ಸರಗೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು ಹಾದನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ್ ತಿಳಿಸಿದರು.
ತಾಲೂಕಿನ ಮುಳ್ಳೂರು ವಲಯದ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಲಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
ಮನೆಯ ಸುತ್ತಲೂ ಗಿಡಗಳನ್ನು ಬೆಳೆಸುವುದಲ್ಲದೇ ಮನೆಯಲ್ಲಿ ಬಳಸಿದ ನೀರನ್ನು ಮರು ಬಳಕೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಕೃಷಿ ಅಧಿಕಾರಿಗಳಾದ ಮಧುಸೂದನ್ ಅವರು ಪರಿಸರ ಸಂರಕ್ಷಣೆಗೆ ಪೂರಕವಾಗಿ ಗಿಡ ನಾಟಿ ಮಾಡುವಂಥದ್ದು ಹಾಗೂ ಮರ ಗಿಡಗಳ ಪಾಲನೆ ಪೋಷಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ತಿಳಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿರಮೇಶ್ ಗಿಡನಾಟಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಳ್ಳೂರು ವಲಯದ ಮೇಲ್ವಿಚಾರಕರದ ನರಸಿಂಹಮೂರ್ತಿ ರವರು ಪರಿಸರ ಜಾಗೃತಿಯ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ವಿಜಿ , ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುಳಾ ರಾಮಚಂದ್ರಪ್ಪ, ಕಾರ್ಯಕ್ರಮದಲ್ಲಿ ಸ್ಥಳೀಯ ಸೇವಾ ಪ್ರತಿನಿಧಿಗಳು ಚಿಕ್ಕ ಪುಟ್ಟಯ್ಯ, ಹಾಗೂ ಊರಿನ ಗ್ರಾಮಸ್ಥರು ಶಾಲಾ ಮಕ್ಕಳು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW