nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡ್ರೋನ್ ಕಾರ್ಯಾಚರಣೆ: ಉಪಟಳ ನೀಡುತ್ತಿದ್ದ ಕಾಡಾನೆಗಳನ್ನು ಕಾಡಿಗಟ್ಟಿದ ಅರಣ್ಯಾಧಿಕಾರಿಗಳು
    ಜಿಲ್ಲಾ ಸುದ್ದಿ July 27, 2025

    ಡ್ರೋನ್ ಕಾರ್ಯಾಚರಣೆ: ಉಪಟಳ ನೀಡುತ್ತಿದ್ದ ಕಾಡಾನೆಗಳನ್ನು ಕಾಡಿಗಟ್ಟಿದ ಅರಣ್ಯಾಧಿಕಾರಿಗಳು

    By adminJuly 27, 2025No Comments2 Mins Read
    elephant

    Provided by
    Provided by

    ಸರಗೂರು:   ತಾಲೂಕಿನಲ್ಲಿ ಫಸಲು ತಿಂದು, ನಾಶಪಡಿಸಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ಕಾಡಾನೆಗಳನ್ನು ಡ್ರೋನ್ ಕಾರ್ಯಾಚರಣೆ ಮೂಲಕ ಕಾಡಿಗಟ್ಟುವ ಕಾರ್ಯ ಆರಂಭವಾಗಿದ್ದು, ಕಾಡಾನೆಯನ್ನು  ಕಾಡಿಗೆ ಹೊರಡಿಸಲು ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

    ಕಳೆದ ಆರು ದಿನಗಳಿಂದ ನಡೆಯುತ್ತಿರುವ ಈ ಕಾರ್ಯಾಚರಣೆಯಿಂದ ಮೂರು ಕಾಡಾನೆಗಳನ್ನು ಮೊಳೆಯೂರು ವನ್ಯಜೀವಿ ವಲಯಕ್ಕೆ ಹಿಮ್ಮೆಟ್ಟಿಸಲಾಗಿದೆ. ಕಾಡಾನೆಗಳ ಹಾವಳಿ ಹೆಚ್ಚಾಗಿರುವುದನ್ನು ವಿರೋಧಿಸಿ ಗ್ರಾಮಸ್ಥರು, ರೈತರು ಮತ್ತು ಸಂಘ–ಸಂಘಗಳು ತೀವ್ರ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

    ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿಸಿಎಫ್ ನಂದೀಶ್.ಎಲ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸಿಎಫ್ ಸುಮಿತ್ರ ಎಸ್‌ರವರ ನೇತೃತ್ವದಲ್ಲಿ  ಎಲ್‌ ಟಿಎಫ್ ತಂಡ, ಇಟಿಎಫ್ ಹುಣಸೂರು ತಂಡ ಡೋನ್ ಕಾರ್ಯಾಚರಣೆ ಕೈಗೊಂಡು, ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯ ನಡೆಸಿದರು.

    ನಮ್ಮ ಕಾಡಿನ ಹತ್ತಿರ ರೈತರ ಜಮೀನುಗಳು ಇದ್ದು, ಈ ಸಮಯದಲ್ಲಿ ಕಾಡು ಪ್ರಾಣಿಗಳನ್ನು ಹಾಗೂ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಿದರೂ ಮತ್ತೆ ಮತ್ತೆ ಜಮೀನಿಗೆ ಬರುತ್ತಿವೆ. ಕಾಡಿನ ಹತ್ತಿರ ಜಮೀನಿನಲ್ಲಿ ರೈತರು ಬಾಳೆ, ಇತರೆ ಬೆಳೆಯನ್ನು ಬೆಳೆಯುತ್ತಾರೆ.  ಹೀಗಾಗಿ ಅವನ್ನು ತಿನ್ನಲು ಕಾಡಾನೆಗಳು ಪ್ರತಿದಿನ ಕಾಡು ಬಿಟ್ಟು ಜಮೀನಿಗೆ ಬರುತ್ತಿವೆ. ಇದರಿಂದ ನಾವುಗಳು ರಾತ್ರಿ ಹಗಲು ಎನ್ನದೆ ಪ್ರತಿದಿನ ಕಾಡಾನೆಗಳನ್ನು ಕಾಡಿಗೆ ಓಡಿಸಿದ್ದರೂ, ಇನ್ನೂ ಯಾವುದೋ ಕಡೆಯಿಂದ ಮತ್ತೆ ಬರುತ್ತಿವೆ. ನಾವುಗಳು ಕಾಡಾನೆ ಎಲ್ಲಿ ಬರುತ್ತೋ ಅನ್ನೋದಕ್ಕೆ ಡ್ರೋನ್ ಕ್ಯಾಮೆರಾ ಬಳಸಿಕೊಂಡು ಕಂಡು ಹಿಡಿಯಲು ಮುಂದಾಗಿದ್ದು, ಅದರಲ್ಲಿ ಮೂರು ಕಾಡಾನೆಯನ್ನು ಕಾಡಿಗೆ ಓಡಿಸಿದ್ದೇವೆ. ಇನ್ನೂ ಒಂದು ಆನೆಯನ್ನು ಇಂದು ನಾಳೆ ಹೊರಡಿಸಲಾಗುವುದು ಎಂದು ಎಸಿಎಫ್ ಸುಮೀತ್ರ ಎಸ್  ತಿಳಿಸಿದರು.


    Provided by
    Provided by

    ಕಾಡಂಚಿನ ಭಾಗದಲ್ಲಿ ರೈತರ ಜಮೀನು ಇರುವುದರಿಂದ ಬಾಳೆ ತೋಟವನ್ನು ಮಾಡಲು ಮುಂದಾಗುತ್ತಾರೆ, ಇದನ್ನು ಕಾಡಾನೆ ನಾಶ ಮಾಡುತ್ತಿದೆ. ಹಾಗಾಗಿ ಬಾಳೆ ತೋಟ ಬಿಟ್ಟು ಬೇರೆ ಬೆಳೆಯನ್ನು ಮುಂದಾಗಿ ಎಂದು ರೈತರಿಗೆ ಸಲಹೆ ನೀಡಿದರು.

    ನಿರಂತರವಾಗಿ ಸುರಿಯುವ ಮಳೆಯನ್ನು ಲೆಕ್ಕಿಸದೆ ಈಗಾಗಲೇ 3 ಕಾಡಾನೆಗಳನ್ನು ಮೊಳೆಯೂರು ವನ್ಯಜೀವಿ ವಲಯಕ್ಕೆ ಹಿಮ್ಮೆಟ್ಟಿಸಲಾಗಿದೆ. ಪ್ರತಿದಿನ ರಾತ್ರಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸಾರ್ವಜನಿಕರು ಕಾಡಾನೆ ಕಂಡು ಬಂದರೆ ಭಯಪಡದೆ ತಕ್ಷಣ ಅರಣ್ಯ ಇಲಾಖೆಗೆ ತಿಳಿಸಿದರೆ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯ ಮಾಡಲಾಗುತ್ತದೆ ಎಂದು ಸರಗೂರು ವಲಯದ ಆರ್‌ ಎಫ್‌ ಓ ಮಹಾಲಕ್ಷ್ಮಿ ತಿಳಿಸಿದ್ದಾರೆ.

    ಸರಗೂರು ವಲಯದ ಆರ್‌ ಎಫ್‌ ಓ ಮಹಾಲಕ್ಷ್ಮಿ, ನಂಜನಗೂಡು ವಲಯದ ಆರ್‌ ಎಫ್‌ ಓ ನಿತೀನ್ ಮತ್ತು ನುಗು ವಲಯದ ಆರ್‌ ಎಫ್‌ ಓ ವಿವೇಕ್ ಜೊತೆಯಲ್ಲಿ ಸರಗೂರು ವಲಯದ ಎಲ್ಲಾ ಡಿಆರ್‌ಎಫ್‌ ಓ ಅಕ್ಷಯ್ ,ಹಾಗೂ ಸಿಬ್ಬಂದಿಗಳು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.