ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅದ್ದೂರಿಯಾಗಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಗೃಹರಕ್ಷಣದಳ, ಎನ್.ಸಿ.ಸಿ. ಸೇರಿದಂತೆ ವಿವಿಧ ಶಾಲಾ ತುಕ್ಕಡಿಗಳಿಂದ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಅವರು, ಭಾರತ ದೇಶವು ಬ್ರಿಟೀಷ್ ಸಾಮ್ರಾಜ್ಯದಿಂದ ಸ್ವಾತಂತ್ರ್ಯಗೊಂಡು ಇಂದಿಗೆ 78 ವರ್ಷಗಳು ಮುಗಿದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಮ್ಮ ಮಾತೃ ಭೂಮಿಯಾಗಿರುವ ಭಾರತ ದೇಶ ಪುರಾತನವಾದ ಧರ್ಮ ನಾಗರಿಕತೆ, ಸಂಸ್ಕೃತಿ ಮೌಲ್ಯಗಳಿಂದ ಶ್ರೀಮಂತವಾಗಿದೆ. ಋಷಿ ಮುನಿಗಳ, ರಾಜ ಮಹಾರಾಜರ, ಸಾಹಿತಿ — ಕವಿಗಳು, ಶಿಕ್ಷಣ ತಜ್ಞರ, ರೈತರ — ಯುವಕರ ಸ್ವಾತಂತ್ರ್ಯ ಹೋರಾಟಗಾರರಿಂದ ತುಂಬಿ ಸಮೃದ್ಧವಾಗಿದ್ದ ದೇಶವಿದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಕೆ.ಷಡಕ್ಷರಿ ಮಾತನಾಡಿ, ಹಲವಾರು ಮಹನೀಯರ ಹೋರಾಟ, ತ್ಯಾಗ ಬಲಿದಾನದಿಂದ ದೊರೆತ ಭವ್ಯಭಾರತದ ಸ್ವಾತಂತ್ರ್ಯವನ್ನ ಕಾಪಾಡ ಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ನಾವು ಆಘಾತಕಾರಿ ಬೆಳವಣಿಗೆಗಳನ್ನಕಾಣುತ್ತಿದ್ದೇವೆ, ಜವಾಹರಲಾಲ್ ನೆಹರು ಆದಿಯಾಗಿ ಹಲವಾರು ಮಹನೀಯರು ರಾಷ್ಟ್ರೀಕೃತ ಸಂಘ ಸಂಸ್ಥೆಗಳನ್ನ ಕಟ್ಟಿಬೆಳೆಸಿದರು ಆದರೆ ಎಲ್ಲ ಸ್ವಾಯುಕ್ತ ಸಂಸ್ಥೆಗಳನ್ನ ಖಾಸಗೀಕರಣ ಮಾಡುತ್ತಿರುವುದು. ವಿಷಾದನೀಯ, ಸ್ವತಂತ್ರ್ಯದ ಮೌಲ್ಯಗಳು ಹಾಗೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಬಲಿದಾನಗಳ ಮಹತ್ವವನ್ನ ಯುವಪೀಳಿಗೆ ತಿಳಿದುಕೊಳ್ಳಬೇಕು. ನಮ್ಮ ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದ್ದೇನೆ. ಕ್ಷೇತ್ರವನ್ನ ಸಮಗ್ರವಾಗಿ ಅಭಿವೃದ್ದಿ ಪಡಿಸಬೇಕು, ಎನ್ನುವ ದೃಷ್ಠಿಯಿಂದ ಹಲವಾರು ಯೋಜನೆಗಳನ್ನ ಹಾಕಿಕೊಂಡಿದ್ದು, ನಗರದ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸೇರಿದಂತೆ, ಎಲ್ಲಾ ಯೋಜನೆಗಳನ್ನ ಪೂರ್ಣಗೊಳಿಸುತ್ತೇನೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಸೀಶೀಲ್ದಾರ್ ಮೋಹನ್ ಕುಮಾರ್, ಇಒ ಸುದರ್ಶನ್, ಡಿವೈಎಸ್ಪಿ ಯಶ್ ಕುಮಾರ್ ಶರ್ಮ, ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್, ಉಪಾಧ್ಯಕ್ಷೆ ಮೇಘಶ್ರೀ ಭೂಚಣ್, ಪೌರಾಯುಕ್ತ ವಿಶ್ವೇಶ್ವರಯ್ಯ ಬದರಗಡೆ, ಗ್ರೇಡ್ 2ತಹಶೀಲ್ದಾರ್ ಜಗನ್ನಾಥ್ ಮುಂತಾದವರು ಉಪಸ್ಥಿತರಿದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC