nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೊಡ್ಡಕೆರೆಗೆ ಉರುಳಿಬಿದ್ದ ಕೆಎಸ್ ಆರ್ ಟಿಸಿ ಬಸ್: 21 ಮಂದಿಗೆ ಗಾಯ
    ಜಿಲ್ಲಾ ಸುದ್ದಿ July 11, 2025

    ದೊಡ್ಡಕೆರೆಗೆ ಉರುಳಿಬಿದ್ದ ಕೆಎಸ್ ಆರ್ ಟಿಸಿ ಬಸ್: 21 ಮಂದಿಗೆ ಗಾಯ

    By adminJuly 11, 2025No Comments3 Mins Read
    ksrtc

    ಸರಗೂರು:  ಕೆಎಸ್‌ ಆರ್‌ ಟಿಸಿ ಬಸ್‌ ನಿಯಂತ್ರಣ ತಪ್ಪಿ  ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್‌ ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ.

    ಪಟ್ಟಣದಿಂದ ಯಡಿಯಾಲ ಮಾರ್ಗವಾಗಿ ಕಾಡು ಬೇಗೂರಿಗೆ ತೆರಳುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ಚಾಲಕ ನಿಯಂತ್ರಣದಿಂದ   ಬೊಂತೇಗಾಲದ ಕೆರೆಗೆ ಉರುಳಿ ಬಿದ್ದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

    ಸರಗೂರಿನಿಂದ ಕಾಡುಬೇಗೂರು–ಕುರ್ಣೆಗಾಲಕ್ಕೆ ಗುರುವಾರ ರಾತ್ರಿ ತೆರಳುತ್ತಿದ್ದ ಬಸ್(ಕೆಎ11ಎ- 0333)ನಲ್ಲಿ 25 ಮಂದಿ ತೆರಳುತ್ತಿದ್ದರು. ಇದರಲ್ಲಿ ನಾಲ್ಕು ಮಂದಿಗೆ ಗಂಭೀರ ಗಾಯವಾಗಿದೆ. ಚಾಲಕ ರವೀಶ್, ಕಂಡಕ್ಟರ್ ಗಣೇಶ್ ಸೇರಿದಂತೆ ಉಳಿದವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸರಗೂರಿನ ಸರ್ಕಾರಿ ಆಸ್ಪತ್ರೆ, ಎಚ್.ಡಿ.ಕೋಟೆ ಹಾಗೂ ಮೈಸೂರಿಗೆ ಸ್ಥಳಾಂತರಿಸಲಾಗಿದೆ.

    ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿಗಳ ನೆರವಿನಿಂದ ಗಾಯಗಳನ್ನು ಬಸ್‌ ನಿಂದ ಹೊರ ತೆಗೆದು ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಶರತ್, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಚಂದ್ರಶೇಖರ್ ಭೇಟಿ ನೀಡಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ. ಸರಗೂರು ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಎಸ್‌ ಐ ಅಶೋಕ್‌ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

    ಪಟ್ಟಣದಿಂದ ಸುಮಾರು ಒಂದೂವರೆ ಕಿಮೀ ದೂರ ಸಾಗುವುದ ರೊಳಗೆ ಬಸ್‌ ನ ಚಾಲಕ ನಿಯಂತ್ರಣದಿಂದ ಕಳೆದು ಕೊಂಡಿದೆ. ಎಡಗಡೆ ಕಬಿನಿ ಬಲದಂಡೆ ನಾಲೆ, ಬಲಗಡೆ ಬೊಂತ್ತೇಗಾಲ ಕೆರೆ ಇದ್ದುದರಿಂದ ಬಸ್ ಎತ್ತ ಚಲಿಸಿದರೂ ಪ್ರಯಾಣಿಕರ ಪ್ರಾಣಕ್ಕೆ ಆಪತ್ತು ಎದುರಾಗುವ ಸಂಭವ ಇದ್ದಿದ್ದರಿಂದ ಚಾಲಕ ಕರೆ ಏರಿಗೆ ಅಳವಡಿಸಿದ್ದ ಕಬ್ಬಿಣದ ತಡೆಗೋಡೆಗೆ ಗುದ್ದಿಸಿ ಬಸ್ ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ. ‘ಆದಾಗ್ಯೂ ಬಸ್ ಕಬ್ಬಿಣದ ತಡೆಗೋಡೆ ಯನ್ನು ಮುರಿದುಕೊಂಡು ಕೆರೆಗೆ ಹಾರಿದೆ.

    ಬಸ್ ಕರೆಗೆ ಉರುಳಿದ ಜಾಗದಿಂದ ನಾಲೈದು ಅಡಿಗಳ ಅಂತರದಲ್ಲೇ ಕರೆಯು ಭಾರೀ ಆಳವಿದ್ದು, ಒಂದು ವೇಳೆ ಬಸ್ ವೇಗವಾಗಿ ಬಂದು ಕಬ್ಬಿಣದ ತಡೆಗೋಡೆಯನ್ನು ಹಾರಿ ಕೆರೆಗೆ ಬಿದ್ದಿದ್ದರೆ ಭಾರೀ ಅನಾಹುತ ಸಂಭವಿಸಿಬಿಡುತ್ತಿತ್ತು.

    ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿಯ ನೆರವಿನಿಂದ ಗಾಯಾಳುಗಳನ್ನು ಬಸ್‌ ನಿಂದ ಹೊರ ತೆಗೆದು ಆಸ್ಪತ್ರೆಗೆ ಕಳುಹಿಸಲಾಗಿದೆ. ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಶರತ್, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಚಂದ್ರಶೇಖರ್ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಎಚ್‌.ಡಿ.ಕೋಟೆ ಹಾಗೂ ಮೈಸೂರು ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. ಸರಗೂರು ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಎಸ್‌ ಐ ಕಿರಣ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

    ಎಚ್.ಡಿ.ಕೋಟೆ–ಸರಗೂರು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ ಆರ್ ಟಿಸಿ ಬಸ್‌ ಗಳು ಸುಸ್ಥಿತಿಯಲ್ಲಿ ಇಲ್ಲ. ಈ ಮಾರ್ಗದಲ್ಲಿ ಸಂಚರಿಸಲು ಹಳೆಯ ವಾಹನಗಳನ್ನೇ ನೀಡಲಾಗಿದೆ. ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ಬಸ್‌ ಗಳು ಮಾರ್ಗಮಧ್ಯೆ ಕೆಟ್ಟು ನಿಲ್ಲುತ್ತವೆ. ಇಂದು ನಡೆದ ಅಪಘಾತದಲ್ಲಿ ಹೆಚ್ಚು ಕಡಿಮೆಯಾಗಿದ್ದರೆ, ಬಸ್‌ ನಲ್ಲಿದ್ದವರ ಜೀವ ಹಾರಿಹೋಗುತ್ತಿತ್ತು. ಈಗಲಾದರೂ ಸಾರಿಗೆ ನಿಗಮದವರು ಎಚ್ಚೆತ್ತುಕೊಂಡು ಸುಸ್ಥಿತಿಯಲ್ಲಿರುವ ಬಸ್‌ ಗಳನ್ನು ಈ ಮಾರ್ಗಕ್ಕೆ ನಿಯೋ ಜಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

    ಗುರುವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಪಟ್ಟಣದಿಂದ ಹೆಡಿಯಾಲ ಮಾರ್ಗವಾಗಿ ಕಾಡು ಬೇಗೂರಿಗೆ ತೆರಳುತ್ತಿದ್ದಾಗ ಬಸ್‌ ನ ಸೇರಿಂಗ್ ತುಂಡಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಂತೇಗಾಲದ ಕೆರೆಗೆ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಚಾಲಕ ರವೀಶ್ ಅವರ ಮುಖ, ಗಡ್ಡಕ್ಕೆ ಪೆಟ್ಟು ಬಿದ್ದಿದೆ. ನಿರ್ವಾಹಕ ಗಣೇಶ್ ಅವರ ಬೆನ್ನು ಮೂಳೆಗೆ ಗಂಭೀರ ಪಟ್ಟಾಗಿದೆ. ಪ್ರಯಾಣಿಕರಲ್ಲಿ ಮಹಿಳೆಯೊಬ್ಬರು ಹಾಗೂ ಮಗುವಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಗಾಯಾಳುಗಳನ್ನು ಎಚ್.ಡಿ.ಕೋಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ಉಳಿದಂತೆ ಸಣ್ಣಪುಟ್ಟ ಗಾಯಗಳಾಗಿದ್ದವರಿಗೆ ಸರಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

    ಎಚ್.ಡಿ.ಕೋಟೆಯಿಂದ ಸರಗೂರು ಮಾರ್ಗವಾಗಿ ಕಾಡುಬೇಗೂರು–ಕುರ್ಣೆಗಾಲ ಮೂಲಕ ಸಾಗಿ ಕೇರಳ ಗಡಿಯ ಆಲನಹಳ್ಳಿಗೆ ತೆರಳಬೇಕಿದ್ದ ಕೆಎಸ್‌ ಆರ್‌ ಟಿಸಿ ಬಸ್ (ಕೆಎ11 ಎಫ್ 0333) 25 ಮಂದಿ ಪ್ರಯಾಣಿಕರನ್ನು ಹೊತ್ತು ರಾತ್ರಿ 7:30ರ ಸುಮಾರಿನಲ್ಲಿ ಎಚ್.ಡಿ.ಕೋಟೆ ನಿಲ್ದಾಣದಿಂದ ಹೊರಟಿದೆ.

    ಎಲ್ಲವೂ ಸರಿಯಾಗಿದ್ದರೆ ಬಸ್ ಪ್ರಯಾಣಿಕರನ್ನು ಆಯಾ ಗ್ರಾಮಗಳಲ್ಲಿ ಇಳಿಸಿ ಕುರ್ಣೆಗಾಲದಲ್ಲಿ  ತಂಗಬೇಕಿತ್ತು. ಆದರೆ ಬಸ್‌ ನ ತಾಂತ್ರಿಕ ದೋಷ ಪ್ರಯಾಣಿಕರಿಗೆ ಆಘಾತವನ್ನು ತಂದೊಡ್ಡಿತ್ತು. ಎಚ್ .ಡಿ.ಕೋಟೆಯಿಂದ ಹೊರಟು ರಾತ್ರಿ 8 ಗಂಟೆಗೆ ಸರಗೂರನ್ನು ತಲುಪಿದ ಬಸ್ ಸರಗೂರು ನಿಲ್ದಾಣದಿಂದ 8.10ಕ್ಕೆ ಹೊರಟಿದೆ ನಂತರವೇ ಒಂದು ಗಂಟೆ ಒಳಗೆ ಈ ಘಟನೆ ನಡೆದಿದೆ ಎಂದು ಪ್ರಯಾಣಿಕರು ಹಾಗೂ ಸ್ಥಳೀಯರು ತಿಳಿಸಿದರು.ಸ್ಥಳಕ್ಕೆ ಕೆಎಸ್ ಆರ್ಟಿಸಿ ಬಸ್ ವ್ಯವಸ್ಥಾಪಕರು ಬಾರದೆ ಇರುವುದರಿಂದ ಸ್ಥಳೀಯ ಮುಖಂಡರು ಹಾಗೂ ಪಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.