ಬೀದರ್: ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಏಕಾದಶಿ ನಿಮಿತ್ತವಾಗಿ ಜು.5 ರಂದು ಬೀದರ್ ನಿಂದ ಪಂಢರಪುರಕ್ಕೆ ವಿಶೇಷ ರೈಲು ಕಲ್ಪಿಸಲಾಗಿದೆ.
ಆಷಾಢ ಏಕಾದಶಿ ದಿನದಂದು ಮಹಾರಾಷ್ಟ್ರದ ಪಂಢರಪುರದಲ್ಲಿರುವ ವಿಠ್ಠಲ್ ರುಕ್ಮಿಣಿ ದೇವಸ್ಥಾನಕ್ಕೆ ಹೋಗಲಿರುವ ಭಕ್ತಾದಿಗಳ ಪ್ರಯಾಣಕ್ಕಾಗಿ ಈ ವಿಶೇಷ ರೈಲು ಒದಗಿಸಲಾಗಿದೆ. ವಿಶೇಷ ರೈಲು ಜು.5ರಂದು ಭಾಲ್ಕಿ ರೈಲು ನಿಲ್ದಾಣಕ್ಕೆ ರಾತ್ರಿ 9:15 ಗಂಟೆಗೆ ಬಂದು 9:17 ಗಂಟೆಗೆ ಪ್ರಯಾಣ ಮುಂದುವರಿಸಲಿದೆ. ನಂತರದಲ್ಲಿ ಬೀದರ್ ನಿಲ್ದಾಣಕ್ಕೆ ರಾತ್ರಿ 9:50 ಗಂಟೆಗೆ ತಲುಪಿ 9:52 ಗಂಟೆಗೆ ಹೊರಡಲಿದೆ. ಈ ರೈಲು ಪಂಢರಪುರಕ್ಕೆ ಜು.6ರಂದು ಬೆಳಿಗ್ಗೆ 8:15 ಗಂಟೆಗೆ ತಲುಪಲಿದೆ ಎಂದು ತಿಳಿದು ಬಂದಿದೆ.
ಭಕ್ತರು ಈ ರೈಲಿನ ಸದುಪಯೋಗ ಪಡೆದುಕೊಳ್ಳುವಂತೆ ಸಂಸದ ಸಾಗರ್ ಖಂಡ್ರೆ ಅವರು ಕೋರಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW