nammatumakuru

    Subscribe to Updates

    Get the latest creative news from FooBar about art, design and business.

    What's Hot

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026
    Facebook Twitter Instagram
    ಟ್ರೆಂಡಿಂಗ್
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ದೂರುಗಳ ಸುರಿಮಳೆ
    ಜಿಲ್ಲಾ ಸುದ್ದಿ August 21, 2025

    ಸರಗೂರು: ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ದೂರುಗಳ ಸುರಿಮಳೆ

    By adminAugust 21, 2025No Comments3 Mins Read

    ಸರಗೂರು: ಪಟ್ಟಣದ ನಾಲ್ಕನೇ ವಾರ್ಡಿನಲ್ಲಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಸಮುದಾಯದ ಭವನದಲ್ಲಿ ಬುಧವಾರ ಲೋಕಾಯುಕ್ತ ಪೊಲೀಸರಿಂದ ಆಯೋಜಿಸಿದ್ದ ಸಾರ್ವಜನಿಕ ಕುಂದು ಕೊರತೆಗಳ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕಳೆದ ಸಭೆಯಲ್ಲಿ ಪಡೆದ ಅರ್ಜಿಗಳಿಗೆ ಕೈಗೊಂಡ ಕ್ರಮದ ಬಗ್ಗೆ ತಿಳಿಸುವಂತೆ ಒತ್ತಾಯಿಸಿ ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು.

    ಕಂದಾಯ ಇಲಾಖೆ, ಗ್ರಾಪಂಗಳ ವಿರುದ್ಧ ಸಾರ್ವಜನಿಕರು ಹಾಗೂ ರೈತರಿಂದ ಸಾಲು ಸಾಲು ದೂರುಗಳ ಸುರಿಮಳೆಯಾಗಿದೆ.  ನಂತರ ಸಭೆ ಪ್ರಾರಂಭವಾಗಿ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರು ಸ್ವೀಕಾರ ಮಾಡಲಾಯಿತು.

    ಮನುಗನಹಳ್ಳಿ ಗ್ರಾ.ಪಂ. ಲಂಕೆ ರಮೇಶ್ ಮಾತನಾಡಿ ನಮ್ಮ ದೊಡ್ಡಪ್ಪನ ಹೆಸರಿನಲ್ಲಿ ಜಮೀನು ಇದೆ. ಅದರೆ ಅದನ್ನು ಬೇರೆಯವರಿಗೆ ಮಾಡಿದ್ದಾರೆ ಎಂದು ಆರೋಪಿಸಿದರು. ಕಳೆದ ಸಭೆಯಲ್ಲಿ ಈ ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರೂ ಯಾವುದೇ ಕಂದಾಯ ಇಲಾಖೆ ಬಂದಿಲ್ಲ ಎಂದರು.

    ಪೌತಿಖಾತೆ ಮಾಡಲು ಹಾಗೂ ನೆಮ್ಮದಿ ಕೇಂದ್ರದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಹಣವನ್ನು ಪಡೆಯಲಾಗುತ್ತಿದೆ. ಸ್ವಾಧೀನದಲ್ಲಿದ್ದು 53 ಮತ್ತು 57 ಅರ್ಜಿ ಸಲ್ಲಿಸಿದ್ದರೂ ಸಹ ಸಾಗುವಳಿ ಚೀಟಿ ವಿತರಣೆ ಮಾಡಿಲ್ಲ ಎಂದು ದೂರಿದರು.

    ದಲಿತ ಮುಖಂಡ ಮಾತನಾಡಿ, ಶ್ರೀನಿವಾಸ ಸರಗೂರು ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಚಗೊಳಿಸಿಲ್ಲ. ಎಂ.ಸಿ.ತಳಲು ನುಗು ನದಿಯಿಂದ ಯಶವಂತಪುರ ಗ್ರಾಮದವರೆಗೆ ನಿರ್ಮಾಣವಾಗಿರುವ ಸಣ್ಣ ಏತ ನೀರಾವರಿ ಯೋಜನೆ ಹಾಗೂ ಬಾಲನಕಟ್ಟೆ, ಗೂಡುಕಟ್ಟೆ, ಹಾಗೂ ಎಂ.ಸಿ.ತಳಲು ಕೆರೆ ಅಭಿವೃದ್ಧಿ ಪಡಿಸಿ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪೂರ್ಣಗೊಂಡಿಲ್ಲ ಕಳಪೆಯಾಗಿರುತ್ತದೆ. ಅಧಿಕಾರಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ ಇದರಿಂದ ಸರ್ಕಾರದ ಅನುದಾನ ನಷ್ಟವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಿ ಯೋಜನೆಯನ್ನು ಅನುಷ್ಠಾನ ಮಾಡಬೇಕು ಎಂದರು.

    ಹಾದನೂರು ಗ್ರಾ.ಪಂ. ಸದಸ್ಯ ಯಶವಂತಪುರ ಶಿವಲಿಂಗಯ್ಯ ಮಾತನಾಡಿ, ಯಶವಂತಪುರ ಗ್ರಾಮದ ಜಂಜರು ಸಂಖ್ಯೆ 25, 26/1, 66/1, 99 ರ ಸರ್ಕಾರಿ ಖಾಲಿ ನಿವೇಶನಗಳು ಅಕ್ರಮವಾಗಿ ಒತ್ತುವರಿಯಾಗಿವೆ. ಅವುಗಳ ರಕ್ಷಣೆ ಮಾಡಲು ಸಿಡಿಪಿಓ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪಿಡಿಓರವರು ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ಸರ್ಕಾರಿ ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಮಾಡಲು ಸೂಕ್ತ ಖಾಲಿ ನಿವೇಶನವನ್ನು ಗುರುತಿಸಬೇಕು. ಎಲ್ಲಾ ಸರ್ಕಾರಿ ಖಾಲಿ ನಿವೇಶನಗಳನ್ನು ಗುರುತಿಸಿ ನಾಮಫಲಕ ಅಳವಡಿಸಬೇಕು. ನೂತನ ಕಂದಾಯ ಗ್ರಾಮದಲ್ಲಿ ವಾಸಿಸುತ್ತಿರುವ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿಲ್ಲ. ಚರಂಡಿ ನಿರ್ಮಾಣ ಮಾಡಲು ಅಡ್ಡಿಪಡಿಸುತಿದ್ದಾರೆ ಎಂದು ದೂರಿದರು.

    ಮಹೇಶ್ ಮಾತನಾಡಿ, ಸರಗೂರು ಅಂಚೆ ಕಛೇರಿಯಲ್ಲಿ ಖಾತೆದಾರರಿಗೆ ಸುಮಾರು ಒಂದೂವರೆ ಕೋಟಿಯಷ್ಟು ಹಣ ವಂಚನೆ ಮಾಡಿದ್ದಾರೆ ಎಂದರು.

    ದಸಂಸ (ಅಂಬೇಡ್ಕರ್ ವಾದ) ಸಂಘಟನೆ ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು ಹಾಗೂ ಸೀರಮ್ಮ ಮಾತನಾಡಿ ಗಿರಿಜನ ಆಶ್ರಮ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮಕ್ಕೆ ಅವಕಾಶ ಕಲ್ಪಿಸುತ್ತಿಲ್ಲ. ಎಸ್ಸಿ.ಎಸ್ಟಿ ಸಭೆಗಳಿಗೆ ಆಹ್ವಾನಿಸುತ್ತಿಲ್ಲ. ತಾಲ್ಲೋಕಿನಾಧ್ಯಂತ ಹಾಡಿಗಳಲ್ಲಿ ಕಳಪೆ ಕಾಮಗಾರಿಗಳ ಹಾವಳಿ ಹೆಚ್ಚಾಗುತ್ತಿದೆ. ಬಾಲ್ಯ ವಿವಾಹದ ಬಗ್ಗೆ ಅರಿವಿಲ್ಲ. ನಮ್ಮ ಹಾಡಿಜನರು ಇದರಿಂದಾಗಿ ಹೆಚ್ಚು ಜೈಲು ಪಾಲಾಗುತ್ತಿದ್ದಾರೆ ಈ ವಿಚಾರವಾಗಿ ಹಾಡಿಗಳಲ್ಲಿ ಅರಿವು ಮೂಡಿಸಬೇಕಿದೆ ಎಂದು ಆದಿವಾಸಿಗಳು ದೂರು ಸಲ್ಲಿಸಿದರು.

    ಮಂಜುನಾಥ ಮಾತನಾಡಿ ಪೋಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು ಹಳ್ಳಿಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ಮಾಡಲು ಸಹಕರಿಸುತ್ತಿದ್ದಾರೆ. ದೂರು ಸಲ್ಲಿಸಿದರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಯಾವುದೇ ದೂರು ದಾಖಲಿಸದೆ ಹಣದ ಆಮಿಷಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಹಳ್ಳಿಗಳಲ್ಲಿ ಯುವಜನರು ಮಹಿಳೆಯರು ಕುಡಿತದ ದಾಸರಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು.

    ನಂತರ ಲೋಕಾಯುಕ್ತ ಡಿಎಸ್ಪಿ ರವಿಕುಮಾರ್ ರವರು ಮಾತನಾಡಿ ಒಟ್ಟು 46 ದೂರುಗಳು ಬಂದಿವೆ. ಈ ಎಲ್ಲಾ ದೂರುಗಳಿಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳು ಜವಾಬ್ದಾರಿ ವಹಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ಕ್ರಮಕೈಗೊಂಡು ವರದಿ ಮಾಡಬೇಕು, ಯಾವ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಪಡೆದುಕೊಂಡಲ್ಲಿ ತಮ್ಮ ಮೇಲೆ ಮೇಲಾಧಿಕಾರಿಗಳಿಗೆ ವರದಿ ಮಾಡಿ ಕಾನೂನಾತ್ಮಕ ಶಿಕ್ಷೆಗೆ ಗುರಿಪಡಿಸಬೇಕಾಗುತ್ತದೆ ಎಂದು ತಿಳಿಸಿದರು.

    ಸಭೆಯ ಅಧ್ಯಕ್ಷತೆಯನ್ನು ತಾಲ್ಲೂಕು ತಹಶೀಲ್ದಾರ್ ಮೋಹನ್ ಕುಮಾರಿ, ಲೋಕಾಯುಕ್ತ ಅಧಿಕಾರಿಗಳಾದ ವೆಂಕಟೇಶ್, ಡಿಎಸ್ಪಿ. ರವಿಕುಮಾರ್, ಇನ್ಸ್ಪೆಕ್ಟರ್, ಸರಗೂರು ಸರ್ಕಲ್ ಇನ್ಸ್ಪೆಕ್ಟರ್ ಪ್ರಸನ್ನಕುಮಾರ್, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವಣ್ಣ, ಡಿಎಸ್ ಎಸ್ ಅನುಷಾ, ಗೋವಿಂದ ಕುಡುಗಿ, ಮುಖಂಡರಾದ ಮಲ್ಲೇಶ್, ಇಟ್ನ ರಾಜಣ್ಣ, ಲಕ್ಷಣ್, ಬಿಲ್ಲಯ್ಯ, ನಾಗರಾಜು ಉಯ್ಯಂಬಳ್ಳಿ, ಕೆಂಡಗಣ್ಣಸ್ವಾಮಿ, ಗ್ರಾಮೀಣಾ ಮಹೇಶ್, ಸಣ್ಣಸ್ವಾಮಿ, ಸೋಮಣ್ಣ, ಚಿನ್ನಯ್ಯ, ಶ್ರೀನಿವಾಸ್, ವಾಲ್ಮೀಕಿ ಸಿದ್ದರಾಜು, ಪ್ರಭಾಕರ್, ರೈತ ಮುಖಂಡ ನಂದೀಶ ಬರಗಿ, ನವೀನ್, ಸರಗೂರು ಕೃಷ್ಣ, ಚನ್ನಾಯಕ, ಮಹಲಿಂಗ, ಸಾರ್ವಜನಿಕರೊಂದಿಗೆ ಇತರರು ಭಾಗವಹಿಸಿದ್ದರು. ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    July 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ತಿಪಟೂರು: ಕೇವಲ 9.50 (ಒಂಭತ್ತುವರೆ) ರೂಪಾಯಿಗೋಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಎಸ್ಬಿಐ ವ್ಯವಸ್ಥಾಪಕರು ರೈತನಿಗೆ ನೋಟಿಸ್ ನೀಡಿ,…

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.