ಕೊರಟಗೆರೆ : ತಾಲ್ಲೂಕಿನ ವಿವಿಧ ಕನ್ನಡ ಪರ ಸಂಘಟನೆಗಳಿಂದ ಪಟ್ಟಣದಲ್ಲಿ ಕನ್ನಡ ಭವನವನ್ನು ನಿರ್ಮಿಸಲು ಜಾಗ ಮಂಜೂರು ಮಾಡಲು ತಹಶೀಲ್ದಾರ್ ನಹೀದ ಜಮ್ ಜಮ್ ರವರಿಗೆ ಮನವಿ ಸಲ್ಲಿಸಲಾಯಿತು.
ಕನ್ನಡಪರ ಸಂಘಟನೆಗಳಾದ ಕರ್ನಾಟಕ ರಣಧೀರರ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡ ಸುವರ್ಣ ವೇದಿಕೆ ಮತ್ತು ಹಲವು ಕನ್ನಡ ಪರ, ಪ್ರಗತಿಪರ ಸಂಘಟನೆಗಳ ವತಿಯಿಂದ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜು, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಕೆ.ಎನ್.ನಟರಾಜ್, ಕರ್ನಾಟಕ ರಣಧೀರರ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ.ಎಂ.ಎನ್, ಕರುನಾಡ ಸುವರ್ಣ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಹರೀಶ್ ಬಾಬು, ಕನ್ನಡ ಪರ ಹೋರಾಟಗಾರರಾದ ದಿನೇಶ್, ವಿನಯ್ ದಾಸರಹಳ್ಳಿ, ಮಾರುತಿ, ಸುರೇಶ್ ದೊಡ್ಡಯ್ಯ ಹಾಗೂ ಪ್ರಗತಿಪರ ಹೋರಾಟಗಾರರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB