ಪಾವಗಡ: ತಾಲೂಕು ನಿಡಗಲ್ ಹೋಬಳಿ ವ್ಯಾಪ್ತಿಯಲ್ಲಿರುವ ದವಡಬೆಟ್ಟ ಗ್ರಾಮದ ತಾಂಡಾದಲ್ಲಿ ಶ್ರೀಮತಿ ಸಾಯಿ ಸುಮನ್ ಹನುಮಂತರಾಯಪ್ಪ ಅಭಿಮಾನಿಗಳ ಬಳಗದ ವತಿಯಿಂದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಪಂದ್ಯಾವಳಿಗೆ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸಾಯಿ ಸುಮನ್ ಸಮಾಜ ಸೇವೆಯ ಹಾಗೂ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ, ಅವರು ಅನೇಕ ಜನಪ್ರಿಯ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಯಾಗಿ ಸಾಯಿ ಸುಮನ್ ಹನುಮಂತರಾಯಪ್ಪ ಮಾತನಾಡಿ, ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಸರ್ಕಾರದ ವತಿಯಿಂದ ಸಹಾಯ-ಸಹಕಾರ ನೀಡುವ ಬಗ್ಗೆ ತಾಲೂಕು ಮಟ್ಟದಲ್ಲಿ ಕ್ರೀಡಾ ತರಬೇತಿ ಕೇಂದ್ರವನ್ನು ಸರ್ಕಾರ ಮಾಡಿಕೊಡಬೇಕೆಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಈ ಗ್ರಾಮದ ಮುಖಂಡರುಗಳಾದ ಹನುಮಂತರಾಯಪ್ಪ, ಈರಣ್ಣ, ನಾಗರಾಜಪ್ಪ, ಕೃಷ್ಣಪ್ಪ ನಾಯಕ್, ರಾಜಕುಮಾರ್, ಜಗನ್ನಾಥ್, ಮಾರಪ್ಪ, ಹೆಂಜಾರಪ್ಪ ಮತ್ತಿತರು ಭಾಗವಹಿಸಿದ್ದರು.
ವರದಿ: ನಂದೀಶ್, ಕೊತ್ತೂರ್ ನಿಡಗಲ್ ಹೋಬಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB