ಬೀದರ್ : ಮಾಂಜ್ರಾ ನದಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟ ರೈತನ ಮನೆಗೆ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಪರಿಹಾರ ವಿತರಣೆ ಮಾಡಿದರು.
ಮೃತನ ಕುಟುಂಬದ ಭೇಟಿ ಮಾಡಿದ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಕುಟುಂಬಸ್ಥರಿಗೆ ಸರಕಾರದಿಂದ ಅನುಮೋದಿಸಲಾದ 5 ಲಕ್ಷ ರೂ. ಪರಿಹಾರ ಧನದ ಚೆಕ್ ಹಸ್ತಾಂತರಿಸಿದರು.
ಭಾಲ್ಕಿ ತಾಲ್ಲೂಕಿನ ಭಾಟಸಾಂಗವಿ ಗ್ರಾಮದ ರೈತ ನಾಮದೇವ್ ಝಳಕೆ (65) ಅವರು ಜು.3 ರಂದು ಮಾಂಜ್ರಾ ನದಿ ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು. ಜು. 5 ರಂದು ಅವರ ಮೃತದೇಹ ಪತ್ತೆಹಚ್ಚಲಾಗಿತ್ತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC