ತುಮಕೂರು: ವಿವೇಕಾನಂದ ಸ್ಟಡಿ ಸೆಂಟರ್ ಹಾಗೂ ವಿವೇಕಾ ಹಂಸ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಮಹೇಶ್ ಪಿಯು ಸಂಸ್ಥೆಯ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನಾಚರಣೆಯ ಅಂಗವಾಗಿ “ವಿವೇಕ ಸಂಚಲನ 2022” ರ ಕಾರ್ಯಕ್ರಮವನ್ನು ಅಶೋಕನಗರ ದಲ್ಲಿರುವ ಮಹೇಶ್ ಪಿಯು ಕಾಲೇಜಿನಲ್ಲಿ ಸರಳವಾಗಿ ಸಂಭ್ರಮದಿಂದ ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು.
ರಾಮಕೃಷ್ಣ ಮಠದ ಸಂಪನ್ಮೂಲ ವ್ಯಕ್ತಿಗಳಾದ ಸಂದೀಪ್ ವಶಿಷ್ಠರವರು ಮತ್ತು ಕಾಲೇಜಿನ ಪ್ರಾಂಶುಪಾಲರಾದ ವಿದ್ಯಾ ಪಟೇಲ್ ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂದೀಪ್ ವಸಿಷ್ಠರವರು ಸ್ವಾಮಿ ವಿವೇಕಾನಂದರ ಆದರ್ಶ, ಆಶಯ, ಮತ್ತು ಅವರ ಜೀವನ ಚರಿತ್ರೆ ಕುರಿತಾದ ಹಲವಾರು ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರುವ ಪರೀಕ್ಷೆ ಎದುರಿಸುವ ಕುರಿತಾಗಿ ಉಪಯುಕ್ತ ಸಲಹೆಗಳನ್ನು ನೀಡಿದರು. ಮಹೇಶ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಭವಿಷ್ಯ ಉತ್ತಮವಾಗಿರಲಿ ಎಂದು ಹಾರೈಸಿದರು. ಜಿಲ್ಲೆಯಲ್ಲೇ ಉತ್ತಮ ಶಿಕ್ಷಣ ಸಂಸ್ಥೆ ಎಂದೆ ಹೆಸರಾದ ಮಹೇಶ್ ಪಿಯು ಕಾಲೇಜಿನ ಆಡಳಿತ ಮಂಡಳಿಯ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜು ಆಡಳಿತ ಮಂಡಳಿಯು ಮುಖ್ಯ ಅತಿಥಿಗಳಿಗೆ ಸಂಸ್ಥೆ ಪರವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರುಗಳಾದ ಶ್ರೀನಿವಾಸ್ ಕಲ್ಲೂರು. ಹರೀಶ್. ನಾಗಲಕ್ಷ್ಮಿ. ಪ್ರಿಯಾಂಕ. ಸುರೇಶ್. ಜಯರಾಮಯ್ಯ. ಮುಂತಾದವರು ಮತ್ತು ಜೆ.ಸಿ.ಐ. ತುಮಕೂರು ಮೆಟ್ರೋ ಕಾರ್ಯದರ್ಶಿಗಳಾದ ಲತಾ ಶ್ರೀನಿವಾಸ್. ಹಾಗೂ ರೋಟರಿ ತುಮಕೂರು ಪ್ರೇರಣ ಸಂಸ್ಥೆಯ ಮುಖ್ಯಸ್ಥರು. ವಿವೇಕಾನಂದ ಸ್ಟಡಿ ಸೆಂಟರ್, ವಿವೇಕಾ ಹಂಸ ಸಂಸ್ಥೆಯ ಪ್ರಮುಖ ಮುಖ್ಯಸ್ಥರು ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು, ಮುಂತಾದವರು ಪಾಲ್ಗೊಂಡಿದ್ದರು.
ವರದಿ: ಸಚಿನ್ ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB