ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಂಗಳೂರಿನ ಕಾನೂನು ವಿದ್ಯಾರ್ಥಿನಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಡಿದ್ದು, ಬಳಿಕ ಶುಕ್ರವಾರ ಬೆಳಿಗ್ಗೆ ಆಕೆಯನ್ನು ರಕ್ಷಣೆ ಮಾಡಲಾಗಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಪವಿತ್ರ (19) ನದಿಗೆ ಹಾರಿದ್ದಳು. ಬಳಿಕ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ ಮರದ ಮೇಲೆ ಕುಳಿತಿದ್ದರು. ಶುಕ್ರವಾರ ಮುಂಜಾನೆ ಕಾಪಾಡಿ… ಎಂದು ಅವರು ಕೂಗಿಕೊಂಡಿದ್ದು ಈ ವೇಳೆ ರೈತರಿಗೆ ನದಿಯ ಮಧ್ಯೆ ವ್ಯಕ್ತಿಯೊಬ್ಬರು ಸಿಕ್ಕಿಕೊಂಡಿರುವುದು ತಿಳಿದಿದೆ.
ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು, ಯುವತಿಯನ್ನು ರಕ್ಷಿಸಿ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ನದಿಯಲ್ಲಿ ನೀರಿನ ಸೆಳೆತ ಮತ್ತಷ್ಟು ಹೆಚ್ಚಾಗಿದ್ದರೆ, ವಿದ್ಯಾರ್ಥಿನಿ ಕೊಚ್ಚಿ ಹೋಗುತ್ತಿದ್ದರು. ಆಕೆ ಅದೃಷ್ಟಶಾಲಿ ಎಂದು ಪಿಎಸ್ ಐ ವಿನೋದ್ ಕುಮಾರ್ ತಿಳಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC