ನವದೆಹಲಿ: ಹೃದಯಾಘಾತದ ಸಾವು ಮತ್ತು ಕೊರೋನಾ ಲಸಿಕೆಗೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಹಲವು ವೈಜ್ಞಾನಿಕ ಅಧ್ಯಯನಗಳು ಸಾಬೀತು ಮಾಡಿವೆ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಕೋವಿಡ್ ಲಸಿಕೆಯನ್ನು ಆತುರದ ಅನುಮೋದನೆಯೊಂದಿಗೆ ಸಾರ್ವಜನಿಕರಿಗೆ ವಿತರಣೆ ಮಾಡಿದ್ದು ಕೂಡ ಈ ಸಾವುಗಳಿಗೆ ಕಾರಣವಾಗಿರಬಹುದು ಎಂದು ಸಿದ್ದರಾಮಯ್ಯ ಮಂಗಳವಾರ ಹೇಳಿದ್ದರು. ಸಿಎಂ ಹೇಳಿಕೆ ಬೆನ್ನಲ್ಲೇ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಹಠಾತ್ ಆಗಿ ಸಂಭವಿಸುತ್ತಿರುವ ಸಾವುಗಳ ಬಗ್ಗೆ ದೇಶದ ಹಲವಾರು ಆರೋಗ್ಯ ಸಂಸ್ಥೆಗಳು ತನಿಖೆ ಮಾಡಿವೆ. ಇದರಲ್ಲಿ ಅಂತಹ ಯಾವುದೇ ಅಂಶವಿಲ್ಲ ಎಂದು ಹೇಳಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನಡೆಸಿದ ಅಧ್ಯಯನಗಳಲ್ಲಿ ಕೋವಿಡ್–19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸಿವೆ. ಲಸಿಕೆಯಿಂದ ಗಂಭೀರ ಅಡ್ಡಪರಿಣಾಮ ಉಂಟಾಗಿದ್ದು ಅಪರೂಪ. ಹೀಗಾಗಿ, ಹೃದಯಾಘಾತಕ್ಕೂ– ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC