nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ

    December 31, 2025

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
    • ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
    • ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
    • ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ
    • ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ
    • ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್
    • ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
    • ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ
    Uncategorized July 4, 2025

    ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

    By adminJuly 4, 2025No Comments2 Mins Read
    vaddugallu ranganathaswamy

    ತಿಪಟೂರು: ತಾಲ್ಲೂಕಿನ ಪುರಾಣ ಪ್ರಸಿದ್ದ ಐತಿಹಾಸಿಕ ಪುಣ್ಯಕ್ಷೇತ್ರ ಗಂಗನಘಟ್ಟದ ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಯವರ ಬ್ರಹ್ಮ ರಥೋತ್ಸವವು ಜುಲೈ 7ರಂದು ಸಂಜೆ ಜರುಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಜಾತ್ರಾ ಮಹೋತ್ಸವು ಜುಲೈ 5 ರಂದು ಪ್ರಾರಂಭವಾಗಿ ಸಂಜೆ 6 ಗಂಟೆಗೆ ಭಗವದನುಜ್ಙೆ, ವಿಶ್ವೇಕ್ಸೇನಾರಾಧನೆ, ವಾಸುದೇವ ಪುಣ್ಯಾಹ ವಾಚನ, ರಕ್ಷಾ ಬಂಧನ, ಮೃತ್‌ಸಂಗ್ರಹಣೆ, ಅಂಕುರಾರ್ಪಣೆ, ಗರುಡಧ್ವಜ ಪ್ರತಿಷ್ಠೆ. ಜುಲೈ 6 ರಂದು ಬೆಳಗ್ಗೆ ಧ್ವಜಾರೋಹಣ, ಚತುಸ್ಥಾನಾರ್ಚನೆ, ಅಭಿಷೇಕ, ನಂದಾದೀಪ ಸ್ಥಾಪನೆ, ಅಗ್ನಿ ಪ್ರತಿಷ್ಠೆ, ಮಹಾಮಂಗಳಾರತಿ, ಪಂಚಾಮೃತ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 5 ಗಂಟೆಗೆ ರಥಕ್ಕೆ ಕಲಶ ಸ್ಥಾಪನೆ, ಚತುಸ್ಥಾನಾರ್ಚನೆ, ಗಜೇಂದ್ರ ಮೋಕ್ಷ, ಶ್ರೀಲಕ್ಷ್ಮೀ ಕಲ್ಯಾಣೋತ್ಸವ. ಜುಲೈ 7ರಂದು ಬೆಳಗ್ಗೆ ಚತುಸ್ಥಾನಾರ್ಚನೆ, ಸಹಸ್ರನಾಮಾರ್ಚನೆ, ಸಂಜೆ 4:30ಕ್ಕೆ ಬ್ರಹ್ಮ ರಥೋತ್ಸವ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ. ನಂತರ ಸಂಜೆ 7 ಗಂಟೆಗೆ ಶಯನೋತ್ಸವ ಮತ್ತು ಜುಲೈ 8 ರ ಬೆಳಗ್ಗೆ ಬೆಳಗ್ಗೆ ಚತುಸ್ಥಾನಾರ್ಚನೆ, ಧ್ವಜ ಅವರೋಹಣ, ಮಹಾಪೂರ್ಣಾಹುತಿ, ಅಶ್ವವಾಹನೋತ್ಸವಗಳು ಜರುಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


    Provided by
    Provided by

    ಗಜೇಂದ್ರ ಮೋಕ್ಷದ ವಿಶೇಷತೆ: ಗಜೇಂದ್ರ ಮೋಕ್ಷ ಎನ್ನುವುದು ಹಿಂದೂ ಧರ್ಮದಲ್ಲಿನ ಒಂದು ಪವಿತ್ರವಾದ ಪಠ್ಯವಾದ ಭಾಗವತ ಪುರಾಣದ 8ನೇ ಸ್ಕಂದದಲ್ಲಿರುವ ಒಂದು ಪೌರಾಣಿಕ ಕಥೆ. ಆಪತ್ಕಾಲದಲ್ಲಿ ಭಗವಂತನ ನಾಮಸ್ಮರಣೆ ಮಾಡಿದರೆ ಬೆಟ್ಟದಂತೆ ಬಂದ ಕಷ್ಟಗಳು ಮಂಜಿನಂತೆ ಕರಗುವುವು ಎಂಬುದಕ್ಕೆ ಇದೊಂದು ದೃಷ್ಟಾಂತ. ಬಹಳ ಹಿಂದೆ ಪಾಂಡ್ಯದೇಶದ ರಾಜ ಇಂದ್ರದ್ಯುಮ್ನ ಮಹಾವಿಷ್ಣುಭಕ್ತ. ಒಮ್ಮೆ ತ್ರಿಕೂಟಾಚಲದ ಕಣಿವೆಯಲ್ಲಿ ಮೌನ ತಪಸ್ಸಿನಲ್ಲಿದ್ದಾಗ ತನ್ನಲ್ಲಿಗೆ ಬಂದ ಅಗಸ್ತ್ಯ ಮಹರ್ಷಿಯನ್ನು ಗೌರವಿಸದ ಕಾರಣ ಋಷಿ ಶಾಪಕ್ಕೆ ಗುರಿಯಾಗಿ ಗಜ ಜನ್ಮ ಪಡೆದ. ಹೀಗೆ ಇಂದ್ರದ್ಯುಮ್ನ ಆನೆಯಾಗಿ ಕೊಳದಲ್ಲಿ ನೀರು ಕುಡಿಯುತ್ತಿದ್ದಾಗ ಮೊಸಳೆಯೊಂದು ಬಂದು ಆತನ ಕಾಲು ಹಿಡಿಯಿತು. ಏನು ಮಾಡಿದರೂ ತನ್ನನ್ನು ಮೊಸಳೆ ಬಿಡದೆ ಇದ್ದುದನ್ನು ಕಂಡು ಇಂದ್ರದ್ಯುಮ್ನನಿಗೆ ಪೂರ್ವಜನ್ಮದ ಸ್ಮರಣೆಯುಂಟಾಗಿ ಬಿಡುಗಡೆಗಾಗಿ ವಿಷ್ಣುವನ್ನು ಪ್ರಾರ್ಥಿಸಿದ. ಆಗ ವಿಷ್ಣು ಪ್ರತ್ಯಕ್ಷನಾಗಿ ಮೊಸಳೆಯನ್ನು ಕೊಂದು ಇಂದ್ರದ್ಯುಮ್ನನನ್ನು ಶಾಪಮುಕ್ತನಾಗುವಂತೆ ಮಾಡಿದ. ಈ ಕಥೆಯನ್ನು ಹೇಳಿದವರಿಗೆ, ಕೇಳಿದವರಿಗೆ ದುರ್ಬುದ್ದಿ, ದುಸ್ವಪ್ನ ಕಳೆದು ಸುಖ ಸಮೃದ್ದಿ ಲಭಿಸುವುದು ಇಂತಹ ಕಥೆಯನ್ನು ಜುಲೈ 6 ರ ಸಂಜೆ ಜರುಗಲಿದೆ ಎಂದು ತಿಳಿಸಿದ್ದಾರೆ.

    ವರದಿ:  ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ

    December 21, 2025

    ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ

    December 12, 2025

    ತುಮಕೂರಿನಲ್ಲಿ ಉದ್ಘಾಟನೆಗೆ ಸಿದ್ಧಗೊಂಡ ಜಿಲ್ಲಾ ಬಂಜಾರ ಭವನ

    December 12, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ

    December 31, 2025

    ತುಮಕೂರು: ನಗರದ ಅಮಾನಿಕೇರೆ ಗಜಾನನ ಮಂಟಪದಲ್ಲಿ 2 ದಿನಗಳ ಕಾಲ ಆಯೋಜಿಸಿದ್ದ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಗಳವಾರ…

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025

    ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ

    December 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.