nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ

    December 31, 2025

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
    • ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
    • ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ
    • ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
    • ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
    • ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
    • ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
    • ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಕರು ಮನೆ–ಮನೆಗಳಲ್ಲಿ ಬೇಡುವ ಪರಿಸ್ಥಿತಿ ವಿಷಾದನೀಯ: ಶ್ರೀ ಹನುಮಂತನಾಥ ಸ್ವಾಮೀಜಿ
    ಕೊರಟಗೆರೆ August 12, 2025

    ಶಿಕ್ಷಕರು ಮನೆ–ಮನೆಗಳಲ್ಲಿ ಬೇಡುವ ಪರಿಸ್ಥಿತಿ ವಿಷಾದನೀಯ: ಶ್ರೀ ಹನುಮಂತನಾಥ ಸ್ವಾಮೀಜಿ

    By adminAugust 12, 2025No Comments2 Mins Read
    koratagere

    ಕೊರಟಗೆರೆ: ರಾಜ್ಯದ ಬಹುತೇಕ ಕಡೆಗಳಲ್ಲಿ ನಮ್ಮ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುತ್ತಿವೆ, ಈ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವಂತಹ ಶಿಕ್ಷಕರು ಗ್ರಾಮಗಳಲ್ಲಿ ಮನೆ –ಮನೆಗೆ ತೆರಳಿ ಮಕ್ಕಳನ್ನು ಶಾಲೆಗೆ ಬನ್ನಿ ಎಂದು ಬೇಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದ್ದು ವಿಷಾದನೀಯ ಎಂದು ಎಲೆರಾಂಪುರ ಕುಂಚಿಟಿಗರ ಮಹಾಸಂಸ್ಥಾನ ಮಠದ ಪೀಠಾದ್ಯಕ್ಷ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ತಿಳಿಸಿದರು.

    ಅವರು ತಾಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಸಮುದಾಯ ಭವನದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ತಾಲೂಕಿನ ೪೪ ಪ್ರೌಢಶಾಲೆಗಳ ಎಸ್.ಎಸ್.ಎಲ್.ಸಿ ಮತ್ತು ೧೧ ಪಿಯು ಕಾಲೇಜುಗಳ ೨೦೨೪–೨೫ ನೇ ಸಾಲಿನ ಪರೀಕ್ಷೇಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿವ್ಯ ಸಾನಿದ್ಯವಹಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದರೆ ತಮ್ಮ ಕರ್ತವ್ಯ ಮುಗಿಯಿತು ಎಂದು ಕೊಂಡಿದ್ದಾರೆ ಇದು ಸರಿಯಲ್ಲ ಇಂದು ಮಕ್ಕಳು ಕೇವಲ ೧೦ ನೇ ತರಗತಿಯ ವರೆಗೆ ಪೋಷಕರ ಮತ್ತು ಶಿಕ್ಷರ ಹಿಡಿತದಲ್ಲಿ ಮಕ್ಕಳು ಇರುತ್ತಾರೆ ನಂತರ ಅವರ ದಿಕ್ಕು ಬದಲಾಗುತ್ತದೆ, ಇಲ್ಲಿ ಮಕ್ಕಳನನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕಿದೆ ಹಾಗೂ ಸರ್ಕಾರಿ ಶಾಲೆಯ ಮಕ್ಕಳಿಗೆ ಎಲ್ಲಾ ತರದ ಸವಲತ್ತುಗಳು ನೀಡುತ್ತಿದ್ದು ಶಿಕ್ಷಕರನ್ನು ಬೋದನೆ ಮಾಡೆಲು ಬಿಡದೆ ಅನೇಕ ಕೆಲಸಗಳನ್ನು ವಹಿಸುತ್ತದೆ ಇದು ತಪ್ಪಬೇಕು ಶಿಕ್ಷಕರಿಗೆ ಕೆವಲ ಶಿಕ್ಷಣ ಬೋದನೆಗೆ ಮಾತ್ರ ಸೀಮಿತಗೊಳ್ಳುವಂತೆ ಮಾಡಬೇಕು ಎಂದರು.


    Provided by
    Provided by

    ಗೊರವನಹಳ್ಳಿ ಶ್ರೀ ಮಾಹಾಲಕ್ಷ್ಮಿ ಕ್ಷೇತ್ರವು ಧಾರ್ಮಿಕ, ಶೈಕ್ಷಣಿಕ ಮತ್ತು ಆದ್ಯಾತ್ಮಿಕ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿದೆ ವಿಶೇಷವಾಗಿ ಶೈಕ್ಷಣಿಕವಾಗಿ ಶ್ರೀ ಕ್ಷೇತ್ರದಲ್ಲಿ ನಡೆಸುತ್ತಿರುವಂತೆ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ, ಈ ಸೇವೆ ಇದೇ ರೀತಿ ಮುಂದುವರಿಯಲಿ ಎಂದು ಶ್ರೀಗಳು ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಶಿಕ್ಷಕರು ಮಾನವೀಯ ಮೌಲ್ಯಗಳನ್ನು ಬೆಳಸಿಕೊಳ್ಳುವ ಹಾಗೂ ನಮ್ಮ ಭಾರತೀಯ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿಗಳನ್ನು ಹಾಗೂ ವಿದ್ಯೆ ಕಲಿಸಿದ ಗುರುಗಳನ್ನು ಪೂಜ್ಯ ಭಾವದಿಂದ ನೋಡುವ ಸಂಸ್ಕಾರ ಕಲಿಸಬೇಕು ಎಂದು ತಿಳಿಸಿದರು.

    ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಮಾಧವರೆಡ್ಡಿ ಮಾತನಾಡಿ, ಪ್ರತಿಯೊಬ್ಬರಿಗೂ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸುವ ಸಾಮರ್ಥೈ ಇರುತ್ತದೆ ಅದರೆ ಎಲ್ಲರೂ ಅಂಕ ಗಳಿಸುವುದಿಲ್ಲ ೧೦ನೇ ತರಗತಿಯಲ್ಲಿ ಹೆಚ್ಚಿನ ಅಂಕ ಪಡೆದು ಪ್ರತಿಭಾ ಪುರಸ್ಕಾರ ಪಡೆದರೆ ಸಾಲದು ಇದು ನಿಮ್ಮ ಮುಂದಿನ ಭವಿಷ್ಯ ವಿದ್ಯಾಬ್ಯಾಸಕ್ಕೆ ಎಚ್ಚರಿಕೆಯ ಗಂಟೆ ಪಿಯು ಮತ್ತು ಪದವಿ ಪದವಿ ತಗತಿಳಲ್ಲಿ ಇನ್ನು ಹೆಚ್ಚಿನ ಅಂಕಪಡೆಯುವ ಮನೋಭಾವ ನಿಮ್ಮಲ್ಲಿ ಮೂಡಬೇಕು ಜವಾಬ್ದಾರಿಯಿಂದ ವಿದ್ಯಾಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದ ಅವರು ವಿದ್ಯಾರ್ಥಿಗಳು ಸಂಪತ್ತಿಗಿಂತ ಜ್ಞಾನಕ್ಕೆ ಆದ್ಯತೆ ನೀಡಿ ಸಾಧಕರ ಸಾಲಿನಲಿ ನಿಲ್ಲಬೇಕು ಎಂದು ಸಲಹೆ ನೀಡಿದರು.

    ಗೊರವನಹಳ್ಳಿ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಾಸುದೇವ್ ಮಾತನಾಡಿ, ನಮ್ಮ ಟ್ರಸ್ಟ್ ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತವಾಗದೆ ಕಳೆದ ೨೫ ವರ್ಷಗಳಿಂದ ಸಾಮಾಜಿಕ ಕಳಕಳಿಯಿಂದ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಮಾಜಮುಖಿ ಕೆಲಸಗಳಲ್ಲಿ ತೊಡಗಲಿದೆ ಎಂದ ಅವರು ತಾಲೂಕಿನ ೪೪ ಪ್ರೌಢ ಶಾಲೆಗಳಲ್ಲಿ ಮತ್ತು ೧೧ ಪಿಯು ಕಾಲೇಜುಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳನ್ನು ಅಬಿನಂದಿಸಲಾಗುತ್ತಿದ ಎಂದರು.

    ಕಾರ್ಯಕ್ರಮದಲ್ಲಿ ಮಹಾಲಕ್ಷ್ಮೀ ಶಾಲೆಯ ಮುಖ್ಯ ಶಿಕ್ಷಕ ಸೋಮಶೇಖರ್  ಪ್ರಾಸ್ತಾವಿಕ ನುಡಿಗಳನ್ನಾಡಿದರೆ, ವೇದಿಕೆಯಲ್ಲಿ ಉಪನ್ಯಾಸಕ ಮುದ್ದುವೀರಪ್ಪ, ಟ್ರಸ್ಟ್ ನ ಕಾರ್ಯದರ್ಶಿ ಮುರಳೀಕೃಷ್ಣ, ಖಜಾಂಚಿ ಜಗದೀಶ್, ಧರ್ಮದರ್ಶಿಗಳಾದ ಶ್ರೀಪ್ರಸಾದ್, ರವಿರಾಜ್ ಅರಸ್, ಚಿಕ್ಕನರಸಪ್ಪ, ನರಸರಾಜು, ಡಾ.ಲಕ್ಷ್ಮಿಕಾಂತ್, ಎನ್.ಜಿ.ನಾಗರಾಜು, ಓಂಕಾರೇಶ್ವರ್, ಮಂಜುನಾಥ್, ಬಾಲಕೃಷ್ಣ, ಟ್ರಸ್ಟ್ ನ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್, ವಿಶೇಷಾಧಿಕಾರಿ ಕೇಶವಮೂರ್ತಿ, ಶಿಕ್ಷಣ ಇಲಾಖೆಯ ಬಿ.ಆರ್.ಸಿ.ರುದ್ರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ

    December 31, 2025

    ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ ಮಧುಗಿರಿಯಿಂದ ಕೇಳಿಬರುವ ಏಕತೆಯ ಮೌನ ಸಂದೇಶ ಧರ್ಮವು ಮಾನವನನ್ನು ಒಗ್ಗೂಡಿಸಬೇಕಾದ ಶಕ್ತಿಯಾಗಬೇಕಾದರೆ, ಅದು…

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025

    ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.

    December 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.