಸಿಬ್ಬಂದಿಗಳು ಪುರುಷೋತ್ತಮ್, ಜಗದೀಶ್, ಮತ್ತಿತರರು ಇದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW