nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    December 30, 2025

    ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ

    December 30, 2025

    ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಖಂಡಿಸಿ ಅಂಬೇಡ್ಕರ್ ಸೇನೆ ಪ್ರತಿಭಟನೆ

    December 30, 2025
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ
    • ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ
    • ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಖಂಡಿಸಿ ಅಂಬೇಡ್ಕರ್ ಸೇನೆ ಪ್ರತಿಭಟನೆ
    • ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!
    • ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ
    • ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ
    • ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
    • ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರ್ಧ ತಿಂಗಳು ದಾಟಿದರೂ ಸಿಗದ ಪಡಿತರ: ನ್ಯಾಯ ಬೆಲೆ ಅಂಗಡಿಯಲ್ಲಿ ಅನ್ಯಾಯ!
    ಜಿಲ್ಲಾ ಸುದ್ದಿ July 16, 2025

    ಅರ್ಧ ತಿಂಗಳು ದಾಟಿದರೂ ಸಿಗದ ಪಡಿತರ: ನ್ಯಾಯ ಬೆಲೆ ಅಂಗಡಿಯಲ್ಲಿ ಅನ್ಯಾಯ!

    By adminJuly 16, 2025No Comments2 Mins Read
    paditara

    ಸರಗೂರು:  ಜುಲೈ ತಿಂಗಳ ಪಡಿತರ ಆಹಾರ ಧಾನ್ಯ ಅರ್ಧ ತಿಂಗಳು ದಾಟಿದರೂ ಪಡಿತರ ಚೀಟಿದಾರಿಗೆ ಇನ್ನೂ ತಲುಪಿಲ್ಲ. ಅಂಗಡಿ ಮುಂದೆ ಎಷ್ಟು ಹೊತ್ತು ಕಾದರೂ ಬಾಗಿಲು ತೆರೆಯದೇ ಇರುವ ಕಾರಣದಿಂದ ಜನರು ಕಾದು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.  ಪಟ್ಟಣದ ಕೆಲವು ವಾರ್ಡ್ ಗಳಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಪಡಿತರ ಆಹಾರ ಧಾನ್ಯವನ್ನು ನ್ಯಾಯ ಬೆಲೆ ಅಂಗಡಿ ಮಾಲಿಕರು ತಲುಪಿಸುತ್ತಿಲ್ಲ,  ಅಂಗಡಿಯನ್ನು ಮುಚ್ಚಿಕೊಂಡಿರುವುದು  ಬುಧವಾರದಂದೂ ಕಂಡು ಬಂದಿದೆ. ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ನೀಡದೆ ಅಂಗಡಿ ಮಾಲಿಕರು ನಿರ್ಲಕ್ಷ ಮಾಡುತ್ತಿದ್ದಾರೆ ವಾರ್ಡಿನ ಜನರು ಆರೋಪಿಸಿದರು.

    ಪ್ರಧಾನ ಮಂತ್ರಿಗಳ ಗರೀಬ್ ಕಲ್ಯಾಣ ಯೋಜನೆಯಡಿ 5 ಕೆ.ಜಿ. ಹಾಗೂ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಒಟ್ಟು 10 ಕೆ.ಜಿ. ಅಕ್ಕಿಯನ್ನು ಪ್ರತಿ ಪಡಿತರ ಚೀಟಿದಾರರಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತಿ ತಿಂಗಳು ವಿತರಿಸಲಾಗುತ್ತದೆ. ಪ್ರಸಕ್ತ ಜುಲೈ ತಿಂಗಳಿನ ಅರ್ಧ ಭಾಗ ಮುಗಿದರೂ ಇನ್ನೂ ಪಡಿತರ ಚೀಟಿದಾರರಿಗೆ ಅಕ್ಕಿ ದೊರೆತಿಲ್ಲ.


    Provided by
    Provided by

    ಪಟ್ಟಣದಲ್ಲಿ 12 ನ್ಯಾಯಬೆಲೆ ಅಂಗಡಿಗಳಿವೆ. ಅಂದಾಜು 9 ಸಾವಿರ ಹೆಚ್ಚು ಪಡಿತರ ಚೀಟಿದಾರರಿದ್ದಾರೆ. ಅಕ್ಕಿಗಾಗಿ ಪ್ರತಿದಿನ ನ್ಯಾಯಬೆಲೆ ಅಂಗಡಿಗೆ ಅಲೆದಾಡುತ್ತಿದ್ದಾರೆ. ಕೆಲವೊಂದು ನ್ಯಾಯಬೆಲೆ ಅಂಗಡಿಗಳು ಬೀಗ ಜಡಿದಿದ್ದರೆ ಇನ್ನು ಕೆಲ ನ್ಯಾಯ ಬೆಲೆ ಅಂಗಡಿಗಳು ತೆರೆದಿದ್ದರೂ ‘ಅಕ್ಕಿ ಕೊಡಲು ಆದೇಶ ಬಂದಿಲ್ಲ’ ಎಂದು ಪಡಿತರ ಚೀಟಿದಾರರನ್ನು ಬರಿಗೈಲಿ ವಾಪಸ್‌ ಕಳುಹಿಸುತ್ತಿದ್ದಾರೆ.

    ಇದುವರೆಗೆ ಬರೀ ಅಕ್ಕಿ ಮಾತ್ರ ಹಂಚಿಕೆಯಾಗಿದ್ದರಿಂದ ಪ್ರತಿ ತಿಂಗಳು ನಿಗದಿತ ವೇಳೆಯಲ್ಲಿ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ಸಿಗುತ್ತಿತ್ತು. ಆದರೆ, ಜೂನ್ ತಿಂಗಳಿಂದ ಅನ್ನಭಾಗ್ಯ ಯೋಜನೆಯಲ್ಲಿನ 5 ಕೆ.ಜಿ ಅಕ್ಕಿ ಬದಲಿಗೆ 3 ಕೆ.ಜಿ ಅಕ್ಕಿ ಜತೆ 2 ಕೆ.ಜಿ. ರಾಗಿ ನೀಡಲು ಆಹಾರ ಇಲಾಖೆ ಮೇಲಾಧಿಕಾರಿಗಳು ಸೂಚನೆ ನೀಡಿರುವುದೇ ವಿಳಂಬಕ್ಕೆ ಕಾರಣ ಎನ್ನಲಾಗಿದೆ.

    ಪ್ರತಿ ತಿಂಗಳು ಮೊದಲ ವಾರದಲ್ಲೇ ಎಫ್‍ ಸಿಐನಿಂದ (ಭಾರತದ ಆಹಾರ ನಿಗಮ) ಸಗಟು ಮಳಿಗೆಗಳಿಗೆ ಅಕ್ಕಿ ಎತ್ತುವಳಿ ಮಾಡಲಾಗುತ್ತದೆ. ಆನಂತರ ಸಗಟು ಮಳಿಗೆಗಳಿಂದ ಎತ್ತುವಳಿ ಮಾಡುವ ನ್ಯಾಯಬೆಲೆ ಅಂಗಡಿಗಳು ಪಡಿತರ ಚೀಟಿದಾರರಿಗೆ ಪಡಿತರ ವಿತರಿಸುತ್ತವೆ. ಸಗಟು ಮಳಿಗೆಗಳಿಂದ ನ್ಯಾಯಬೆಲೆ ಅಂಗಡಿಗಳು ಅಕ್ಕಿಯನ್ನು ಎತ್ತುವಳಿ ಮಾಡಿದ್ದು,  ಅಂಗಡಿ ಮಾಲಿಕರು ಹಿಂದೇಟು ಹಾಕುತ್ತಿದ್ದಾರೆ.

    ಕಳೆದ ಮೂರು ನಾಲ್ಕು ತಿಂಗಳಿಂದ ಪಡಿತರ ಚೀಟಿದಾರರಿಗೆ, ಆಹಾರ ಧಾನ್ಯವನ್ನು ವಿತರಣೆ ಮಾಡಿಲ್ಲ ಎಂದು ನಮ್ಮ ಮುಂದೆ ಬಂದು ಅಳಲು ತೋಡಿಕೊಂಡಿದ್ದಾರೆ. ಆದುದರಿಂದ ನಾವುಗಳು, ಅಂಗಡಿ ಮುಂದೆ ಜನರು ನಿಂತಿರುವ ಕಂಡು ಸ್ಥಳಕ್ಕೆ ಆಗಮಿಸಿ ನೋಡಿದಾಗ ಅವರು ಸಮಸ್ಯೆಗಳನ್ನು ಹೇಳಿಕೊಂಡಾಗ, ಅಂಗಡಿ ಮಾಲಿಕ ಕರೆ ಮಾಡಿದರೆ ಪ್ರತಿಕ್ರಿಯೆ ನೀಡದೇ ನಿರ್ಲಕ್ಷ್ಯ ಧೋರಣೆ ಮಾಡುತ್ತಿದ್ದಾರೆಂದು ಕಂಡು ಬಂದಿದೆ. ಈ ಸಮಸ್ಯೆಯನ್ನು ಶಾಸಕರ ಗಮನಕ್ಕೆ ತರಲಾಗಿದೆ ಎಂದು  ಪಪಂ ಸದಸ್ಯ ಶ್ರೀನಿವಾಸ ದೂರಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ

    December 28, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    December 30, 2025

    ಗುಬ್ಬಿ: ಎಂಟು ಜಿಲ್ಲೆಯ ರೈತರ ಕೆರೆಗಳಿಗೆ ನೀರು ತುಂಬಿಸಿ ರೈತರ ಜೀವಜಲವಾಗಲು ಹೊರಟಿರುವ ಎತ್ತಿನಹೊಳೆ ಯೋಜನೆ ಮುಗಿಯುವ ಹಂತದಲ್ಲಿರುವಾಗ ಅಸೂಯೆಯಿಂದ…

    ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ

    December 30, 2025

    ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಖಂಡಿಸಿ ಅಂಬೇಡ್ಕರ್ ಸೇನೆ ಪ್ರತಿಭಟನೆ

    December 30, 2025

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.